ವಿರಾಜಪೇಟೆ: ಹುಟ್ಟು ಹಬ್ಬವನ್ನು ಆಚರಿಸಿ ಕೋಣೆಯಲ್ಲಿ ಮಲಗಿದ್ದ ವ್ಯಕ್ತಿ ಬೆಳಿಗ್ಗೆ ಮೃತನಾಗಿ ಪತ್ತೆಯಾದ ಘಟನೆ ನಗರದ ಹೃದಯ ಭಾಗದಲ್ಲಿ ನಡೆದಿದೆ. ಗದಗ ಜಿಲ್ಲೆಯ ಯೆಂಡಿಗೇರಿ ಗ್ರಾಮದ ನಿವಾಸಿ ಕೊಡಗು ಡಿ.ಸಿ.ಸಿ. ಬ್ಯಾಂಕ್ನ ಅಧ್ಯಕ್ಷರ ವಾಹನ ಚಾಲಕರಾಗಿ ಸೇವೆ ಸಲ್ಲಿಸುತಿದ್ದ ವಿನಯ್ ಕುಮಾರ್ ಯೆಂಡಿಗೇರಿ(೩೦) ಮೃತ ದುರ್ದೈವಿ.
ಮೃತ ವ್ಯಕ್ತಿಯು ಗದಗ ಜಿಲ್ಲೆಯ ಯೆಂಡಿಗೇರಿ ಗ್ರಾಮದಿಂದ ಕೊಡಗು ಜಿಲ್ಲೆಯ ಕೊಡಗು ಡಿ.ಸಿ.ಸಿ ಬ್ಯಾಂಕ್ ನ ಕಾರು ಚಾಲಕನಾಗಿ ನೇಮಕಗೊಂಡಿದ್ದರು. ಸುಮಾರು ೧೮ ತಿಂಗಳುಗಳಿಂದ ಬ್ಯಾಂಕ್ ಅಧ್ಯಕ್ಷರ ಕಾರು ಚಾಲಕನಾಗಿ ಸೇವೆ ಸಲ್ಲಿಸುತಿದ್ದರು. ಮೇ ತಿಂಗಳಲ್ಲಿ ಮೃತರು ವಿವಾಹವಾಗಿದ್ದರು.
ಸೆ.೫ರಂದು ಬೆಳಿಗ್ಗೆ ಮಡಿಕೇರಿಗೆ ತೆರಳಿ ಸಂಜೆ ೯ ಗಂಟೆಗೆ ವಿರಾಜಪೇಟೆಗೆ ಆಗಮಿಸಿದ್ದಾರೆ. ವಿರಾಜಪೇಟೆ ಡಿ.ಸಿ.ಸಿ. ಬ್ಯಾಂಕ್ನ ವಿಶ್ರಾಂತಿ ಕೊಠಡಿಯಲ್ಲಿ ಮಲಗಿದ್ದ ವಿನಯ್, ಮಂಗಳವಾರ ಬೆಳಿಗ್ಗೆ ೯.೩೦ ಗಂಟೆಯಾದರೂ ಹೊರ ಬಂದಿರಲಿಲ್ಲ. ವಿರಾಜಪೇಟೆ ಡಿ.ಸಿ.ಸಿ. ಬ್ಯಾಂಕ್ ಶಾಖೆಯ ವ್ಯವಸ್ಥಾಪಕ ಸುಬ್ಬಯ್ಯ ನೀಡಿದ ದೂರಿನ ಮೇರೆಗೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಬೀಗ ಒಡೆದು ಒಳ ಪ್ರವೇಶ ಮಾಡಿದ ಪೊಲೀಸರಿಗೆ ಕೋಣೆಯಲ್ಲಿ ಅಂಗಾತವಾಗಿ ಬಿದ್ದಿರುವಂತೆ ವಿನಯ್ ಅವರ ಮೃತದೇಹ ಪತ್ತೆಯಾಗಿದೆ. ಬ್ಯಾಂಕ್ ವ್ಯವಸ್ಥಾಪಕರು ನೀಡಿದ ದೂರಿನ ಮೇರೆಗೆ ವಿರಾಜಪೇಟೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತರ ಸ್ವಗೃಹವಾದ ಗದಗ ಜಿಲ್ಲೆಗೆ ರವಾನಿಸಲಾಯಿತು.
ಬಳ್ಳಾರಿ : ಬಿಜೆಪಿ ನಾಯಕ ಜನಾರ್ದನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ…
ಬಳ್ಳಾರಿ : ಜನಾರ್ಧನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು,…
ಚಾಮರಾಜನಗರ : ತಾಲ್ಲೂಕಿನ ನಂಜೇದೇವಪುರ ಬಳಿ ನಾಲ್ಕು ಮರಿಗಳ ಜೊತೆ ತಾಯಿ ಹುಲಿ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವುಗಳ ಸೆರೆಗಾಗಿ ಕೂಂಬಿಂಗ್…
ಮೈಸೂರು : ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ ಗುರುವಾರ ಅಧಿಕಾರ ಸ್ವೀಕಾರ ಮಾಡಿದರು. ಮಂಡ್ಯ ಜಿಲ್ಲೆಯ ಎಸ್ಪಿ…
ಗುಂಡ್ಲುಪೇಟೆ: ತಾಲ್ಲೂಕಿನ ಅಭಿವೃದ್ಧಿಗೆ ಶ್ರಮಿಸಿ ಏಳು ಬಾರಿ ಶಾಸಕಿ ,ಸಚಿವೆಯಾಗಿ ಮೊದಲ ಮಹಿಳಾ ಸ್ಪೀಕರ್ ಆದಂತಹ ಗಟ್ಟಿಗಿತ್ತಿ ಕೆ.ಎಸ್.ನಾಗರತ್ನಮ್ಮ ಅವರ…
ಗುಂಡ್ಲುಪೇಟೆ: ಪಟ್ಟಣದ ಕೂತನೂರು ಗುಡ್ಡ ಹಾಗೂ ತೆರಕಣಾಂಬಿ ಭಾಗದಿಂದ ಅಧಿಕ ಭಾರಹೊತ್ತು ಸಾಗುವ ಟಿಪ್ಪರ್ ಗಳ ಸಂಚಾರ ನಡೆಸುತಿದ್ದರು ಆರ್…