ಕಾರ್ಯಕರ್ತರ ಮನೆಗಳಿಗೆ ಸ್ಟಿಕರ್ ಅಂಟಿಸಿದ ಜನ ಧ್ವನಿ ಬಿ ವೆಂಕಟೇಶ್
ಹನೂರು : ಭಾರತೀಯ ಜನತಾ ಪಕ್ಷ ವಿಜಯ ಸಂಕಲ್ಪ ಅಭಿಯಾನ ಅಂಗವಾಗಿ ಕ್ಷೇತ್ರ ವ್ಯಾಪ್ತಿಯ ಕೌದಳ್ಳಿ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರ ಮನೆಗಳಿಗೆ ಸ್ಟಿಕರ್ ಅಂಟಿಸಿ ಜನ ಧ್ವನಿ ಬಿ ವೆಂಕಟೇಶ್ ರವರು ಚಾಲನೆ ನೀಡಿದರು.
ಈ ವೇಳೆ ಒಬಿಸಿ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಜನದ್ವನಿ ಬಿ ವೆಂಕಟೇಶ್ ಮಾತನಾಡಿ ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಮತ್ತೆ ಅಧಿಕಾರಕ್ಕೆ ತರುವ ಬೂತ್ ಮಟ್ಟದ ಅಭಿಯಾನದಲ್ಲಿ ಸರ್ಕಾರದ ಪ್ರಮುಖ ಯೋಜನೆಗಳ ಬಗ್ಗೆ ಜನರಿಗೆ ತಿಳುವಳಿಕೆ ನೀಡಬೇಕು. ಬೂತ್ ಮಟ್ಟದಲ್ಲಿ ಗೆದ್ದರೆ ಕ್ಷೇತ್ರವನ್ನೇ ಗೆದ್ದಂತೆ ಕ್ಷೇತ್ರವನ್ನು ಗೆದ್ದರೆ ರಾಜ್ಯವನ್ನು ಗೆದ್ದಂತೆ ಎಂಬ ಘೋಷವಾಕ್ಯದೊಂದಿಗೆ ಬಿಜೆಪಿ ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ಬೂತ್ ಮಟ್ಟದ ಅಭಿಯಾನ ಪ್ರಾರಂಭಿಸಲಾಗಿದೆ.
ಬೂತ್ ಮಟ್ಟದಲ್ಲಿ ಮತಗಳನ್ನು ಸೆಳೆದು ಮುಂದಿನ ಚುನಾವಣೆಯಲ್ಲಿ ದೇಶ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಲು ಕಾರ್ಯಕರ್ತರು ಹಾಗೂ ಮುಖಂಡರುಗಳು ಹಗಲಿರುಳು ಕಾರ್ಯನಿರ್ವಹಿಸಬೇಕು, ಬಿಜೆಪಿ ಸಾಧನೆಗಳ ಬಗ್ಗೆ ಮಾಹಿತಿ ನೀಡಿ ಮನೆ ಬಾಗಿಲಿಗೆ ಬಿಜೆಪಿ ಸ್ಟಿಕರ್ ಅನ್ನು ಹಾಕುವ ಮೂಲಕ ನಮ್ಮ ಪಕ್ಷದ ಅಭಿವೃದ್ಧಿಯನ್ನು ತಿಳಿಸಬೇಕು ಎಂದರು. ಈ ಬಾರಿ ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಸಂಘಟನೆ ಉತ್ತಮವಾಗಿದೆ. ಈ ನಿಟ್ಟಿನಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಬೂತ್ ಮಟ್ಟದ ವಿಜಯ ಸಂಕಲ್ಪ ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯರುಗಳಾದ ಜಬಿವುಲ್ಲಾ ರಾಚಪ್ಪ ಕೃಷ್ಣಮೂರ್ತಿ ಮಹಿಳಾ ಮೋರ್ಚಾ ಅಧ್ಯಕ್ಷ ಮೀನಾ ಮುಖಂಡರುಗಳಾದ ಲೋಕೇಶ್ ಜತ್ತಿ, ಜಫ್ರುಲ್ಲಾ ಸೋಮಶೇಖರ್ ಇನ್ನಿತರರು ಹಾಜರಿದ್ದರು
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…