ಚಾಮರಾಜನಗರ: ಕಾಣೆಯಾಗಿದ್ದ ಸ್ವಾಮೀಜಿ ಶವವಾಗಿ ಪತ್ತೆಯಾಗಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲದ ವೆಸ್ಲಿ ಸೇತುವೆ ಸಮೀಪ ನಡೆದಿದೆ. ಹನೂರು ತಾಲೂಕಿನ ಪಿ ಜಿ ಪಾಳ್ಯ ಗ್ರಾಮದಲ್ಲಿರುವ ಹೊಸ ಮಠದ ರಾಜಶೇಖರ ಸ್ವಾಮೀಜಿ (70) ಮೃತ ದುರ್ದೈವಿ. ಇಂದು ಕಾವೇರಿ ನದಿ ತೀರದಲ್ಲಿ ಅಪರಿಚಿತ ಮೃತದೇಹ ದೊರೆತಿದೆ ಎಂಬ ಮಾಹಿತಿ ಮೇರೆಗೆ ಕೊಳ್ಳೇಗಾಲ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಮೃತ ದೇಹವನ್ನು ನೀರಿನಿಂದ ಮೇಲಕ್ಕೆ ಎತ್ತಿಸಿದ ಬಳಿಕ ಸ್ವಾಮೀಜಿ ಮೃತಪಟ್ಟಿರುವುದು ಗೊತ್ತಾಗಿದೆ.
ಕೊಳ್ಳೇಗಾಲದ ಕಡೆ ಹೋಗಿ ಬರುತ್ತೇನೆಂದು ಹೋದವರು ಮಠಕ್ಕೆ ಹಿಂದಿರುಗಿರಲಿಲ್ಲ ಎಂದು ಸ್ವಾಮೀಜಿ ಸಹೋದರ ಪ್ರಕಾಶ್ ಎಂಬುವರು ದೂರು ಕೊಟ್ಟಿದ್ದು, ಅದರಲ್ಲಿ ಸ್ವಾಮೀಜಿ ಅನಾರೋಗ್ಯ ಪೀಡಿತರಾಗಿದ್ದರು ಹಾಗೂ ಹೊಟ್ಟೆನೋವಿನಿಂದಲೂ ಬಳಲುತ್ತಿದ್ದರು. ಜ.17 ರಂದು ಕೊಳ್ಳೇಗಾಲದ ಕಡೆ ಹೋಗಿ ಬರುತ್ತೇನೆಂದು ಹೋದವರು ಮಠಕ್ಕೆ ಹಿಂದಿರುಗಿರಲಿಲ್ಲ. ಎಲ್ಲ ಕಡೆ ಹುಡುಕಿದರೂ ಸಿಕ್ಕಿರಲಿಲ್ಲ.
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…