ಜಿಲ್ಲೆಗಳು

ವಿಶೇಷ ಚೇತನರ ಮನೆಗೆ ತೆರಳಿ ಆಧಾರ್ ಕಾರ್ಡ್ ಮಾಡಿಕೊಟ್ಟ ಕಂದಾಯ ಅಧಿಕಾರಿಗಳು!

ಕೊಳ್ಳೇಗಾಲ: ವಿಶೇಷ ಚೇತನರ ಮನೆಗೆ ಕಂದಾಯ ಅಧಿಕಾರಿಗಳೇ ತೆರಳಿ ಆಧಾರ್ ಕಾರ್ಡ್ ಮಾಡಿಕೊಟ್ಟ ಮಾನವೀಯ ಘಟನೆ ತೇರಂಬಳ್ಳಿ ಗ್ರಾಮದಲ್ಲಿ ಜರುಗಿದೆ.

ಕೊಳ್ಳೇಗಾಲ ತಾಲ್ಲೂಕಿನ ತೇರಂಬಳ್ಳಿ ಗ್ರಾಮದ ಮಹದೇವಪ್ಪ ಎಂಬುವವರ ಪುತ್ರ ಚೇತನ್ (೨೪) ವಿಶೇಷ ಚೇತನರಾಗಿದ್ದು ನಡೆದಾಡಲು ಸಾಧ್ಯವಾಗಿದ ಪರಿಸ್ಥಿತಿಯಲ್ಲಿ ಬದುಕು ನೂಕುತ್ತಿದ್ದಾರೆ. ಸರ್ಕಾರದ ನಿರ್ಧಾರದಂತೆ ಮಾಸಾಶನ ತೆಗೆದುಕೊಳ್ಳುವವರೆಲ್ಲರೂ ಆಧಾರ್ ಲಿಂಕ್ ಮಾಡಿಸಬೇಕಾಗಿದ್ದು ಚೇತನ್ ಅವರು ಆಧಾರ್ ಕಾರ್ಡ್ ಲಿಂಕ್ ಮಾಡಿಸದೇ ಇರುವುದರಿಂದ ೩ ತಿಂಗಳ ಮಾಸಾಶನ ನಿಂತುಹೋಗಿತ್ತು.

ಈ ಸಂದರ್ಭದಲ್ಲಿ ಕೊಳ್ಳೇಗಾಲ ತಾಲ್ಲೂಕು ಕಛೇರಿಗೆ ಚೇತನ್ ಅವರನ್ನು ಕರೆದುಕೊಂಡು ಬಂದು ಆಧಾರ್ ಲಿಂಕ್ ಮಾಡಿಸಲು ಅವರ ತಂದೆ ಪ್ರಯತ್ನಪಟ್ಟಾಗ ಚೇತನ್ ಅವರು ಸಾರ್ವಜನಿಕರನ್ನು ನೋಡಿ ಗಾಬರಿಯಾಗಿ ಸೂಕ್ತ ರೀತಿಯಲ್ಲಿ ಸ್ಪಂದಿಸದೇ ಈ ವರೆಗೂ ಮಾಸಾಶನಕ್ಕೆ ಆಧಾರ್ ಲಿಂಕ್ ಮಾಡಿಸಲು ಸಾಧ್ಯವಾಗಿರುವುದಿಲ್ಲ. ಒಮ್ಮೆ ಪಾಳ್ಯ ನಾಡ ಕಛೇರಿ ಹಾಗೂ ತಹಶೀಲ್ದಾರ್ ಕಛೇರಿಗೂ ಬಂದು ಆಧಾರ್ ಲಿಂಕ್ ಮಾಡಿಸಲಾಗದೆ ಸಂಕಷ್ಟ ಅನುಭವಿಸಿದ್ದರು.

