ಕೊಳ್ಳೇಗಾಲ: ವಿಶೇಷ ಚೇತನರ ಮನೆಗೆ ಕಂದಾಯ ಅಧಿಕಾರಿಗಳೇ ತೆರಳಿ ಆಧಾರ್ ಕಾರ್ಡ್ ಮಾಡಿಕೊಟ್ಟ ಮಾನವೀಯ ಘಟನೆ ತೇರಂಬಳ್ಳಿ ಗ್ರಾಮದಲ್ಲಿ ಜರುಗಿದೆ.
ಕೊಳ್ಳೇಗಾಲ ತಾಲ್ಲೂಕಿನ ತೇರಂಬಳ್ಳಿ ಗ್ರಾಮದ ಮಹದೇವಪ್ಪ ಎಂಬುವವರ ಪುತ್ರ ಚೇತನ್ (೨೪) ವಿಶೇಷ ಚೇತನರಾಗಿದ್ದು ನಡೆದಾಡಲು ಸಾಧ್ಯವಾಗಿದ ಪರಿಸ್ಥಿತಿಯಲ್ಲಿ ಬದುಕು ನೂಕುತ್ತಿದ್ದಾರೆ. ಸರ್ಕಾರದ ನಿರ್ಧಾರದಂತೆ ಮಾಸಾಶನ ತೆಗೆದುಕೊಳ್ಳುವವರೆಲ್ಲರೂ ಆಧಾರ್ ಲಿಂಕ್ ಮಾಡಿಸಬೇಕಾಗಿದ್ದು ಚೇತನ್ ಅವರು ಆಧಾರ್ ಕಾರ್ಡ್ ಲಿಂಕ್ ಮಾಡಿಸದೇ ಇರುವುದರಿಂದ ೩ ತಿಂಗಳ ಮಾಸಾಶನ ನಿಂತುಹೋಗಿತ್ತು.
ಈ ಸಂದರ್ಭದಲ್ಲಿ ಕೊಳ್ಳೇಗಾಲ ತಾಲ್ಲೂಕು ಕಛೇರಿಗೆ ಚೇತನ್ ಅವರನ್ನು ಕರೆದುಕೊಂಡು ಬಂದು ಆಧಾರ್ ಲಿಂಕ್ ಮಾಡಿಸಲು ಅವರ ತಂದೆ ಪ್ರಯತ್ನಪಟ್ಟಾಗ ಚೇತನ್ ಅವರು ಸಾರ್ವಜನಿಕರನ್ನು ನೋಡಿ ಗಾಬರಿಯಾಗಿ ಸೂಕ್ತ ರೀತಿಯಲ್ಲಿ ಸ್ಪಂದಿಸದೇ ಈ ವರೆಗೂ ಮಾಸಾಶನಕ್ಕೆ ಆಧಾರ್ ಲಿಂಕ್ ಮಾಡಿಸಲು ಸಾಧ್ಯವಾಗಿರುವುದಿಲ್ಲ. ಒಮ್ಮೆ ಪಾಳ್ಯ ನಾಡ ಕಛೇರಿ ಹಾಗೂ ತಹಶೀಲ್ದಾರ್ ಕಛೇರಿಗೂ ಬಂದು ಆಧಾರ್ ಲಿಂಕ್ ಮಾಡಿಸಲಾಗದೆ ಸಂಕಷ್ಟ ಅನುಭವಿಸಿದ್ದರು.
ಈ ಸಂಕಷ್ಟವನ್ನು ತಿಳಿದ ತೇರಂಬಳ್ಳಿ ಗ್ರಾಮದ ಲೆಕ್ಕಾಧಿಕಾರಿ ರಾಕೇಶ್ ಮತ್ತು ಗ್ರಾಂ.ಪಂ ಸದಸ್ಯ ರವಿಕುಮಾರ್ ಅವರು ಜಿಲ್ಲಾಧಿಕಾರಿಗಳಿಗೆ ಪತ್ರ ಮುಖೇನ ವಿಚಾರ ತಿಳಿಸಿ ಕೊಳ್ಳೇಗಾಲ ತಹಶೀಲ್ದಾರ್ ಮಂಜುಳ ಅವರ ಅನುಮತಿ ಪಡೆದು ಕಂದಾಯ ಅಧಿಕಾರಿಗಳು ಚೇತನ್ ಅವರ ಮನೆಗೆ ಬಂದು ಆಧಾರ್ ಲಿಂಕ್ ಮಾಡಿಕೊಡಿಸಲು ನೆರವಾದರು.
ಜನರನ್ನು ಕಂಡರೆ ಗಾಬರಿಯಾಗುವ ಚೇತನ್ ಅವರ ಪರಿಸ್ಥಿತಿಯ ನಡುವೆ ಜಿಲ್ಲಾ ಆಧಾರ್ ಸಂಯೋಜಕ ಪ್ರಭುಸ್ವಾಮಿ ಅವರ ಸಲಹೆಯಂತೆ ತಾಳ್ಮೆ ವಹಿಸಿ ಡಾಟಾ ಆಪರೇಟರ್ ಸಂಧ್ಯಾ, ಅನುಪಮಾ ಹಾಗೂ ಮಂಜು ಅವರು ಚೇತನ್ ಅವರ ಮಾಸಾಶನಕ್ಕೆ ಆಧಾರ್ ಲಿಂಕ್ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…
ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, ಕಲಬುರ್ಗಿ,…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ ಮಹೋತ್ಸವದ ಅಂಗವಾಗಿ…
ಇಸ್ಲಾಮಾಬಾದ್: ಇರಾನ್, ಅಮೇರಿಕಾ-ಇಸ್ರೇಲ್ ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು ಉಲ್ಬಣಗೊಂಡಿದೆ. ಇದರಿಂದ ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದಾಗಿದೆ. ಮಾರ್ಚ್.23ರಂದು…
ಮಡಿಕೇರಿ: ನಾಡಿನಾದ್ಯಂತ ಇಂದು ಹೊಸ ವರ್ಷ ಯುಗಾದಿ ಸಂಭ್ರಮ ಮನೆ ಮಾಡಿದ್ದು, ಕೊಡಗಿನ ಮನೆ ಮನೆಯಲ್ಲೂ ಯುಗಾದಿ ಹಬ್ಬದ ಸಡಗರ…
ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಮೈಸೂರು ಜಿಲ್ಲೆ…