ಜಿಲ್ಲೆಗಳು

ಕಾಡಂಚಿನ ನಿವಾಸಿಗಳಿಂದ ಶಾಸಕರಿಗೆ ಮನವಿ

ವಿರಾಜಪೇಟೆ: ಅರಣ್ಯದ ಅಂಚಿನಲ್ಲಿ ವಾಸಮಾಡುವ ನಿವಾಸಿಗಳಿಗೆ ಅರಣ್ಯ ಕಾಯ್ದೆ ಅನ್ವಯ ಕೃಷಿ ಮಾಡಲು ಸ್ಥಳವನ್ನು ನೀಡಿದ್ದರೂ ಸರ್ಕಾರದ ವಿವಿಧ ಸೌಲಭ್ಯಗಳಿಂದ ವಂಚಿತರಾಗಿದ್ದೇವೆ. ನಿವಾಸಿಗಳಿಗೆ ವೈಯಕ್ತಿಕ ಪಹಣಿ ಪತ್ರವನ್ನು ನೀಡಬೇಕು ಎಂದು ಶಾಸಕರಾದ ಕೆ.ಜಿ. ಬೋಪಯ್ಯ ಅವರಿಗೆ ಮನವಿ ಸಲ್ಲಿಸಿದರು.
ತಾಲ್ಲೂಕಿನ ಚೆನ್ನಯ್ಯನಕೋಟೆ ಮತ್ತು ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಣ್ಯ ಅಂಚಿನಲ್ಲಿ ವಾಸ ಮಾಡುವ ನಿವಾಸಿಗಳಿಗೆ ವೈಯಕ್ತಿಕ ಪಹಣಿ ಪತ್ರ (ಆರ್.ಟಿ.ಸಿ.) ಹಾಗೂ ಕೃಷಿಗಾಗಿ ಬಳಸಲು ೧೦ ಹೆಚ್.ಪಿ ವಿದ್ಯುತ್ ಉಚಿತವಾಗಿ ನೀಡಬೇಕು ಎಂದು ಗ್ರಾಪಂ ಸದಸ್ಯರಾದ ಜೆ.ಕೆ.ಅಪ್ಪಾಜಿ ಅವರ ನೇತೃತ್ವದಲ್ಲಿ ಮನವಿ ಪತ್ರ ಸಲ್ಲಿಸಲಾಯಿತು.

ಮನವಿ ಸ್ವೀಕರಿಸಿ ಮಾತನಾಡಿದ ಶಾಸಕರು, ಅರಣ್ಯ ಹಕ್ಕು ಅಧಿನಿಯಮದಂತೆ ಅರಣ್ಯ ಅಂಚಿನ ನಿವಾಸಿಗಳಿಗೆ ಹಕ್ಕುಪತ್ರ ನೀಡಲಾಗಿದ್ದು, ಕಂದಾಯ ಇಲಾಖೆಯಿಂದ ನೀಡಿರುವ ಪಹಣಿ ಪತ್ರದಲ್ಲಿ ಸಾಮೂಹಿಕವಾಗಿ ಕುಟುಂಬಗಳನ್ನು ಒಳಗೊಂಡ ಹಕ್ಕುಪತ್ರಗಳನ್ನು ನೀಡಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.
ಮಾಲ್ದಾರೆ ಗ್ರಾಮ ಪಂಚಾಯಿತಿ ಸದಸ್ಯರಾದ ಜೆ.ಎಲ್.ಶೋಭ, ಚೆನ್ನಯ್ಯನಕೋಟೆ  ಗ್ರಾಮ ಪಂಚಾಯಿತಿ ಸದಸ್ಯರಾದ ಜೆ.ಎ. ಜಯಮ್ಮ, ಲ್ಯಾಂಪ್ಸ್ ಸೊಸೈಟಿಯ ನಿರ್ದೇಶಕರಾದ ಜೆ.ಕೆ.ಅಣ್ಣಯ್ಯ, ಚಿಕ್ಕರೇಷ್ಮಯ್ಯ, ಪಿ.ಎಸ್.ಕಾಶಿ, ಪಿ.ರವಿ, ಪಿ.ಎಂ.ಮಲ್ಲ, ಪಾಪಣ್ಣ ಹಾಜರಿದ್ದರು.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

14 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

18 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

18 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

18 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

18 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

18 hours ago