ಜಿಲ್ಲೆಗಳು

ಗ್ರಾಮೀಣ ಪಡಿತರದಾರರಿಗೆ 3 ಲೀ.ಸೀಮೆಣ್ಣೆ ವಿತರಿಸಿ

 ಕದಸಂಸ ಮುಖಂಡ ದೊಡ್ಡಿಂದುವಾಡಿ ಸಿದ್ದರಾಜು ಆಗ್ರಹ

ಚಾಮರಾಜನಗರ: ಪಟ್ಟಣದ ಬಿ.ಪಿ.ಎಲ್ ಪಡಿತರದಾರರಿಗೆ ಸೀಮೆಎಣ್ಣೆ ವಿತರಿಸಬೇಕು ಹಾಗೂ ಗ್ರಾಮೀಣ ಬಿ.ಪಿ.ಎಲ್ ಪಡಿತರದಾರರಿಗೆ ಸೀಮೆಎಣ್ಣೆ ಹಂಚಿಕೆ ಹೆಚ್ಚಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಮೈಸೂರು ವಿಭಾಗೀಯ ಸಂಚಾಲಕ ದೊಡ್ಡಿಂದುವಾಡಿ ಸಿದ್ದರಾಜು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.
ಬಿ.ಜೆ.ಪಿ. ನೇತೃತ್ವದ ಸರ್ಕಾರ ಅಧಿಕಾರ ಹಿಡಿದ ಬಳಿಕ ೨೦೧೬ರ ಸೆಪ್ಟೆಂಬರ್‌ನಿoದ ಪಟ್ಟಣ ಮತ್ತು ಗ್ರಾಮಾಂತರ ಪ್ರದೇಶಗಳ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ ವಿತರಿಸುತ್ತಿದ್ದ ೫ ಲೀ.ಸೀಮೆಎಣ್ಣೆಯನ್ನು 2 ಲೀ.ಗೆ ಕಡಿತಗೊಳಿಸದೆ. ಪಟ್ಟಣ ಪ್ರದೇಶಗಳ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ ಸೀಮೆಎಣ್ಣೆ ವಿತರಣೆಯನ್ನೇ ನಿಲ್ಲಿಸಿದೆ ಎಂದು ಸುದ್ದಿಗೋಷ್ಠಿಯಲ್ಲಿ ದೂರಿದರು.
೨೦೨೦ರ ಅಕ್ಟೋಬರ್‌ನಿಂದ ಗ್ರಾಮಾಂತರ ಪ್ರದೇಶಗಳ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ ಸೀಮೆಎಣ್ಣೆ ವಿತರಿಸುವ ಪ್ರಮಾಣವನ್ನು ೨ ಲೀಟರ್‌ಗೆ ಕಡಿತ ಮಾಡಿದೆ. ಇದನ್ನು ಪ್ರಶ್ನಿಸಿ ಬಿ.ಪಿ.ಎಲ್ ಪಡಿತರ ಚೀಟಿದಾರರು ಹೈಕೋರ್ಟ್ನಲ್ಲಿ ಪಿ.ಐ.ಎಲ್ ಹಾಕಲಾಗಿತ್ತು. ಗ್ರಾಮಾಂತರ ಪಡಿತರ ಚೀಟಿದಾರರಿಗೆ ಹಿಂದಿನ ಆದೇಶದ ಪ್ರಕಾರ ೩ ಲೀ. ಸೀಮೆಣ್ಣೆ ವಿತರಿಸುವಂತೆ ಹೈಕೋರ್ಟ್ ಆದೇಶಿಸಿದ್ದರೂ ರಾಜ್ಯ ಸರ್ಕಾರ ಉಲ್ಲಂಘಿಸಿದೆ. ೨೦೨೨ರ ಏಪ್ರಿಲ್‌ನಿಂದ ವಿತರಣೆ ಪ್ರಮಾಣವನ್ನು ಕಡಿತಗೊಳಿಸಿ ೧.೫ ಲೀ.ನಂತೆ ವಿತರಿಸುತ್ತಿದೆ ಎಂದು ದೂರಿದರು.
ನಿರಂತರ ವಿದ್ಯುತ್ ಕಡಿತದ ಸಮಸ್ಯೆಯನ್ನು ಎದುರಿಸುತ್ತಿರುವ ಗ್ರಾಮೀಣ ಜನರಿಗೆ ದೀಪ ಉರಿಸಲು ಸೀಮೆಣ್ಣೆ ಇಲ್ಲದಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಮೇಲೆ ಪರಿಣಾಮ ಬೀರಲಿದೆ. ಜಿಲ್ಲೆಯನ್ನು ಬೆಟ್ಟಗುಡ್ಡ ಪ್ರದೇಶವೆಂದು ಪರಿಗಣಿಸಿ ಪ್ರತಿ ತಿಂಗಳು ೫ ಲೀ.ನಂತೆ ಸೀಮೆಎಣ್ಣೆ ವಿತರಿಸಬೇಕೆಂದು ಆಗ್ರಹಿಸಿದರು.
ಸಗಟು ಸೀಮೆಎಣ್ಣೆ ವಿತರಕರಿಗೆ ಆಯಿಲ್ ಕಂಪನಿಯವರು ಪ್ರತಿ ೧೨ ಸಾವಿರ ಲೀ.ಲೋಡಿಗೆ ಹೆಚ್ಚುವರಿಯಾಗಿ ೬ ಲಕ್ಷ ರೂ ಪಡೆಯುತ್ತಾರೆ. ೧-೨ ತಿಂಗಳ ಬಳಿಕ ಅವರಿಗೆ ರಾಜ್ಯ ಸರ್ಕಾರದಿಂದ ಹಣ ಪಾವತಿಯಾಗುತ್ತಿದೆ. ಆದ್ದರಿಂದ ಅವರು ಪ್ರತಿ ತಿಂಗಳು ಸೀಮೆಎಣ್ಣೆ ಎತ್ತುವಳಿ ಮಾಡಿ ವಿತರಿಸುತ್ತಿಲ್ಲ. ಈ ಸಮಸ್ಯೆಯನ್ನು ಪರಿಹರಿಸುವಂತೆ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಗಿದೆ ಎಂದರು.
ಗೋಷ್ಠಿಯಲ್ಲಿ ಮುಖಂಡರಾದ ಸಿ.ಎಂ.ಕೃಷ್ಣಮೂರ್ತಿ, ಮಹದೇವಸ್ವಾಮಿ, ಕೆ.ನಾಗರಾಜು, ಧನಂಜಯ್, ಹಿಂಡಯ್ಯ ಹಾಜರಿದ್ದರು.

