ಚಾಮರಾಜನಗರ: ಕಾಣೆಯಾಗಿದ್ದ ಸ್ವಾಮೀಜಿ ಶವವಾಗಿ ಪತ್ತೆಯಾಗಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲದ ವೆಸ್ಲಿ ಸೇತುವೆ ಸಮೀಪ ನಡೆದಿದೆ. ಹನೂರು ತಾಲೂಕಿನ ಪಿ ಜಿ ಪಾಳ್ಯ ಗ್ರಾಮದಲ್ಲಿರುವ ಹೊಸ ಮಠದ ರಾಜಶೇಖರ ಸ್ವಾಮೀಜಿ (70) ಮೃತ ದುರ್ದೈವಿ. ಇಂದು ಕಾವೇರಿ ನದಿ ತೀರದಲ್ಲಿ ಅಪರಿಚಿತ ಮೃತದೇಹ ದೊರೆತಿದೆ ಎಂಬ ಮಾಹಿತಿ ಮೇರೆಗೆ ಕೊಳ್ಳೇಗಾಲ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಮೃತ ದೇಹವನ್ನು ನೀರಿನಿಂದ ಮೇಲಕ್ಕೆ ಎತ್ತಿಸಿದ ಬಳಿಕ ಸ್ವಾಮೀಜಿ ಮೃತಪಟ್ಟಿರುವುದು ಗೊತ್ತಾಗಿದೆ.
ಕೊಳ್ಳೇಗಾಲದ ಕಡೆ ಹೋಗಿ ಬರುತ್ತೇನೆಂದು ಹೋದವರು ಮಠಕ್ಕೆ ಹಿಂದಿರುಗಿರಲಿಲ್ಲ ಎಂದು ಸ್ವಾಮೀಜಿ ಸಹೋದರ ಪ್ರಕಾಶ್ ಎಂಬುವರು ದೂರು ಕೊಟ್ಟಿದ್ದು, ಅದರಲ್ಲಿ ಸ್ವಾಮೀಜಿ ಅನಾರೋಗ್ಯ ಪೀಡಿತರಾಗಿದ್ದರು ಹಾಗೂ ಹೊಟ್ಟೆನೋವಿನಿಂದಲೂ ಬಳಲುತ್ತಿದ್ದರು. ಜ.17 ರಂದು ಕೊಳ್ಳೇಗಾಲದ ಕಡೆ ಹೋಗಿ ಬರುತ್ತೇನೆಂದು ಹೋದವರು ಮಠಕ್ಕೆ ಹಿಂದಿರುಗಿರಲಿಲ್ಲ. ಎಲ್ಲ ಕಡೆ ಹುಡುಕಿದರೂ ಸಿಕ್ಕಿರಲಿಲ್ಲ.
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…