ಜಿಲ್ಲೆಗಳು

ಗ್ರಾಮೀಣ ಪಡಿತರದಾರರಿಗೆ 3 ಲೀ.ಸೀಮೆಣ್ಣೆ ವಿತರಿಸಿ

 ಕದಸಂಸ ಮುಖಂಡ ದೊಡ್ಡಿಂದುವಾಡಿ ಸಿದ್ದರಾಜು ಆಗ್ರಹ

ಚಾಮರಾಜನಗರ: ಪಟ್ಟಣದ ಬಿ.ಪಿ.ಎಲ್ ಪಡಿತರದಾರರಿಗೆ ಸೀಮೆಎಣ್ಣೆ ವಿತರಿಸಬೇಕು ಹಾಗೂ ಗ್ರಾಮೀಣ ಬಿ.ಪಿ.ಎಲ್ ಪಡಿತರದಾರರಿಗೆ ಸೀಮೆಎಣ್ಣೆ ಹಂಚಿಕೆ ಹೆಚ್ಚಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಮೈಸೂರು ವಿಭಾಗೀಯ ಸಂಚಾಲಕ ದೊಡ್ಡಿಂದುವಾಡಿ ಸಿದ್ದರಾಜು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.
ಬಿ.ಜೆ.ಪಿ. ನೇತೃತ್ವದ ಸರ್ಕಾರ ಅಧಿಕಾರ ಹಿಡಿದ ಬಳಿಕ ೨೦೧೬ರ ಸೆಪ್ಟೆಂಬರ್‌ನಿoದ ಪಟ್ಟಣ ಮತ್ತು ಗ್ರಾಮಾಂತರ ಪ್ರದೇಶಗಳ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ ವಿತರಿಸುತ್ತಿದ್ದ ೫ ಲೀ.ಸೀಮೆಎಣ್ಣೆಯನ್ನು 2 ಲೀ.ಗೆ ಕಡಿತಗೊಳಿಸದೆ. ಪಟ್ಟಣ ಪ್ರದೇಶಗಳ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ ಸೀಮೆಎಣ್ಣೆ ವಿತರಣೆಯನ್ನೇ ನಿಲ್ಲಿಸಿದೆ ಎಂದು ಸುದ್ದಿಗೋಷ್ಠಿಯಲ್ಲಿ ದೂರಿದರು.
೨೦೨೦ರ ಅಕ್ಟೋಬರ್‌ನಿಂದ ಗ್ರಾಮಾಂತರ ಪ್ರದೇಶಗಳ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ ಸೀಮೆಎಣ್ಣೆ ವಿತರಿಸುವ ಪ್ರಮಾಣವನ್ನು ೨ ಲೀಟರ್‌ಗೆ ಕಡಿತ ಮಾಡಿದೆ. ಇದನ್ನು ಪ್ರಶ್ನಿಸಿ ಬಿ.ಪಿ.ಎಲ್ ಪಡಿತರ ಚೀಟಿದಾರರು ಹೈಕೋರ್ಟ್ನಲ್ಲಿ ಪಿ.ಐ.ಎಲ್ ಹಾಕಲಾಗಿತ್ತು. ಗ್ರಾಮಾಂತರ ಪಡಿತರ ಚೀಟಿದಾರರಿಗೆ ಹಿಂದಿನ ಆದೇಶದ ಪ್ರಕಾರ ೩ ಲೀ. ಸೀಮೆಣ್ಣೆ ವಿತರಿಸುವಂತೆ ಹೈಕೋರ್ಟ್ ಆದೇಶಿಸಿದ್ದರೂ ರಾಜ್ಯ ಸರ್ಕಾರ ಉಲ್ಲಂಘಿಸಿದೆ. ೨೦೨೨ರ ಏಪ್ರಿಲ್‌ನಿಂದ ವಿತರಣೆ ಪ್ರಮಾಣವನ್ನು ಕಡಿತಗೊಳಿಸಿ ೧.೫ ಲೀ.ನಂತೆ ವಿತರಿಸುತ್ತಿದೆ ಎಂದು ದೂರಿದರು.
ನಿರಂತರ ವಿದ್ಯುತ್ ಕಡಿತದ ಸಮಸ್ಯೆಯನ್ನು ಎದುರಿಸುತ್ತಿರುವ ಗ್ರಾಮೀಣ ಜನರಿಗೆ ದೀಪ ಉರಿಸಲು ಸೀಮೆಣ್ಣೆ ಇಲ್ಲದಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಮೇಲೆ ಪರಿಣಾಮ ಬೀರಲಿದೆ. ಜಿಲ್ಲೆಯನ್ನು ಬೆಟ್ಟಗುಡ್ಡ ಪ್ರದೇಶವೆಂದು ಪರಿಗಣಿಸಿ ಪ್ರತಿ ತಿಂಗಳು ೫ ಲೀ.ನಂತೆ ಸೀಮೆಎಣ್ಣೆ ವಿತರಿಸಬೇಕೆಂದು ಆಗ್ರಹಿಸಿದರು.
ಸಗಟು ಸೀಮೆಎಣ್ಣೆ ವಿತರಕರಿಗೆ ಆಯಿಲ್ ಕಂಪನಿಯವರು ಪ್ರತಿ ೧೨ ಸಾವಿರ ಲೀ.ಲೋಡಿಗೆ ಹೆಚ್ಚುವರಿಯಾಗಿ ೬ ಲಕ್ಷ ರೂ ಪಡೆಯುತ್ತಾರೆ. ೧-೨ ತಿಂಗಳ ಬಳಿಕ ಅವರಿಗೆ ರಾಜ್ಯ ಸರ್ಕಾರದಿಂದ ಹಣ ಪಾವತಿಯಾಗುತ್ತಿದೆ. ಆದ್ದರಿಂದ ಅವರು ಪ್ರತಿ ತಿಂಗಳು ಸೀಮೆಎಣ್ಣೆ ಎತ್ತುವಳಿ ಮಾಡಿ ವಿತರಿಸುತ್ತಿಲ್ಲ. ಈ ಸಮಸ್ಯೆಯನ್ನು ಪರಿಹರಿಸುವಂತೆ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಗಿದೆ ಎಂದರು.
ಗೋಷ್ಠಿಯಲ್ಲಿ ಮುಖಂಡರಾದ ಸಿ.ಎಂ.ಕೃಷ್ಣಮೂರ್ತಿ, ಮಹದೇವಸ್ವಾಮಿ, ಕೆ.ನಾಗರಾಜು, ಧನಂಜಯ್, ಹಿಂಡಯ್ಯ ಹಾಜರಿದ್ದರು.

andolanait

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

9 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

13 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

14 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

15 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

15 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

15 hours ago