ಜಿಲ್ಲೆಗಳು

ವಿಶೇಷ ಚೇತನರ ಮನೆಗೆ ತೆರಳಿ ಆಧಾರ್ ಕಾರ್ಡ್ ಮಾಡಿಕೊಟ್ಟ ಕಂದಾಯ ಅಧಿಕಾರಿಗಳು!

ಕೊಳ್ಳೇಗಾಲ: ವಿಶೇಷ ಚೇತನರ ಮನೆಗೆ ಕಂದಾಯ ಅಧಿಕಾರಿಗಳೇ ತೆರಳಿ ಆಧಾರ್ ಕಾರ್ಡ್ ಮಾಡಿಕೊಟ್ಟ ಮಾನವೀಯ ಘಟನೆ ತೇರಂಬಳ್ಳಿ ಗ್ರಾಮದಲ್ಲಿ ಜರುಗಿದೆ.

ಕೊಳ್ಳೇಗಾಲ ತಾಲ್ಲೂಕಿನ ತೇರಂಬಳ್ಳಿ ಗ್ರಾಮದ ಮಹದೇವಪ್ಪ ಎಂಬುವವರ ಪುತ್ರ ಚೇತನ್ (೨೪) ವಿಶೇಷ ಚೇತನರಾಗಿದ್ದು ನಡೆದಾಡಲು ಸಾಧ್ಯವಾಗಿದ ಪರಿಸ್ಥಿತಿಯಲ್ಲಿ ಬದುಕು ನೂಕುತ್ತಿದ್ದಾರೆ. ಸರ್ಕಾರದ ನಿರ್ಧಾರದಂತೆ ಮಾಸಾಶನ ತೆಗೆದುಕೊಳ್ಳುವವರೆಲ್ಲರೂ ಆಧಾರ್ ಲಿಂಕ್ ಮಾಡಿಸಬೇಕಾಗಿದ್ದು ಚೇತನ್ ಅವರು ಆಧಾರ್ ಕಾರ್ಡ್ ಲಿಂಕ್ ಮಾಡಿಸದೇ ಇರುವುದರಿಂದ ೩ ತಿಂಗಳ ಮಾಸಾಶನ ನಿಂತುಹೋಗಿತ್ತು.

ಈ ಸಂದರ್ಭದಲ್ಲಿ ಕೊಳ್ಳೇಗಾಲ ತಾಲ್ಲೂಕು ಕಛೇರಿಗೆ ಚೇತನ್ ಅವರನ್ನು ಕರೆದುಕೊಂಡು ಬಂದು ಆಧಾರ್ ಲಿಂಕ್ ಮಾಡಿಸಲು ಅವರ ತಂದೆ ಪ್ರಯತ್ನಪಟ್ಟಾಗ ಚೇತನ್ ಅವರು ಸಾರ್ವಜನಿಕರನ್ನು ನೋಡಿ ಗಾಬರಿಯಾಗಿ ಸೂಕ್ತ ರೀತಿಯಲ್ಲಿ ಸ್ಪಂದಿಸದೇ ಈ ವರೆಗೂ ಮಾಸಾಶನಕ್ಕೆ ಆಧಾರ್ ಲಿಂಕ್ ಮಾಡಿಸಲು ಸಾಧ್ಯವಾಗಿರುವುದಿಲ್ಲ. ಒಮ್ಮೆ ಪಾಳ್ಯ ನಾಡ ಕಛೇರಿ ಹಾಗೂ ತಹಶೀಲ್ದಾರ್ ಕಛೇರಿಗೂ ಬಂದು ಆಧಾರ್ ಲಿಂಕ್ ಮಾಡಿಸಲಾಗದೆ ಸಂಕಷ್ಟ ಅನುಭವಿಸಿದ್ದರು.

ಈ ಸಂಕಷ್ಟವನ್ನು ತಿಳಿದ ತೇರಂಬಳ್ಳಿ ಗ್ರಾಮದ ಲೆಕ್ಕಾಧಿಕಾರಿ ರಾಕೇಶ್ ಮತ್ತು ಗ್ರಾಂ.ಪಂ ಸದಸ್ಯ ರವಿಕುಮಾರ್ ಅವರು ಜಿಲ್ಲಾಧಿಕಾರಿಗಳಿಗೆ ಪತ್ರ ಮುಖೇನ ವಿಚಾರ ತಿಳಿಸಿ ಕೊಳ್ಳೇಗಾಲ ತಹಶೀಲ್ದಾರ್ ಮಂಜುಳ ಅವರ ಅನುಮತಿ ಪಡೆದು ಕಂದಾಯ ಅಧಿಕಾರಿಗಳು ಚೇತನ್ ಅವರ ಮನೆಗೆ ಬಂದು ಆಧಾರ್ ಲಿಂಕ್ ಮಾಡಿಕೊಡಿಸಲು ನೆರವಾದರು.
ಜನರನ್ನು ಕಂಡರೆ ಗಾಬರಿಯಾಗುವ ಚೇತನ್ ಅವರ ಪರಿಸ್ಥಿತಿಯ ನಡುವೆ ಜಿಲ್ಲಾ ಆಧಾರ್ ಸಂಯೋಜಕ ಪ್ರಭುಸ್ವಾಮಿ ಅವರ ಸಲಹೆಯಂತೆ ತಾಳ್ಮೆ ವಹಿಸಿ ಡಾಟಾ ಆಪರೇಟರ್ ಸಂಧ್ಯಾ, ಅನುಪಮಾ ಹಾಗೂ ಮಂಜು ಅವರು ಚೇತನ್ ಅವರ ಮಾಸಾಶನಕ್ಕೆ ಆಧಾರ್ ಲಿಂಕ್ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

andolanait

Recent Posts

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

3 hours ago

ಮೈಸೂರು | ದಸರಾ ವೇಳೆಗೆ ಫುಟ್‌ಪಾತ್‌ಗಳ ದುರಸ್ತಿಗೆ ಸೂಚನೆ

ಮೈಸೂರು‌ : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…

4 hours ago

ಪ.ಬಂಗಾಳ | ಬೆಂಕಿ ಅವಘಡದಲ್ಲಿ ಏಳು ಮಂದಿ ಸಾವು, ಹಲವರು ಗಂಭೀರ

ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…

4 hours ago

ಯಳಂದೂರು | ಚಿರತೆ ದಾಳಿಗೆ ಕರು ಬಲಿ

ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…

5 hours ago

ಸಿಡಬ್ಲ್ಯುಎಂಎ ಆದೇಶ ಪಾಲಿಸಿ ; ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…

6 hours ago

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಎಚ್1ಎನ್1‌ ಸೋಂಕು ದೃಢ

ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…

6 hours ago