ಜಿಲ್ಲೆಗಳು

ವಿರಾಜಪೇಟೆ : ಹುಟ್ಟುಹಬ್ಬ ಆಚರಿಸಿ ಮಲಗಿದ ವ್ಯಕ್ತಿ, ಹೊರಳಿದ್ದು ಸಾವಿನತ್ತ!

ವಿರಾಜಪೇಟೆ: ಹುಟ್ಟು ಹಬ್ಬವನ್ನು ಆಚರಿಸಿ ಕೋಣೆಯಲ್ಲಿ ಮಲಗಿದ್ದ ವ್ಯಕ್ತಿ ಬೆಳಿಗ್ಗೆ ಮೃತನಾಗಿ ಪತ್ತೆಯಾದ ಘಟನೆ ನಗರದ ಹೃದಯ ಭಾಗದಲ್ಲಿ ನಡೆದಿದೆ. ಗದಗ ಜಿಲ್ಲೆಯ ಯೆಂಡಿಗೇರಿ ಗ್ರಾಮದ ನಿವಾಸಿ ಕೊಡಗು ಡಿ.ಸಿ.ಸಿ. ಬ್ಯಾಂಕ್‌ನ ಅಧ್ಯಕ್ಷರ ವಾಹನ ಚಾಲಕರಾಗಿ ಸೇವೆ ಸಲ್ಲಿಸುತಿದ್ದ ವಿನಯ್ ಕುಮಾರ್ ಯೆಂಡಿಗೇರಿ(೩೦) ಮೃತ ದುರ್ದೈವಿ.
ಮೃತ ವ್ಯಕ್ತಿಯು ಗದಗ ಜಿಲ್ಲೆಯ ಯೆಂಡಿಗೇರಿ ಗ್ರಾಮದಿಂದ ಕೊಡಗು ಜಿಲ್ಲೆಯ ಕೊಡಗು ಡಿ.ಸಿ.ಸಿ ಬ್ಯಾಂಕ್ ನ ಕಾರು ಚಾಲಕನಾಗಿ ನೇಮಕಗೊಂಡಿದ್ದರು. ಸುಮಾರು ೧೮ ತಿಂಗಳುಗಳಿಂದ ಬ್ಯಾಂಕ್ ಅಧ್ಯಕ್ಷರ ಕಾರು ಚಾಲಕನಾಗಿ ಸೇವೆ ಸಲ್ಲಿಸುತಿದ್ದರು. ಮೇ ತಿಂಗಳಲ್ಲಿ ಮೃತರು ವಿವಾಹವಾಗಿದ್ದರು.

ಸೆ.೫ರಂದು ಬೆಳಿಗ್ಗೆ ಮಡಿಕೇರಿಗೆ ತೆರಳಿ ಸಂಜೆ ೯ ಗಂಟೆಗೆ ವಿರಾಜಪೇಟೆಗೆ ಆಗಮಿಸಿದ್ದಾರೆ. ವಿರಾಜಪೇಟೆ ಡಿ.ಸಿ.ಸಿ. ಬ್ಯಾಂಕ್‌ನ ವಿಶ್ರಾಂತಿ ಕೊಠಡಿಯಲ್ಲಿ ಮಲಗಿದ್ದ ವಿನಯ್, ಮಂಗಳವಾರ ಬೆಳಿಗ್ಗೆ ೯.೩೦ ಗಂಟೆಯಾದರೂ ಹೊರ ಬಂದಿರಲಿಲ್ಲ. ವಿರಾಜಪೇಟೆ ಡಿ.ಸಿ.ಸಿ. ಬ್ಯಾಂಕ್ ಶಾಖೆಯ ವ್ಯವಸ್ಥಾಪಕ ಸುಬ್ಬಯ್ಯ ನೀಡಿದ ದೂರಿನ ಮೇರೆಗೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಬೀಗ ಒಡೆದು ಒಳ ಪ್ರವೇಶ ಮಾಡಿದ ಪೊಲೀಸರಿಗೆ ಕೋಣೆಯಲ್ಲಿ ಅಂಗಾತವಾಗಿ ಬಿದ್ದಿರುವಂತೆ ವಿನಯ್ ಅವರ ಮೃತದೇಹ ಪತ್ತೆಯಾಗಿದೆ. ಬ್ಯಾಂಕ್ ವ್ಯವಸ್ಥಾಪಕರು ನೀಡಿದ ದೂರಿನ ಮೇರೆಗೆ ವಿರಾಜಪೇಟೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತರ ಸ್ವಗೃಹವಾದ ಗದಗ ಜಿಲ್ಲೆಗೆ ರವಾನಿಸಲಾಯಿತು.

andolanait

Recent Posts

ಡಿಕೆಶಿ ಸರ್ಕಾರಕ್ಕೆ ಶತದಿನಗಳ ಸಂಭ್ರಮ ; ಬಣ್ಣ ಬಣ್ಣದ ಬೆಳಕಿನಲ್ಲಿ ಝಗಮಗಿಸಲಿದೆ ಮೈಸೂರು ಅರಮನೆ

ಮೈಸೂರು :  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಸೆ.10ಕ್ಕೆ ನೂರು ದಿನಗಳ ಸಂಭ್ರಮ. ಈ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಸೆ.10…

9 hours ago

ದಸರಾ ಮಹೋತ್ಸವದಲ್ಲಿ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿ ; ಜಿಲ್ಲಾಧಿಕಾರ ಜಿ.ಲಕ್ಷ್ಮೀಕಾಂತ ರೆಡ್ಡಿ ಮಾಹಿತಿ

ಮೈಸೂರು : ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು…

14 hours ago

ಹೊಸ ಪರಿಕಲ್ಪನೆಯೊಂದಿಗೆ ದೀಪಾಲಂಕಾರ ರೂಪಿಸಿ ; ರಮೇಶ್‌ ಬಂಡಿಸಿದ್ದೇಗೌಡ

ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿದ್ಯುತ್ ದೀಪಾಲಂಕಾರಕ್ಕೆ ಈ ಬಾರಿ ಹೊಸ ಮೆರುಗು ನೀಡುವುದರ ಜತೆಗೆ ಆಕರ್ಷಕ…

14 hours ago

ದಸರಾ ಮಹೋತ್ಸವದಲ್ಲಿ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿ: ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ

ಮೈಸೂರು: ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು ಜಿಲ್ಲಾಧಿಕಾರಿ…

18 hours ago

ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಗೆ ED ಶಾಕ್‌

ಬೆಂಗಳೂರು: ಅಬಕಾರಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದೆ.…

19 hours ago

ಓದುಗರ ಪತ್ರ: ಬಂದೂಕು ಹಿಡಿದಿರುವ ನಾಯಕನ ಚಿತ್ರದ ಜಾಹೀರಾತಿಗೆ ‘ಇಲ್ಲೂ’ ಪ್ರೋತ್ಸಾಹ ಏಕೆ?

ಇತ್ತೀಚೆಗೆ ಬಿಡುಗಡೆಯಾದ ಟಾಕ್ಸಿಕ್ ಚಲನಚಿತ್ರವು ಕನ್ನಡ ಸೇರಿ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ಪ್ರಚಾರಕ್ಕಾಗಿ ಪೋಸ್ಟರ್ ಅನ್ನು…

23 hours ago