ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲೂ ಸ್ವತಂತ್ರವಾಗಿ ಸ್ಫರ್ಧೆ ಮಾಡಲಿದ್ದು, ಜನವರಿ 15ಕ್ಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದಾಗಿ ಪಕ್ಷದ ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ ತಿಳಿಸಿದರು.
ಜಿಲ್ಲಾ ಪತ್ರಕರ್ತರ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2023ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಕನಿಷ್ಠ 100 ಕ್ಷೇತ್ರಗಳಲ್ಲಿ ಗಂಭೀರ ಸ್ಪರ್ಧೆ ಮಾಡಲಿದ್ದು, 20 ರಿಂದ 25 ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸವಿದೆ. ರಾಜ್ಯದಲ್ಲಿ ಯಾವ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಬೇಕು ಎಂಬುದು ಪಕ್ಷದ ರಾಷ್ಟ್ರೀಯ ನಾಯಕಿ ಮಾಯಾವತಿ ಅವರ ನಿರ್ಧಾರಕ್ಕೆ ಬಿಟ್ಟ ವಿಚಾರ ಎಂದ ಅವರು, ತಾವು ಮಳವಳ್ಳಿ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದು, ಮೈಸೂರು ಜಿಲ್ಲೆಯ ಕೃಷ್ಣರಾಜ, ಪಿರಿಯಾಪಟ್ಟಣ, ನಂಜನಗೂಡು, ತಿ.ನರಸೀಪುರ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದು, ಸ್ಪರ್ಧಾಕಾಂಕ್ಷಿಗಳು ಆಯಾಯ ಜಿಲ್ಲಾಧ್ಯಕ್ಷರುಗಳನ್ನು ಸಂಪರ್ಕಿಸಿ,ಡಿ.30ರೊಳಗೆ ಟಿಕೆಟ್ಗಾಗಿ ಅರ್ಜಿ ಸಲ್ಲಿಸಬಹುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಾಕೀರ್ ಹುಸೇನ್, ಮೈಸೂರು ಜಿಲ್ಲಾಧ್ಯಕ್ಷ ಬಿ.ಆರ್.ಪುಟ್ಟಸ್ವಾಮಿ, ಉಪಾಧ್ಯಕ್ಷ ಶ್ರೀಕಂಠು, ಶಿವಮಾದಯ್ಯ, ಜಾಕೀರ್ ಅಲಿಖಾನ್, ಹೂಟಗಳ್ಳಿ ಶಿವಕುಮಾರ್ ಹಾಜರಿದ್ದರು.
ಚಾಮರಾಜನಗರ: ತಾಲ್ಲೂಕಿನ ವೀರನಪುರ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರಲ್ಲಿ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಂಜಾರ ಸಮುದಾಯದ ಜನತೆಗೆ ಒಳ ಮೀಸಲಾತಿಯಲ್ಲಿ ಆಗಿರುವ ಅನ್ಯಾಯದ ಬಗ್ಗೆ…
ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್ಗೆ ಬಂದು, ಜಮ್ಮು-ಕಾಶ್ಮೀರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…
ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆ ನೀಡಿದ್ದಾರೆ. ಈ…
ಹೇಮಂತ್ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…