ವಿರಾಜಪೇಟೆ: ಹುಟ್ಟು ಹಬ್ಬವನ್ನು ಆಚರಿಸಿ ಕೋಣೆಯಲ್ಲಿ ಮಲಗಿದ್ದ ವ್ಯಕ್ತಿ ಬೆಳಿಗ್ಗೆ ಮೃತನಾಗಿ ಪತ್ತೆಯಾದ ಘಟನೆ ನಗರದ ಹೃದಯ ಭಾಗದಲ್ಲಿ ನಡೆದಿದೆ. ಗದಗ ಜಿಲ್ಲೆಯ ಯೆಂಡಿಗೇರಿ ಗ್ರಾಮದ ನಿವಾಸಿ ಕೊಡಗು ಡಿ.ಸಿ.ಸಿ. ಬ್ಯಾಂಕ್ನ ಅಧ್ಯಕ್ಷರ ವಾಹನ ಚಾಲಕರಾಗಿ ಸೇವೆ ಸಲ್ಲಿಸುತಿದ್ದ ವಿನಯ್ ಕುಮಾರ್ ಯೆಂಡಿಗೇರಿ(೩೦) ಮೃತ ದುರ್ದೈವಿ.
ಮೃತ ವ್ಯಕ್ತಿಯು ಗದಗ ಜಿಲ್ಲೆಯ ಯೆಂಡಿಗೇರಿ ಗ್ರಾಮದಿಂದ ಕೊಡಗು ಜಿಲ್ಲೆಯ ಕೊಡಗು ಡಿ.ಸಿ.ಸಿ ಬ್ಯಾಂಕ್ ನ ಕಾರು ಚಾಲಕನಾಗಿ ನೇಮಕಗೊಂಡಿದ್ದರು. ಸುಮಾರು ೧೮ ತಿಂಗಳುಗಳಿಂದ ಬ್ಯಾಂಕ್ ಅಧ್ಯಕ್ಷರ ಕಾರು ಚಾಲಕನಾಗಿ ಸೇವೆ ಸಲ್ಲಿಸುತಿದ್ದರು. ಮೇ ತಿಂಗಳಲ್ಲಿ ಮೃತರು ವಿವಾಹವಾಗಿದ್ದರು.
ಸೆ.೫ರಂದು ಬೆಳಿಗ್ಗೆ ಮಡಿಕೇರಿಗೆ ತೆರಳಿ ಸಂಜೆ ೯ ಗಂಟೆಗೆ ವಿರಾಜಪೇಟೆಗೆ ಆಗಮಿಸಿದ್ದಾರೆ. ವಿರಾಜಪೇಟೆ ಡಿ.ಸಿ.ಸಿ. ಬ್ಯಾಂಕ್ನ ವಿಶ್ರಾಂತಿ ಕೊಠಡಿಯಲ್ಲಿ ಮಲಗಿದ್ದ ವಿನಯ್, ಮಂಗಳವಾರ ಬೆಳಿಗ್ಗೆ ೯.೩೦ ಗಂಟೆಯಾದರೂ ಹೊರ ಬಂದಿರಲಿಲ್ಲ. ವಿರಾಜಪೇಟೆ ಡಿ.ಸಿ.ಸಿ. ಬ್ಯಾಂಕ್ ಶಾಖೆಯ ವ್ಯವಸ್ಥಾಪಕ ಸುಬ್ಬಯ್ಯ ನೀಡಿದ ದೂರಿನ ಮೇರೆಗೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಬೀಗ ಒಡೆದು ಒಳ ಪ್ರವೇಶ ಮಾಡಿದ ಪೊಲೀಸರಿಗೆ ಕೋಣೆಯಲ್ಲಿ ಅಂಗಾತವಾಗಿ ಬಿದ್ದಿರುವಂತೆ ವಿನಯ್ ಅವರ ಮೃತದೇಹ ಪತ್ತೆಯಾಗಿದೆ. ಬ್ಯಾಂಕ್ ವ್ಯವಸ್ಥಾಪಕರು ನೀಡಿದ ದೂರಿನ ಮೇರೆಗೆ ವಿರಾಜಪೇಟೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತರ ಸ್ವಗೃಹವಾದ ಗದಗ ಜಿಲ್ಲೆಗೆ ರವಾನಿಸಲಾಯಿತು.
ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…
ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…
ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…
ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…
ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…
ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲ…