ಜಿಲ್ಲೆಗಳು

ವಿರಾಜಪೇಟೆ : ಹುಟ್ಟುಹಬ್ಬ ಆಚರಿಸಿ ಮಲಗಿದ ವ್ಯಕ್ತಿ, ಹೊರಳಿದ್ದು ಸಾವಿನತ್ತ!

ವಿರಾಜಪೇಟೆ: ಹುಟ್ಟು ಹಬ್ಬವನ್ನು ಆಚರಿಸಿ ಕೋಣೆಯಲ್ಲಿ ಮಲಗಿದ್ದ ವ್ಯಕ್ತಿ ಬೆಳಿಗ್ಗೆ ಮೃತನಾಗಿ ಪತ್ತೆಯಾದ ಘಟನೆ ನಗರದ ಹೃದಯ ಭಾಗದಲ್ಲಿ ನಡೆದಿದೆ. ಗದಗ ಜಿಲ್ಲೆಯ ಯೆಂಡಿಗೇರಿ ಗ್ರಾಮದ ನಿವಾಸಿ ಕೊಡಗು ಡಿ.ಸಿ.ಸಿ. ಬ್ಯಾಂಕ್‌ನ ಅಧ್ಯಕ್ಷರ ವಾಹನ ಚಾಲಕರಾಗಿ ಸೇವೆ ಸಲ್ಲಿಸುತಿದ್ದ ವಿನಯ್ ಕುಮಾರ್ ಯೆಂಡಿಗೇರಿ(೩೦) ಮೃತ ದುರ್ದೈವಿ.
ಮೃತ ವ್ಯಕ್ತಿಯು ಗದಗ ಜಿಲ್ಲೆಯ ಯೆಂಡಿಗೇರಿ ಗ್ರಾಮದಿಂದ ಕೊಡಗು ಜಿಲ್ಲೆಯ ಕೊಡಗು ಡಿ.ಸಿ.ಸಿ ಬ್ಯಾಂಕ್ ನ ಕಾರು ಚಾಲಕನಾಗಿ ನೇಮಕಗೊಂಡಿದ್ದರು. ಸುಮಾರು ೧೮ ತಿಂಗಳುಗಳಿಂದ ಬ್ಯಾಂಕ್ ಅಧ್ಯಕ್ಷರ ಕಾರು ಚಾಲಕನಾಗಿ ಸೇವೆ ಸಲ್ಲಿಸುತಿದ್ದರು. ಮೇ ತಿಂಗಳಲ್ಲಿ ಮೃತರು ವಿವಾಹವಾಗಿದ್ದರು.

ಸೆ.೫ರಂದು ಬೆಳಿಗ್ಗೆ ಮಡಿಕೇರಿಗೆ ತೆರಳಿ ಸಂಜೆ ೯ ಗಂಟೆಗೆ ವಿರಾಜಪೇಟೆಗೆ ಆಗಮಿಸಿದ್ದಾರೆ. ವಿರಾಜಪೇಟೆ ಡಿ.ಸಿ.ಸಿ. ಬ್ಯಾಂಕ್‌ನ ವಿಶ್ರಾಂತಿ ಕೊಠಡಿಯಲ್ಲಿ ಮಲಗಿದ್ದ ವಿನಯ್, ಮಂಗಳವಾರ ಬೆಳಿಗ್ಗೆ ೯.೩೦ ಗಂಟೆಯಾದರೂ ಹೊರ ಬಂದಿರಲಿಲ್ಲ. ವಿರಾಜಪೇಟೆ ಡಿ.ಸಿ.ಸಿ. ಬ್ಯಾಂಕ್ ಶಾಖೆಯ ವ್ಯವಸ್ಥಾಪಕ ಸುಬ್ಬಯ್ಯ ನೀಡಿದ ದೂರಿನ ಮೇರೆಗೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಬೀಗ ಒಡೆದು ಒಳ ಪ್ರವೇಶ ಮಾಡಿದ ಪೊಲೀಸರಿಗೆ ಕೋಣೆಯಲ್ಲಿ ಅಂಗಾತವಾಗಿ ಬಿದ್ದಿರುವಂತೆ ವಿನಯ್ ಅವರ ಮೃತದೇಹ ಪತ್ತೆಯಾಗಿದೆ. ಬ್ಯಾಂಕ್ ವ್ಯವಸ್ಥಾಪಕರು ನೀಡಿದ ದೂರಿನ ಮೇರೆಗೆ ವಿರಾಜಪೇಟೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತರ ಸ್ವಗೃಹವಾದ ಗದಗ ಜಿಲ್ಲೆಗೆ ರವಾನಿಸಲಾಯಿತು.

andolanait

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

3 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

3 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

4 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

6 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

6 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

6 hours ago