ಚಾಮರಾಜನಗರ: ಕಾಣೆಯಾಗಿದ್ದ ಸ್ವಾಮೀಜಿ ಶವವಾಗಿ ಪತ್ತೆಯಾಗಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲದ ವೆಸ್ಲಿ ಸೇತುವೆ ಸಮೀಪ ನಡೆದಿದೆ. ಹನೂರು ತಾಲೂಕಿನ ಪಿ ಜಿ ಪಾಳ್ಯ ಗ್ರಾಮದಲ್ಲಿರುವ ಹೊಸ ಮಠದ ರಾಜಶೇಖರ ಸ್ವಾಮೀಜಿ (70) ಮೃತ ದುರ್ದೈವಿ. ಇಂದು ಕಾವೇರಿ ನದಿ ತೀರದಲ್ಲಿ ಅಪರಿಚಿತ ಮೃತದೇಹ ದೊರೆತಿದೆ ಎಂಬ ಮಾಹಿತಿ ಮೇರೆಗೆ ಕೊಳ್ಳೇಗಾಲ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಮೃತ ದೇಹವನ್ನು ನೀರಿನಿಂದ ಮೇಲಕ್ಕೆ ಎತ್ತಿಸಿದ ಬಳಿಕ ಸ್ವಾಮೀಜಿ ಮೃತಪಟ್ಟಿರುವುದು ಗೊತ್ತಾಗಿದೆ.
ಕೊಳ್ಳೇಗಾಲದ ಕಡೆ ಹೋಗಿ ಬರುತ್ತೇನೆಂದು ಹೋದವರು ಮಠಕ್ಕೆ ಹಿಂದಿರುಗಿರಲಿಲ್ಲ ಎಂದು ಸ್ವಾಮೀಜಿ ಸಹೋದರ ಪ್ರಕಾಶ್ ಎಂಬುವರು ದೂರು ಕೊಟ್ಟಿದ್ದು, ಅದರಲ್ಲಿ ಸ್ವಾಮೀಜಿ ಅನಾರೋಗ್ಯ ಪೀಡಿತರಾಗಿದ್ದರು ಹಾಗೂ ಹೊಟ್ಟೆನೋವಿನಿಂದಲೂ ಬಳಲುತ್ತಿದ್ದರು. ಜ.17 ರಂದು ಕೊಳ್ಳೇಗಾಲದ ಕಡೆ ಹೋಗಿ ಬರುತ್ತೇನೆಂದು ಹೋದವರು ಮಠಕ್ಕೆ ಹಿಂದಿರುಗಿರಲಿಲ್ಲ. ಎಲ್ಲ ಕಡೆ ಹುಡುಕಿದರೂ ಸಿಕ್ಕಿರಲಿಲ್ಲ.
ಸಿರಿ ಮೈಸೂರು ಇದು ಬೇಸಿಗೆ ಕಾಲ. ಕೆಲ ದಿನಗಳ ಹಿಂದಷ್ಟೇ ಫ್ರಾನ್ಸ್ನಲ್ಲಿ ಕ್ಯಾನ್ಸ್ ಫಿಲಂ ಫೆಸ್ಟಿವಲ್ ನಡೆಯಿತು. ಜಗತ್ತಿನಾದ್ಯಂತದಿಂದ ಸುರಸುಂದರ…
ವಿಕ್ರಮ್ ಹತ್ವಾರ್ ಮೊನ್ನೆ ತಮಿಳುನಾಡಿನಲ್ಲಿ ಸಿನಿಮಾ ನಟ ವಿಜಯ್ ಚುನಾವಣೆಯಲ್ಲಿ ಸಾಧಿಸಿದ ಗೆಲುವಿನ ಕುರಿತು ಅಲ್ಲಿ ಯಾವೆಲ್ಲ ಸಂಗತಿಗಳು ಪ್ರಭಾವ…
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…
ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…