ಜಿಲ್ಲೆಗಳು

ವೆಸ್ಲಿ ಸೇತುವೆ ಬಳಿ ಸ್ವಾಮೀಜಿ ಮೃತ ದೇಹ ಪತ್ತೆ

ಚಾಮರಾಜನಗರ: ಕಾಣೆಯಾಗಿದ್ದ ಸ್ವಾಮೀಜಿ ಶವವಾಗಿ ಪತ್ತೆಯಾಗಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲದ ವೆಸ್ಲಿ ಸೇತುವೆ ಸಮೀಪ ನಡೆದಿದೆ. ಹನೂರು ತಾಲೂಕಿನ ಪಿ ಜಿ ಪಾಳ್ಯ ಗ್ರಾಮದಲ್ಲಿರುವ ಹೊಸ ಮಠದ ರಾಜಶೇಖರ ಸ್ವಾಮೀಜಿ (70) ಮೃತ ದುರ್ದೈವಿ. ಇಂದು ಕಾವೇರಿ ನದಿ ತೀರದಲ್ಲಿ ಅಪರಿಚಿತ ಮೃತದೇಹ ದೊರೆತಿದೆ ಎಂಬ ಮಾಹಿತಿ ಮೇರೆಗೆ ಕೊಳ್ಳೇಗಾಲ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಮೃತ ದೇಹವನ್ನು ನೀರಿನಿಂದ ಮೇಲಕ್ಕೆ ಎತ್ತಿಸಿದ ಬಳಿಕ ಸ್ವಾಮೀಜಿ ಮೃತಪಟ್ಟಿರುವುದು ಗೊತ್ತಾಗಿದೆ.

ಕೊಳ್ಳೇಗಾಲದ ಕಡೆ ಹೋಗಿ ಬರುತ್ತೇನೆಂದು ಹೋದವರು ಮಠಕ್ಕೆ ಹಿಂದಿರುಗಿರಲಿಲ್ಲ ಎಂದು ಸ್ವಾಮೀಜಿ ಸಹೋದರ ಪ್ರಕಾಶ್ ಎಂಬುವರು ದೂರು ಕೊಟ್ಟಿದ್ದು, ಅದರಲ್ಲಿ ಸ್ವಾಮೀಜಿ ಅನಾರೋಗ್ಯ ಪೀಡಿತರಾಗಿದ್ದರು ಹಾಗೂ ಹೊಟ್ಟೆನೋವಿನಿಂದಲೂ ಬಳಲುತ್ತಿದ್ದರು. ಜ.17 ರಂದು ಕೊಳ್ಳೇಗಾಲದ ಕಡೆ ಹೋಗಿ ಬರುತ್ತೇನೆಂದು ಹೋದವರು ಮಠಕ್ಕೆ ಹಿಂದಿರುಗಿರಲಿಲ್ಲ. ಎಲ್ಲ ಕಡೆ ಹುಡುಕಿದರೂ ಸಿಕ್ಕಿರಲಿಲ್ಲ.

 

andolanait

Recent Posts

ಶೂಟೌಟ್ ಪ್ರಕರಣ: ಇನ್ಸ್‌ಪೆಕ್ಟರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸರ ಲಘು ಲಾಟಿ ಪ್ರಹಾರ, 5 ಮಂದಿ ವಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…

1 hour ago

ಹನೂರು ಗುಂಡಿನ ದಾಳಿ: ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ ಕುಟುಂಬಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…

2 hours ago

ಕುಶಾಲನಗರ| ಬೀದಿ ನಾಯಿ ದಾಳಿ: ವ್ಯಕ್ತಿಗೆ ಗಾಯ

ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…

2 hours ago

ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪ: ಮೃತರ ಸಂಖ್ಯೆ 40ಕ್ಕೆ ಏರಿಕೆ

ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್‌ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…

5 hours ago

ಅಯೋಧ್ಯೆ ರಾಮಮಂದಿರ ಅರ್ಚಕರಿಗೆ ಹೊಸ ಡ್ರೆಸ್ ಕೋಡ್‌

ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್‌ ಕೋಡ್‌ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…

6 hours ago

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

16 hours ago