ವಿರಾಜಪೇಟೆ: ಹುಟ್ಟು ಹಬ್ಬವನ್ನು ಆಚರಿಸಿ ಕೋಣೆಯಲ್ಲಿ ಮಲಗಿದ್ದ ವ್ಯಕ್ತಿ ಬೆಳಿಗ್ಗೆ ಮೃತನಾಗಿ ಪತ್ತೆಯಾದ ಘಟನೆ ನಗರದ ಹೃದಯ ಭಾಗದಲ್ಲಿ ನಡೆದಿದೆ. ಗದಗ ಜಿಲ್ಲೆಯ ಯೆಂಡಿಗೇರಿ ಗ್ರಾಮದ ನಿವಾಸಿ ಕೊಡಗು ಡಿ.ಸಿ.ಸಿ. ಬ್ಯಾಂಕ್ನ ಅಧ್ಯಕ್ಷರ ವಾಹನ ಚಾಲಕರಾಗಿ ಸೇವೆ ಸಲ್ಲಿಸುತಿದ್ದ ವಿನಯ್ ಕುಮಾರ್ ಯೆಂಡಿಗೇರಿ(೩೦) ಮೃತ ದುರ್ದೈವಿ.
ಮೃತ ವ್ಯಕ್ತಿಯು ಗದಗ ಜಿಲ್ಲೆಯ ಯೆಂಡಿಗೇರಿ ಗ್ರಾಮದಿಂದ ಕೊಡಗು ಜಿಲ್ಲೆಯ ಕೊಡಗು ಡಿ.ಸಿ.ಸಿ ಬ್ಯಾಂಕ್ ನ ಕಾರು ಚಾಲಕನಾಗಿ ನೇಮಕಗೊಂಡಿದ್ದರು. ಸುಮಾರು ೧೮ ತಿಂಗಳುಗಳಿಂದ ಬ್ಯಾಂಕ್ ಅಧ್ಯಕ್ಷರ ಕಾರು ಚಾಲಕನಾಗಿ ಸೇವೆ ಸಲ್ಲಿಸುತಿದ್ದರು. ಮೇ ತಿಂಗಳಲ್ಲಿ ಮೃತರು ವಿವಾಹವಾಗಿದ್ದರು.
ಸೆ.೫ರಂದು ಬೆಳಿಗ್ಗೆ ಮಡಿಕೇರಿಗೆ ತೆರಳಿ ಸಂಜೆ ೯ ಗಂಟೆಗೆ ವಿರಾಜಪೇಟೆಗೆ ಆಗಮಿಸಿದ್ದಾರೆ. ವಿರಾಜಪೇಟೆ ಡಿ.ಸಿ.ಸಿ. ಬ್ಯಾಂಕ್ನ ವಿಶ್ರಾಂತಿ ಕೊಠಡಿಯಲ್ಲಿ ಮಲಗಿದ್ದ ವಿನಯ್, ಮಂಗಳವಾರ ಬೆಳಿಗ್ಗೆ ೯.೩೦ ಗಂಟೆಯಾದರೂ ಹೊರ ಬಂದಿರಲಿಲ್ಲ. ವಿರಾಜಪೇಟೆ ಡಿ.ಸಿ.ಸಿ. ಬ್ಯಾಂಕ್ ಶಾಖೆಯ ವ್ಯವಸ್ಥಾಪಕ ಸುಬ್ಬಯ್ಯ ನೀಡಿದ ದೂರಿನ ಮೇರೆಗೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಬೀಗ ಒಡೆದು ಒಳ ಪ್ರವೇಶ ಮಾಡಿದ ಪೊಲೀಸರಿಗೆ ಕೋಣೆಯಲ್ಲಿ ಅಂಗಾತವಾಗಿ ಬಿದ್ದಿರುವಂತೆ ವಿನಯ್ ಅವರ ಮೃತದೇಹ ಪತ್ತೆಯಾಗಿದೆ. ಬ್ಯಾಂಕ್ ವ್ಯವಸ್ಥಾಪಕರು ನೀಡಿದ ದೂರಿನ ಮೇರೆಗೆ ವಿರಾಜಪೇಟೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತರ ಸ್ವಗೃಹವಾದ ಗದಗ ಜಿಲ್ಲೆಗೆ ರವಾನಿಸಲಾಯಿತು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…