andolanait

Recent Posts

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ

ಮದ್ದೂರು : ತಾಲ್ಲೂಕಿನ ನಿಡಘಟ್ಟದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟುಹೋಗಿದ್ದು, ಅದೃಷ್ಟವಶಾತ್…

25 mins ago

ಮೈಸೂರಿನಲ್ಲಿ ನಾಳೆ ಇಂದ ಮೂರು ದಿನ ದೇಸಿ ಎಣ್ಣೆ ಮೇಳ : ಮೇಳೈಸಲಿದೆ ಸಾಂಪ್ರದಾಯಿಕ ಎಣ್ಣೆ

ಮೈಸೂರು : ಇತ್ತೀಚಿನ ದಿನಗಳಲ್ಲಿ ಸಾಂಪ್ರದಾಯಿಕ ಅಡುಗೆ ಎಣ್ಣೆಗಳು, ಅವುಗಳ ಆರೋಗ್ಯ ಲಾಭಗಳ ಕಾರಣದಿಂದ ಮತ್ತೆ ಹೆಚ್ಚಿನ ಮಹತ್ವ ಪಡೆದುಕೊಳ್ಳುತ್ತಿವೆ.…

2 hours ago

ಬಿ-ಖಾತಾಗಳಿಗೂ ʼಎ-ಖಾತಾʼ ಭಾಗ್ಯ ; ಸಂಪುಟ ಸಭೆಯಲ್ಲಿ ನಿರ್ಣಯ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು (ಜ.8) ನಡೆದ 2026ನೇ ಸಾಲಿನ 2ನೇ ಸಚಿವ ಸಂಪುಟದ ಸಭೆಯಲ್ಲಿ…

3 hours ago

ಮಂಡ್ಯದಲ್ಲಿ ಕೆಂಪೇಗೌಡರ ಬೃಹತ್‌ ಪ್ರತಿಮೆ : ಶಿಲ್ಪಿ ಅರುಣ್‌ ಯೋಗಿರಾಜ್‌ಗೆ ಕೆತ್ತನೆ ಜವಾಬ್ದಾರಿ

ಮಂಡ್ಯ : ನಗರಕ್ಕೆ ಹೈಟೆಕ್ ಸ್ಪರ್ಶ ನೀಡಲು ಮುಂದಾಗಿರುವ ಶಾಸಕ ಪಿ. ರವಿಕುಮಾರಗೌಡ ಅವರು, ಒಕ್ಕಲಿಗ ಜನಾಂಗದ ಹಲವು ವರ್ಷಗಳ…

4 hours ago

ಬೀದಿಬದಿ ವ್ಯಾಪಾರಿಗಳ ವಲಯ ನಿರ್ಮಿಸಲು ಚಿಂತನೆ : ಸಂಸದ ಯದುವೀರ್‌

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ನಗರದಲ್ಲಿ ಬೀದಿಬದಿ ವ್ಯಾಪಾರಿಗಳ ವಲಯ ನಿರ್ಮಿಸಲು ಆದ್ಯತೆ ನೀಡಲಾಗುವುದು…

4 hours ago

ಗೃಹಲಕ್ಷ್ಮಿ ಹಣ ಶೀಘ್ರ ಸಂದಾಯ : ಸಚಿವೆ ಹೆಬ್ಬಾಳಕರ್‌

ಬೆಂಗಳೂರು : ಹಣಕಾಸು ಇಲಾಖೆ ಅನುಮತಿ ನೀಡಿದ ತಕ್ಷಣವೇ 2025ರ ಫೆಬ್ರವರಿ ಹಾಗೂ ಮಾರ್ಚ್‌ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವನ್ನು…

5 hours ago