ಜಿಲ್ಲೆಗಳು

ಕಾಡಂಚಿನ ನಿವಾಸಿಗಳಿಂದ ಶಾಸಕರಿಗೆ ಮನವಿ

ವಿರಾಜಪೇಟೆ: ಅರಣ್ಯದ ಅಂಚಿನಲ್ಲಿ ವಾಸಮಾಡುವ ನಿವಾಸಿಗಳಿಗೆ ಅರಣ್ಯ ಕಾಯ್ದೆ ಅನ್ವಯ ಕೃಷಿ ಮಾಡಲು ಸ್ಥಳವನ್ನು ನೀಡಿದ್ದರೂ ಸರ್ಕಾರದ ವಿವಿಧ ಸೌಲಭ್ಯಗಳಿಂದ ವಂಚಿತರಾಗಿದ್ದೇವೆ. ನಿವಾಸಿಗಳಿಗೆ ವೈಯಕ್ತಿಕ ಪಹಣಿ ಪತ್ರವನ್ನು ನೀಡಬೇಕು ಎಂದು ಶಾಸಕರಾದ ಕೆ.ಜಿ. ಬೋಪಯ್ಯ ಅವರಿಗೆ ಮನವಿ ಸಲ್ಲಿಸಿದರು.
ತಾಲ್ಲೂಕಿನ ಚೆನ್ನಯ್ಯನಕೋಟೆ ಮತ್ತು ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಣ್ಯ ಅಂಚಿನಲ್ಲಿ ವಾಸ ಮಾಡುವ ನಿವಾಸಿಗಳಿಗೆ ವೈಯಕ್ತಿಕ ಪಹಣಿ ಪತ್ರ (ಆರ್.ಟಿ.ಸಿ.) ಹಾಗೂ ಕೃಷಿಗಾಗಿ ಬಳಸಲು ೧೦ ಹೆಚ್.ಪಿ ವಿದ್ಯುತ್ ಉಚಿತವಾಗಿ ನೀಡಬೇಕು ಎಂದು ಗ್ರಾಪಂ ಸದಸ್ಯರಾದ ಜೆ.ಕೆ.ಅಪ್ಪಾಜಿ ಅವರ ನೇತೃತ್ವದಲ್ಲಿ ಮನವಿ ಪತ್ರ ಸಲ್ಲಿಸಲಾಯಿತು.

ಮನವಿ ಸ್ವೀಕರಿಸಿ ಮಾತನಾಡಿದ ಶಾಸಕರು, ಅರಣ್ಯ ಹಕ್ಕು ಅಧಿನಿಯಮದಂತೆ ಅರಣ್ಯ ಅಂಚಿನ ನಿವಾಸಿಗಳಿಗೆ ಹಕ್ಕುಪತ್ರ ನೀಡಲಾಗಿದ್ದು, ಕಂದಾಯ ಇಲಾಖೆಯಿಂದ ನೀಡಿರುವ ಪಹಣಿ ಪತ್ರದಲ್ಲಿ ಸಾಮೂಹಿಕವಾಗಿ ಕುಟುಂಬಗಳನ್ನು ಒಳಗೊಂಡ ಹಕ್ಕುಪತ್ರಗಳನ್ನು ನೀಡಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.
ಮಾಲ್ದಾರೆ ಗ್ರಾಮ ಪಂಚಾಯಿತಿ ಸದಸ್ಯರಾದ ಜೆ.ಎಲ್.ಶೋಭ, ಚೆನ್ನಯ್ಯನಕೋಟೆ  ಗ್ರಾಮ ಪಂಚಾಯಿತಿ ಸದಸ್ಯರಾದ ಜೆ.ಎ. ಜಯಮ್ಮ, ಲ್ಯಾಂಪ್ಸ್ ಸೊಸೈಟಿಯ ನಿರ್ದೇಶಕರಾದ ಜೆ.ಕೆ.ಅಣ್ಣಯ್ಯ, ಚಿಕ್ಕರೇಷ್ಮಯ್ಯ, ಪಿ.ಎಸ್.ಕಾಶಿ, ಪಿ.ರವಿ, ಪಿ.ಎಂ.ಮಲ್ಲ, ಪಾಪಣ್ಣ ಹಾಜರಿದ್ದರು.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

10 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

10 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

10 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

10 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

11 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

11 hours ago