ಜಿಲ್ಲೆಗಳು

ವೀರನಹೊಸಹಳ್ಳಿಯಲ್ಲಿ ಆಪರೇಶನ್‌ ಟೈಗರ್‌

ಜಾನುವಾರು ಭಕ್ಷಕ ಹುಲಿ ಸೆರೆಗೆ ಕಾರ್ಯಾಚರಣೆ ಆರಂಭ

ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕು ಹನಗೋಡು ಹೋಬಳಿ ಸುತ್ತಮುತ್ತ 10ಕ್ಕೂ ಹೆಚ್ಚು ಜಾನುವಾರುಗಳನ್ನು ಕೊಂದಿರುವ ಹುಲಿಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಗುರುವಾರ ಕಾರ್ಯಾಚರಣೆ ಆರಂಭಿಸಿದೆ.
ಗ್ರಾಮಸ್ಥರು ನೀಡಿದ ದೂರುಗಳ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಗುರುವಾರ ಮುಂಜಾನೆ ಐದು ಗಂಟೆಯಿಂದಲೇ ಕಾರ್ಯಾಚರಣೆ ಆರಂಭಿಸಿದೆ. ಮತ್ತಿಗೋಡು ಆನೆ ಶಿಬಿರದ ಭೀಮ ಆನೆ ಸಹಾಯದಿಂದ ಬಿಆರ್ ಕಾವಲು, ಶೆಟ್ಟಿಹಳ್ಳಿ ಅರಣ್ಯ ಮತ್ತು ತೋಟಗಳ ಸುತ್ತಮುತ್ತ ಶೋಧ ಕಾರ್ಯಾಚರಣೆ ಪ್ರಾರಂಭವಾಗಿದೆ.
ಕಾರ್ಯಾಚರಣೆಯ ನಡುವೆಯೇ ಹುಲಿಯು ಹೆಮ್ಮಿಗೆ ಹಾಡಿಯ ತಾಯಮ್ಮ ಅವರಿಗೆ ಸೇರಿದ ಹಸುವನ್ನು ಎಳೆದುಕೊಂಡು ಹೋಗಿ ತಿಂದಿರುವ ಘಟನೆಯೂ ನಡೆದಿದೆ. ಈ ಭಾಗದಲ್ಲಿ ಬೆಳಗ್ಗೆ 10 ಗಂಟೆವರೆಗೂ ಹುಲಿಗಾಗಿ ಹುಡುಕಾಟ ನಡೆಸಿದರೂ ಹುಲಿ ಪತ್ತೆಯಾಗಿಲ್ಲ.
ಕೆಲ ದಿನಗಳ ಹಿಂದೆ ಹನಗೋಡು, ಅಬ್ಬೂರು, ಸಿಂಡೆನಹಳ್ಳಿ, ಹೆಮ್ಮಿಗೆ ಗ್ರಾಮಗಳಲ್ಲಿ ಈ ಹುಲಿ ಹತ್ತಕ್ಕೂ ಹೆಚ್ಚು ಹಸುಗಳನ್ನು ಕೊಂದು ಹಾಕಿದೆ. ಹುಲಿಯನ್ನು ಸೆರೆ ಹಿಡಿಯಲು ಅರಣ್ಯಾಧಿಕಾರಿಗಳು ಈ ಸ್ಥಳದಲ್ಲಿ ಬೋನು ಇಟ್ಟಿದ್ದರೂ ಪ್ರಯೋಜನವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಈಗ ಸೆರೆ ಕಾರ್ಯಾಚರಣೆ ಆರಂಭಿಸಲಾಗಿದೆ.
ಹುಲಿ ಕಾಣಿಸಿಕೊಂಡಿರುವ ವಿವಿಧೆಡೆ ಅತ್ಯಾಧುನಿಕ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, 11 ಮಂದಿ ಅರಣ್ಯ ಸಿಬ್ಬಂದಿ ಮರದ ಮೇಲಿನಿಂದ ಹುಲಿಯ ಚಲನವಲನದ ಮೇಲೆ ನಿಗಾ ಇಡಲು ಆರಂಭಿಸಿದ್ದಾರೆ.
ವಿಶೇಷ ಕಾರ್ಯಪಡೆಯ ನಾಲ್ಕು ಆನೆಗಳನ್ನೂ ಕಾರ್ಯಾಚರಣೆಗೆ ಬಳಸಿಕೊಳ್ಳಲಾಗುತ್ತಿದೆ. ಆನೆ ಕಾರ್ಯಪಡೆಯ ಎಂಟು ಮಂದಿ ಸಿಬ್ಬಂದಿ ಸ್ಥಳದಲ್ಲಿಯೇ ಮೊಕ್ಕಾಂ ಹೂಡಿ ಹುಲಿ ಸೆರೆ ಕಾರ್ಯಾಚರಣೆಗೆ ಸಹಕರಿಸುತ್ತಿದ್ದಾರೆ. ಡಿಸಿಎಫ್ ಡಾ.ಹರ್ಷವರ್ದನ್ ಮಾರ್ಗದರ್ಶನದಲ್ಲಿ ಎಸಿಎಫ್ ಧನಂಜಯ್, ಆರ್ ಎಫ್ ಒ ರತನ್ ಹಾಗೂ ಸಿಬ್ಬಂದಿ ವರ್ಗ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.

ಡಿಸಿಎಫ್ ಡಾ ಹರ್ಷವರ್ಧನ್ ಮಾತನಾಡಿ ಹುಲಿಯಿಂದ ಜಾನುವಾರುಗಳನ್ನು ಕಳೆದುಕೊಂಡವರಿಗೆ ಹೆಚ್ಚಿನ ಪರಿಹಾರ ನೀಡಲು ಉನ್ನತ ಅಧಿಕಾರಿಗಳೊಂದಿಗೆ ಮಾತನಾಡುವುದಾಗಿ ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಹುಲಿ ಓಡಾಡುತ್ತಿರುವುದು ನಮ್ಮ ಗಮನಕ್ಕೆ ಬಂದಿದ್ದು, ಪಗ್ ಗುರುತುಗಳೂ ಪತ್ತೆಯಾಗಿವೆ. ಅಕ್ಕಪಕ್ಕದ ಎಸ್ಟೇಟ್‌ ಗಳಲ್ಲಿ ಕ್ಯಾಮೆರಾ ಅಳವಡಿಸಿದ್ದು, ಹುಲಿಗೆ ಆಮಿಷವೊಡ್ಡಲು ಮೇಕೆಯೊಂದಿಗೆ ಪಂಜರವನ್ನೂ ಇರಿಸಿದ್ದೇವೆ ಎಂದು ಹುಣಸೂರು ವಲಯದ ವಲಯರಣ್ಯಾಧಿಕಾರಿ ರತನ್ ತಿಳಿಸಿದ್ದಾರೆ

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

7 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

7 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

7 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

7 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

7 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

7 hours ago