ವಿರಾಜಪೇಟೆ: ಹುಟ್ಟು ಹಬ್ಬವನ್ನು ಆಚರಿಸಿ ಕೋಣೆಯಲ್ಲಿ ಮಲಗಿದ್ದ ವ್ಯಕ್ತಿ ಬೆಳಿಗ್ಗೆ ಮೃತನಾಗಿ ಪತ್ತೆಯಾದ ಘಟನೆ ನಗರದ ಹೃದಯ ಭಾಗದಲ್ಲಿ ನಡೆದಿದೆ. ಗದಗ ಜಿಲ್ಲೆಯ ಯೆಂಡಿಗೇರಿ ಗ್ರಾಮದ ನಿವಾಸಿ ಕೊಡಗು ಡಿ.ಸಿ.ಸಿ. ಬ್ಯಾಂಕ್ನ ಅಧ್ಯಕ್ಷರ ವಾಹನ ಚಾಲಕರಾಗಿ ಸೇವೆ ಸಲ್ಲಿಸುತಿದ್ದ ವಿನಯ್ ಕುಮಾರ್ ಯೆಂಡಿಗೇರಿ(೩೦) ಮೃತ ದುರ್ದೈವಿ.
ಮೃತ ವ್ಯಕ್ತಿಯು ಗದಗ ಜಿಲ್ಲೆಯ ಯೆಂಡಿಗೇರಿ ಗ್ರಾಮದಿಂದ ಕೊಡಗು ಜಿಲ್ಲೆಯ ಕೊಡಗು ಡಿ.ಸಿ.ಸಿ ಬ್ಯಾಂಕ್ ನ ಕಾರು ಚಾಲಕನಾಗಿ ನೇಮಕಗೊಂಡಿದ್ದರು. ಸುಮಾರು ೧೮ ತಿಂಗಳುಗಳಿಂದ ಬ್ಯಾಂಕ್ ಅಧ್ಯಕ್ಷರ ಕಾರು ಚಾಲಕನಾಗಿ ಸೇವೆ ಸಲ್ಲಿಸುತಿದ್ದರು. ಮೇ ತಿಂಗಳಲ್ಲಿ ಮೃತರು ವಿವಾಹವಾಗಿದ್ದರು.
ಸೆ.೫ರಂದು ಬೆಳಿಗ್ಗೆ ಮಡಿಕೇರಿಗೆ ತೆರಳಿ ಸಂಜೆ ೯ ಗಂಟೆಗೆ ವಿರಾಜಪೇಟೆಗೆ ಆಗಮಿಸಿದ್ದಾರೆ. ವಿರಾಜಪೇಟೆ ಡಿ.ಸಿ.ಸಿ. ಬ್ಯಾಂಕ್ನ ವಿಶ್ರಾಂತಿ ಕೊಠಡಿಯಲ್ಲಿ ಮಲಗಿದ್ದ ವಿನಯ್, ಮಂಗಳವಾರ ಬೆಳಿಗ್ಗೆ ೯.೩೦ ಗಂಟೆಯಾದರೂ ಹೊರ ಬಂದಿರಲಿಲ್ಲ. ವಿರಾಜಪೇಟೆ ಡಿ.ಸಿ.ಸಿ. ಬ್ಯಾಂಕ್ ಶಾಖೆಯ ವ್ಯವಸ್ಥಾಪಕ ಸುಬ್ಬಯ್ಯ ನೀಡಿದ ದೂರಿನ ಮೇರೆಗೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಬೀಗ ಒಡೆದು ಒಳ ಪ್ರವೇಶ ಮಾಡಿದ ಪೊಲೀಸರಿಗೆ ಕೋಣೆಯಲ್ಲಿ ಅಂಗಾತವಾಗಿ ಬಿದ್ದಿರುವಂತೆ ವಿನಯ್ ಅವರ ಮೃತದೇಹ ಪತ್ತೆಯಾಗಿದೆ. ಬ್ಯಾಂಕ್ ವ್ಯವಸ್ಥಾಪಕರು ನೀಡಿದ ದೂರಿನ ಮೇರೆಗೆ ವಿರಾಜಪೇಟೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತರ ಸ್ವಗೃಹವಾದ ಗದಗ ಜಿಲ್ಲೆಗೆ ರವಾನಿಸಲಾಯಿತು.
ಬೆಂಗಳೂರು : 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ದಾಖಲೆಯ ಫಲಿತಾಂಶ ಬಂದಿದೆ. ಶಿಕ್ಷಣ ಸಚಿವ…
ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಈ ಬಾರಿ ರಾಜ್ಯದ ವಿವಿಧ ಜಿಲ್ಲೆಗಳ ಫಲಿತಾಂಶದಲ್ಲಿ ಗಮನಾರ್ಹ ವ್ಯತ್ಯಾಸ ಕಂಡುಬಂದಿದೆ.…
ಬೆಂಗಳೂರು : 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶವನ್ನು ಬುಧವಾರ (ಏಪ್ರಿಲ್ 23) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ…
ಕೈಗಾರಿಕೆಗಳ ತ್ಯಾಜ್ಯ, ಒಳಚರಂಡಿ ನೀರು ಸೇರಿ ಸ್ನಾನಘಟ್ಟದ ನೀರು ಕಲ್ಮಶ, ಸ್ನಾನ ಮಾಡುವ ಭಕ್ತರಿಗೆ ರೋಗದ ಭೀತಿ ಎಸ್.ಎಸ್.ಭಟ್ ನಂಜನಗೂಡು…
ಸಾಲಿಗ್ರಾಮ : ಪಟ್ಟಣದ ಹೊರವಲಯದಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ಸಾವಿಗೀಡಾಗಿ, ಮೂವರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಪಟ್ಟಣದಿಂದ ಕೇರಳಾಪುರಕ್ಕೆ…
ಕೆ.ಆರ್.ನಗರ : ಪ್ರತ್ಯೇಕ ಪ್ರಕರಣಗಳಲ್ಲಿ ವಿದ್ಯುತ್ ಸ್ಪರ್ಶಕ್ಕೀಡಾಗಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಒಂದು ಪ್ರಕರಣದಲ್ಲಿ ಹೊಸ ಅಗ್ರಹಾರ ಹೋಬಳಿಯ…