ಜಿಲ್ಲೆಗಳು

ಗ್ರಾಮೀಣ ಪಡಿತರದಾರರಿಗೆ 3 ಲೀ.ಸೀಮೆಣ್ಣೆ ವಿತರಿಸಿ

 ಕದಸಂಸ ಮುಖಂಡ ದೊಡ್ಡಿಂದುವಾಡಿ ಸಿದ್ದರಾಜು ಆಗ್ರಹ

ಚಾಮರಾಜನಗರ: ಪಟ್ಟಣದ ಬಿ.ಪಿ.ಎಲ್ ಪಡಿತರದಾರರಿಗೆ ಸೀಮೆಎಣ್ಣೆ ವಿತರಿಸಬೇಕು ಹಾಗೂ ಗ್ರಾಮೀಣ ಬಿ.ಪಿ.ಎಲ್ ಪಡಿತರದಾರರಿಗೆ ಸೀಮೆಎಣ್ಣೆ ಹಂಚಿಕೆ ಹೆಚ್ಚಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಮೈಸೂರು ವಿಭಾಗೀಯ ಸಂಚಾಲಕ ದೊಡ್ಡಿಂದುವಾಡಿ ಸಿದ್ದರಾಜು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.
ಬಿ.ಜೆ.ಪಿ. ನೇತೃತ್ವದ ಸರ್ಕಾರ ಅಧಿಕಾರ ಹಿಡಿದ ಬಳಿಕ ೨೦೧೬ರ ಸೆಪ್ಟೆಂಬರ್‌ನಿoದ ಪಟ್ಟಣ ಮತ್ತು ಗ್ರಾಮಾಂತರ ಪ್ರದೇಶಗಳ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ ವಿತರಿಸುತ್ತಿದ್ದ ೫ ಲೀ.ಸೀಮೆಎಣ್ಣೆಯನ್ನು 2 ಲೀ.ಗೆ ಕಡಿತಗೊಳಿಸದೆ. ಪಟ್ಟಣ ಪ್ರದೇಶಗಳ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ ಸೀಮೆಎಣ್ಣೆ ವಿತರಣೆಯನ್ನೇ ನಿಲ್ಲಿಸಿದೆ ಎಂದು ಸುದ್ದಿಗೋಷ್ಠಿಯಲ್ಲಿ ದೂರಿದರು.
೨೦೨೦ರ ಅಕ್ಟೋಬರ್‌ನಿಂದ ಗ್ರಾಮಾಂತರ ಪ್ರದೇಶಗಳ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ ಸೀಮೆಎಣ್ಣೆ ವಿತರಿಸುವ ಪ್ರಮಾಣವನ್ನು ೨ ಲೀಟರ್‌ಗೆ ಕಡಿತ ಮಾಡಿದೆ. ಇದನ್ನು ಪ್ರಶ್ನಿಸಿ ಬಿ.ಪಿ.ಎಲ್ ಪಡಿತರ ಚೀಟಿದಾರರು ಹೈಕೋರ್ಟ್ನಲ್ಲಿ ಪಿ.ಐ.ಎಲ್ ಹಾಕಲಾಗಿತ್ತು. ಗ್ರಾಮಾಂತರ ಪಡಿತರ ಚೀಟಿದಾರರಿಗೆ ಹಿಂದಿನ ಆದೇಶದ ಪ್ರಕಾರ ೩ ಲೀ. ಸೀಮೆಣ್ಣೆ ವಿತರಿಸುವಂತೆ ಹೈಕೋರ್ಟ್ ಆದೇಶಿಸಿದ್ದರೂ ರಾಜ್ಯ ಸರ್ಕಾರ ಉಲ್ಲಂಘಿಸಿದೆ. ೨೦೨೨ರ ಏಪ್ರಿಲ್‌ನಿಂದ ವಿತರಣೆ ಪ್ರಮಾಣವನ್ನು ಕಡಿತಗೊಳಿಸಿ ೧.೫ ಲೀ.ನಂತೆ ವಿತರಿಸುತ್ತಿದೆ ಎಂದು ದೂರಿದರು.
ನಿರಂತರ ವಿದ್ಯುತ್ ಕಡಿತದ ಸಮಸ್ಯೆಯನ್ನು ಎದುರಿಸುತ್ತಿರುವ ಗ್ರಾಮೀಣ ಜನರಿಗೆ ದೀಪ ಉರಿಸಲು ಸೀಮೆಣ್ಣೆ ಇಲ್ಲದಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಮೇಲೆ ಪರಿಣಾಮ ಬೀರಲಿದೆ. ಜಿಲ್ಲೆಯನ್ನು ಬೆಟ್ಟಗುಡ್ಡ ಪ್ರದೇಶವೆಂದು ಪರಿಗಣಿಸಿ ಪ್ರತಿ ತಿಂಗಳು ೫ ಲೀ.ನಂತೆ ಸೀಮೆಎಣ್ಣೆ ವಿತರಿಸಬೇಕೆಂದು ಆಗ್ರಹಿಸಿದರು.
ಸಗಟು ಸೀಮೆಎಣ್ಣೆ ವಿತರಕರಿಗೆ ಆಯಿಲ್ ಕಂಪನಿಯವರು ಪ್ರತಿ ೧೨ ಸಾವಿರ ಲೀ.ಲೋಡಿಗೆ ಹೆಚ್ಚುವರಿಯಾಗಿ ೬ ಲಕ್ಷ ರೂ ಪಡೆಯುತ್ತಾರೆ. ೧-೨ ತಿಂಗಳ ಬಳಿಕ ಅವರಿಗೆ ರಾಜ್ಯ ಸರ್ಕಾರದಿಂದ ಹಣ ಪಾವತಿಯಾಗುತ್ತಿದೆ. ಆದ್ದರಿಂದ ಅವರು ಪ್ರತಿ ತಿಂಗಳು ಸೀಮೆಎಣ್ಣೆ ಎತ್ತುವಳಿ ಮಾಡಿ ವಿತರಿಸುತ್ತಿಲ್ಲ. ಈ ಸಮಸ್ಯೆಯನ್ನು ಪರಿಹರಿಸುವಂತೆ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಗಿದೆ ಎಂದರು.
ಗೋಷ್ಠಿಯಲ್ಲಿ ಮುಖಂಡರಾದ ಸಿ.ಎಂ.ಕೃಷ್ಣಮೂರ್ತಿ, ಮಹದೇವಸ್ವಾಮಿ, ಕೆ.ನಾಗರಾಜು, ಧನಂಜಯ್, ಹಿಂಡಯ್ಯ ಹಾಜರಿದ್ದರು.