ಈ ಸಂಕಷ್ಟವನ್ನು ತಿಳಿದ ತೇರಂಬಳ್ಳಿ ಗ್ರಾಮದ ಲೆಕ್ಕಾಧಿಕಾರಿ ರಾಕೇಶ್ ಮತ್ತು ಗ್ರಾಂ.ಪಂ ಸದಸ್ಯ ರವಿಕುಮಾರ್ ಅವರು ಜಿಲ್ಲಾಧಿಕಾರಿಗಳಿಗೆ ಪತ್ರ ಮುಖೇನ ವಿಚಾರ ತಿಳಿಸಿ ಕೊಳ್ಳೇಗಾಲ ತಹಶೀಲ್ದಾರ್ ಮಂಜುಳ ಅವರ ಅನುಮತಿ ಪಡೆದು ಕಂದಾಯ ಅಧಿಕಾರಿಗಳು ಚೇತನ್ ಅವರ ಮನೆಗೆ ಬಂದು ಆಧಾರ್ ಲಿಂಕ್ ಮಾಡಿಕೊಡಿಸಲು ನೆರವಾದರು.
ಜನರನ್ನು ಕಂಡರೆ ಗಾಬರಿಯಾಗುವ ಚೇತನ್ ಅವರ ಪರಿಸ್ಥಿತಿಯ ನಡುವೆ ಜಿಲ್ಲಾ ಆಧಾರ್ ಸಂಯೋಜಕ ಪ್ರಭುಸ್ವಾಮಿ ಅವರ ಸಲಹೆಯಂತೆ ತಾಳ್ಮೆ ವಹಿಸಿ ಡಾಟಾ ಆಪರೇಟರ್ ಸಂಧ್ಯಾ, ಅನುಪಮಾ ಹಾಗೂ ಮಂಜು ಅವರು ಚೇತನ್ ಅವರ ಮಾಸಾಶನಕ್ಕೆ ಆಧಾರ್ ಲಿಂಕ್ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

andolanait

Recent Posts

ಸಂಭ್ರಮದಿಂದ ಹೊಸ ವರ್ಷವನ್ನು ಬರಮಾಡಿಕೊಂಡ ಮೈಸೂರಿಗರು

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಜಗಮಗಿಸುವ ದೀಪಾಲಂಕಾರ, ಫಲಪುಷ್ಪ ಪ್ರದರ್ಶನದ ಸೊಬಗಿನ ಮಧ್ಯೆ ಪಾರಂಪರಿಕ ಪೊಲೀಸ್‌ ಬ್ಯಾಂಡ್‌ನ ಸದ್ದಿನೊಂದಿಗೆ…

7 hours ago

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಕಾಫಿ ಪುಡಿ ಅಂಗಡಿ ಬೆಂಕಿಗಾಹುತಿ

ಕೊಳ್ಳೇಗಾಲ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯಲ್ಲಿರುವ ಸಾಕಮ್ಮಾಸ್ ಕಾಫಿ ಪುಡಿ ಅಂಗಡಿ ಬುಧವಾರ ರಾತ್ರಿ ಸಂಪೂರ್ಣ…

8 hours ago

ಮೈಸೂರು, ಚಾ.ನಗರ, ಮಂಡ್ಯ, ಕೊಡಗು ಎಸ್‌ಪಿಗಳ ವರ್ಗ

ಮೈಸೂರು: ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸುತ್ತಿದ್ದ 25 ಮಂದಿ ಐಪಿಎ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ನೀಡಿದೆ. ಅವರಲ್ಲಿ…

8 hours ago

ಕೊಡಗು ಜಿಲ್ಲೆಯ ನೂತನ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಬಿಂದುಮಣಿ ನೇಮಕ

ಕೊಡಗು: ಕರ್ನಾಟಕ ಸರ್ಕಾರದ ಆದೇಶದಂತೆ ಕೊಡಗಿನ ಪೊಲೀಸ್‌ ವರಿಷ್ಠಾಧಿಕಾರಿ ರಾಮರಾಜನ್‌ ಅವರನ್ನು ಬೆಳಗಾವಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಖಾಲಿಯಾದ ಸ್ಥಳಕ್ಕೆ…

8 hours ago

ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ ಸೇರಿದ ಟೇಲ್ಸ್ ಬೈ ಪರಿ ಕೃತಿಯ ಪುಟ್ಟ ಲೇಖಕಿ ಪರಿಣಿತಾ

ಬೆಂಗಳೂರು: ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ 'ಟೇಲ್ಸ್ ಬೈ ಪರಿ' ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ…

12 hours ago

ಅಕ್ರಮ ನಿವಾಸಿಗಳಿಗೆ ಮನೆ: ಸರ್ಕಾರದ ವಿರುದ್ಧ ವಿ.ಸೋಮಣ್ಣ ಆಕ್ರೋಶ

ನವದೆಹಲಿ: ಕೋಗಿಲು ಲೇಔಟ್‌ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ…

12 hours ago