ಜಿಲ್ಲೆಗಳು

ಕಾಡುಗಳ್ಳ ವೀರಪ್ಪನ್ ನಿಂದ ಹತ್ಯೆಯಾದ ಹುತಾತ್ಮ ಶ್ರೀನಿವಾಸ್ ರವರ ಪುತ್ಥಳಿ ಅನಾವರಣ ನಾಳೆ

ಹನೂರು: ಕಾಡುಗಳ ವೀರಪ್ಪನಿಂದ ಹತರಾದ ದಿವಂಗತ ಪಿ ಶ್ರೀನಿವಾಸ್ ಅವರ ಹುತಾತ್ಮರ ದಿನಾಚರಣೆ ಅಂಗವಾಗಿ ಗೋಪಿನಾಥನ ಗ್ರಾಮದ ಶ್ರೀ ಮಾರಿಯಮ್ಮನ್ ದೇವಸ್ಥಾನ ಹಾಗೂ ಅರಣ್ಯ ಇಲಾಖೆ ವಸತಿಗೃಹದಲ್ಲಿ ಸೆಪ್ಟೆಂಬರ್ 11ರಂದು ದಿವಂಗತ ಪಿ ಶ್ರೀನಿವಾಸ್ ಅವರ ಪುತ್ಥಳಿ ಅನಾವರಣ ಕಾರ್ಯಕ್ರಮ ನಡೆಯಲಿದೆ.

1992 ಸೆಪ್ಟೆಂಬರ್ 11ರಂದು ಕಾಡುಗಳ ವೀರಪ್ಪ ನ್ ತಾನು ಶರಣಾಗುವುದಾಗಿ ಹೇಳಿ ಶ್ರೀನಿವಾಸನ್ ಅವರನ್ನು ಕರೆಸಿಕೊಂಡು ಅಮಾನುಷವಾಗಿ ಕೊಂದು ಹಾಕಿದ್ದನು. ಕಾವೇರಿ ವನ್ಯಧಾಮದ ಎರಕೆಯಂ ಅರಣ್ಯ ಪ್ರದೇಶದಲ್ಲಿ ಇಂದಿಗೂ ಪ್ರತಿ ವರ್ಷ ಸೆಪ್ಟೆಂಬರ್ 11ರಂದು ಹುತಾತ್ಮರ ದಿನಾಚರಣೆಯನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಆದರೆ ಈ ವರ್ಷ ವಿಶೇಷವಾಗಿ ಗೋಪಿನಾಥನ್ ಗ್ರಾಮದ ಮಾರಮ್ಮನ ದೇವಸ್ಥಾನದ ಮುಂಭಾಗ ಹಾಗೂ ಅರಣ್ಯ ಇಲಾಖೆ ವಸತಿ ಗೃಹದ ಮುಂಭಾಗ ಶ್ರೀನಿವಾಸ ನ್ ಅವರ ಕಂಚಿನ ಪುತ್ತಳಿ ಅನಾವರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಿಜಯಕುಮಾರ್ ಗೋಗಿ ಪುತ್ತಳಿ ಅನಾವರಣ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ. ಮಲೆ ಮಹದೇಶ್ವರ ವನ್ಯ ಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಜಿ ಸಂತೋಷ್ ಕುಮಾರ್, ಕಾವೇರಿ ವನ್ಯಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ನಂದೀಶ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎನ್ ಅಂಕರಾಜು ಸೇರಿದಂತೆ ಹಲವು ಅಧಿಕಾರಿಗಳು ಭಾಗವಹಿಸಲಿದ್ದಾರೆ.

andolanait

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

2 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

4 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

12 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

12 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

12 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

12 hours ago