ಜಿಲ್ಲೆಗಳು

ಕಾಡುಗಳ್ಳ ವೀರಪ್ಪನ್ ನಿಂದ ಹತ್ಯೆಯಾದ ಹುತಾತ್ಮ ಶ್ರೀನಿವಾಸ್ ರವರ ಪುತ್ಥಳಿ ಅನಾವರಣ ನಾಳೆ

ಹನೂರು: ಕಾಡುಗಳ ವೀರಪ್ಪನಿಂದ ಹತರಾದ ದಿವಂಗತ ಪಿ ಶ್ರೀನಿವಾಸ್ ಅವರ ಹುತಾತ್ಮರ ದಿನಾಚರಣೆ ಅಂಗವಾಗಿ ಗೋಪಿನಾಥನ ಗ್ರಾಮದ ಶ್ರೀ ಮಾರಿಯಮ್ಮನ್ ದೇವಸ್ಥಾನ ಹಾಗೂ ಅರಣ್ಯ ಇಲಾಖೆ ವಸತಿಗೃಹದಲ್ಲಿ ಸೆಪ್ಟೆಂಬರ್ 11ರಂದು ದಿವಂಗತ ಪಿ ಶ್ರೀನಿವಾಸ್ ಅವರ ಪುತ್ಥಳಿ ಅನಾವರಣ ಕಾರ್ಯಕ್ರಮ ನಡೆಯಲಿದೆ.

1992 ಸೆಪ್ಟೆಂಬರ್ 11ರಂದು ಕಾಡುಗಳ ವೀರಪ್ಪ ನ್ ತಾನು ಶರಣಾಗುವುದಾಗಿ ಹೇಳಿ ಶ್ರೀನಿವಾಸನ್ ಅವರನ್ನು ಕರೆಸಿಕೊಂಡು ಅಮಾನುಷವಾಗಿ ಕೊಂದು ಹಾಕಿದ್ದನು. ಕಾವೇರಿ ವನ್ಯಧಾಮದ ಎರಕೆಯಂ ಅರಣ್ಯ ಪ್ರದೇಶದಲ್ಲಿ ಇಂದಿಗೂ ಪ್ರತಿ ವರ್ಷ ಸೆಪ್ಟೆಂಬರ್ 11ರಂದು ಹುತಾತ್ಮರ ದಿನಾಚರಣೆಯನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಆದರೆ ಈ ವರ್ಷ ವಿಶೇಷವಾಗಿ ಗೋಪಿನಾಥನ್ ಗ್ರಾಮದ ಮಾರಮ್ಮನ ದೇವಸ್ಥಾನದ ಮುಂಭಾಗ ಹಾಗೂ ಅರಣ್ಯ ಇಲಾಖೆ ವಸತಿ ಗೃಹದ ಮುಂಭಾಗ ಶ್ರೀನಿವಾಸ ನ್ ಅವರ ಕಂಚಿನ ಪುತ್ತಳಿ ಅನಾವರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಿಜಯಕುಮಾರ್ ಗೋಗಿ ಪುತ್ತಳಿ ಅನಾವರಣ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ. ಮಲೆ ಮಹದೇಶ್ವರ ವನ್ಯ ಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಜಿ ಸಂತೋಷ್ ಕುಮಾರ್, ಕಾವೇರಿ ವನ್ಯಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ನಂದೀಶ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎನ್ ಅಂಕರಾಜು ಸೇರಿದಂತೆ ಹಲವು ಅಧಿಕಾರಿಗಳು ಭಾಗವಹಿಸಲಿದ್ದಾರೆ.

andolanait

Recent Posts

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…

34 mins ago

ಮಂಡ್ಯ | ಐವರು ಅಂತರ್‌ ಜಿಲ್ಲಾ ಕಳ್ಳರ ಬಂಧನ

ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…

51 mins ago

ಜೂನ್‌ 21ರಂದು ನೀಟ್‌ ಮರುಪರೀಕ್ಷೆ ; ಮೈಸೂರು ಜಿಲ್ಲೆಯಲ್ಲಿ 7886 ಪರೀಕ್ಷಾರ್ಥಿಗಳ ನೋಂದಣಿ

ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…

1 hour ago

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

2 hours ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

3 hours ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

11 hours ago