andolanait

Recent Posts

ಬಂಡೀಪುರ, ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭ : ಸಿಎಂ

ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿನತ್ತ…

1 hour ago

ಜ.5, 6ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಪ್ರವಾಸ ; ತವರಲ್ಲಿ ಸಂಭ್ರಮ ಸಾಧ್ಯತೆ?

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿನಲ್ಲಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿದ್ದಾರೆ. ಜ.5ರಂದು ಬೆಳಿಗ್ಗೆ…

1 hour ago

ಜ.4ರಂದು ʼಚಾ.ಬೆಟ್ಟಕ್ಕೆ ನಡಿಗೆʼ ಜಾಗೃತಿ ಜಾಥ ; ಬೆಂಬಲಿಸಲು ಮನವಿ

ಮೈಸೂರು : ಅರಮನೆ ನಗರಿ ಮೈಸೂರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದ ಸಂರಕ್ಷಣೆ ಮತ್ತು ಉಳಿವಿಗಾಗಿ ಜ.4ರಂದು(ಭಾನುವಾರ) ಜಾಗೃತಿ ಆಂದೋಲನವನ್ನು…

2 hours ago

ದೇಶದ ಸ್ವಚ್ಛ ನಗರ ಇಂದೋರ್‌ನಲ್ಲಿ ಕಲುಷಿತ ನೀರು ಸೇವನೆಯಿಂದ 11 ಮಂದಿ ಸಾವು!

ಭೋಪಾಲ್ : ಇಂದೋರ್‌ನ ಭಗೀರಥಪುರದಲ್ಲಿ ಕಲುಷಿತ ಕುಡಿಯುವ ನೀರು ಸೇವನೆಯಿಂದ 11 ಜೀವಗಳು ಬಲಿಯಾಗಿವೆ. ಮತ್ತು 1400ಕ್ಕೂ ಹೆಚ್ಚು ನಿವಾಸಿಗಳ…

3 hours ago

ಬಳ್ಳಾರಿ ಘರ್ಷಣೆ | ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಲಿ ; ಬಿವೈವಿ ಆಗ್ರಹ

ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…

4 hours ago

ಬಳ್ಳಾರಿ ಘರ್ಷಣೆ | ಕೈ ಕಾರ್ಯಕರ್ತ ಸಾವು, ಘಟನೆ ಬಗ್ಗೆ ಸಿಎಂ ಹೇಳಿದ್ದೇನು?

ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ  ಬ್ಯಾನರ್‌ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್‌ ಆಗಿ…

5 hours ago