ಜಿಲ್ಲೆಗಳು

ಕಾಡಂಚಿನ ನಿವಾಸಿಗಳಿಂದ ಶಾಸಕರಿಗೆ ಮನವಿ

ವಿರಾಜಪೇಟೆ: ಅರಣ್ಯದ ಅಂಚಿನಲ್ಲಿ ವಾಸಮಾಡುವ ನಿವಾಸಿಗಳಿಗೆ ಅರಣ್ಯ ಕಾಯ್ದೆ ಅನ್ವಯ ಕೃಷಿ ಮಾಡಲು ಸ್ಥಳವನ್ನು ನೀಡಿದ್ದರೂ ಸರ್ಕಾರದ ವಿವಿಧ ಸೌಲಭ್ಯಗಳಿಂದ ವಂಚಿತರಾಗಿದ್ದೇವೆ. ನಿವಾಸಿಗಳಿಗೆ ವೈಯಕ್ತಿಕ ಪಹಣಿ ಪತ್ರವನ್ನು ನೀಡಬೇಕು ಎಂದು ಶಾಸಕರಾದ ಕೆ.ಜಿ. ಬೋಪಯ್ಯ ಅವರಿಗೆ ಮನವಿ ಸಲ್ಲಿಸಿದರು.
ತಾಲ್ಲೂಕಿನ ಚೆನ್ನಯ್ಯನಕೋಟೆ ಮತ್ತು ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಣ್ಯ ಅಂಚಿನಲ್ಲಿ ವಾಸ ಮಾಡುವ ನಿವಾಸಿಗಳಿಗೆ ವೈಯಕ್ತಿಕ ಪಹಣಿ ಪತ್ರ (ಆರ್.ಟಿ.ಸಿ.) ಹಾಗೂ ಕೃಷಿಗಾಗಿ ಬಳಸಲು ೧೦ ಹೆಚ್.ಪಿ ವಿದ್ಯುತ್ ಉಚಿತವಾಗಿ ನೀಡಬೇಕು ಎಂದು ಗ್ರಾಪಂ ಸದಸ್ಯರಾದ ಜೆ.ಕೆ.ಅಪ್ಪಾಜಿ ಅವರ ನೇತೃತ್ವದಲ್ಲಿ ಮನವಿ ಪತ್ರ ಸಲ್ಲಿಸಲಾಯಿತು.

ಮನವಿ ಸ್ವೀಕರಿಸಿ ಮಾತನಾಡಿದ ಶಾಸಕರು, ಅರಣ್ಯ ಹಕ್ಕು ಅಧಿನಿಯಮದಂತೆ ಅರಣ್ಯ ಅಂಚಿನ ನಿವಾಸಿಗಳಿಗೆ ಹಕ್ಕುಪತ್ರ ನೀಡಲಾಗಿದ್ದು, ಕಂದಾಯ ಇಲಾಖೆಯಿಂದ ನೀಡಿರುವ ಪಹಣಿ ಪತ್ರದಲ್ಲಿ ಸಾಮೂಹಿಕವಾಗಿ ಕುಟುಂಬಗಳನ್ನು ಒಳಗೊಂಡ ಹಕ್ಕುಪತ್ರಗಳನ್ನು ನೀಡಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.
ಮಾಲ್ದಾರೆ ಗ್ರಾಮ ಪಂಚಾಯಿತಿ ಸದಸ್ಯರಾದ ಜೆ.ಎಲ್.ಶೋಭ, ಚೆನ್ನಯ್ಯನಕೋಟೆ  ಗ್ರಾಮ ಪಂಚಾಯಿತಿ ಸದಸ್ಯರಾದ ಜೆ.ಎ. ಜಯಮ್ಮ, ಲ್ಯಾಂಪ್ಸ್ ಸೊಸೈಟಿಯ ನಿರ್ದೇಶಕರಾದ ಜೆ.ಕೆ.ಅಣ್ಣಯ್ಯ, ಚಿಕ್ಕರೇಷ್ಮಯ್ಯ, ಪಿ.ಎಸ್.ಕಾಶಿ, ಪಿ.ರವಿ, ಪಿ.ಎಂ.ಮಲ್ಲ, ಪಾಪಣ್ಣ ಹಾಜರಿದ್ದರು.

andolanait

Recent Posts

ಮೈಸೂರು ಕರಗ ಮಹೋತ್ಸವ: ನಗರದಲ್ಲಿ ಅದ್ಧೂರಿ ಮೆರವಣಿಗೆ

ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…

4 hours ago

ಮದ್ಯಪ್ರಿಯರಿಗೆ ಶಾಕ್‌ ಕೊಟ್ಟ ಸರ್ಕಾರ: ಮೇ.1ರಿಂದ ಮದ್ಯದ ಬೆಲೆ ಏರಿಕೆ

ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…

8 hours ago

ಹೆಚ್ಚಿದ ಬಿಸಿಲಿನ ತಾಪಮಾನ: ಹೀಟ್ ವೇವ್, ಹೀಟ್ ಸ್ಟ್ರೋಕ್ ಅಪಾಯ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…

8 hours ago

ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಟ ಚೇತನ್‌ ಅಹಿಂಸಾ

ಬೆಂಗಳೂರು: ನಟ ರಾಜ್‌ ಕುಮಾರ್‌ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್‌ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್‌…

8 hours ago

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವ ವೆಂಕಟೇಶ್‌

ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್.‌ ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…

9 hours ago

ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…

9 hours ago