ಜಿಲ್ಲೆಗಳು

‘ವಿಷ್ಣು ಸ್ಮಾರಕ’ ದತ್ತ ನಿಲ್ಲದ ಅಭಿಮಾನಿಗಳ ದಂಡು

ನಿತ್ಯ ಎಂಟು ಗಂಟೆ ವೀಕ್ಷಣೆಗೆ ಅವಕಾಶ: ಭದ್ರತೆಗೂ ವಿಶೇಷ ಒತ್ತು

ಗಿರೀಶ್ ಹುಣಸೂರು

ಮೈಸೂರು: ಕನ್ನಡ ಚಲನಚಿತ್ರ ರಂಗದ ನಾಯಕ ನಟ ದಿ.ವಿಷ್ಣುವರ್ಧನ್ ಅವರು ನಿಧನರಾಗಿ ೧೩ ವರ್ಷಗಳ ಬಳಿಕ ನಿರಂತರ ಹೋರಾಟದ ಫಲವಾಗಿ ತಲೆ ಎತ್ತಿರುವ ‘ವಿಷ್ಣು ಸ್ಮಾರಕ’ ಮೈಸೂರಿನ ಪ್ರವಾಸಿ ತಾಣಗಳ ಪಟ್ಟಿಗೆ ಹೊಸ ಸೇರ್ಪಡೆಯಾಗಿದ್ದು, ನೆಚ್ಚಿನ ನಟನ ಸ್ಮಾರಕವನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ದೂರದ ಊರುಗಳಿಂದಲೂ ಬಂದು ಹೋಗುತ್ತಿದ್ದಾರೆ.
ಮೈಸೂರು-ಮಾನಂದವಾಡಿ ಹೆದ್ದಾರಿಯಲ್ಲಿ ಬರುವ ಮೈಸೂರು ತಾಲ್ಲೂಕು ಹಾಲಾಳು ಗ್ರಾಮದಲ್ಲಿ ಐದು ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗಿರುವ ವಿಷ್ಣು ಸ್ಮಾರಕವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಲೋಕಾರ್ಪಣೆ ಮಾಡುವುದರೊಂದಿಗೆ ಮೊದಲ ದಿನವೇ ವಿಷ್ಣುವರ್ಧನ್ ಅವರ ಸಾವಿರಾರು ಅಭಿಮಾನಿಗಳು ಸ್ಮಾರಕವನ್ನು ಕಣ್ತುಂಬಿ ಕೊಂಡಿದ್ದಾರೆ.
ವಿಷ್ಣು ಸ್ಮಾರಕ ವೀಕ್ಷಣೆಗೆ ಬೆಳಿಗ್ಗೆ ೯ ರಿಂದ ಸಂಜೆ ೫ಗಂಟೆವರೆಗೆ ಸಾರ್ವಜನಿಕರಿಗೆ ಮುಕ್ತ ಪ್ರವೇಶ ಕಲ್ಪಿಸಲಾಗಿದೆ. ಸ್ಮಾರಕದ ಭದ್ರತೆಗೆ ಮೂರು ಪಾಳಿಯಲ್ಲಿ ಸೆಕ್ಯೂರಿಟಿ ಗಾರ್ಡ್‌ಗಳು, ಉದ್ಯಾನ ನಿರ್ವಹಣೆ, ಸ್ವಚ್ಛತಾ ಕಾರ್ಮಿಕರು, ಎಲೆಕ್ಟ್ರಿಷಿಯನ್ ಸೇರಿದಂತೆ ಅಗತ್ಯಸಿಬ್ಬಂದಿಯನ್ನು ಹೊರಗುತ್ತಿಗೆಯಡಿ ವಿಷ್ಣು ಸ್ಮಾರಕ ಪ್ರತಿಷ್ಠಾನದಿಂದ ನೇಮಿಸಿಕೊಳ್ಳಲಾಗಿದೆ.
೩.೫೦ ಕೋಟಿ ಬಾಕಿ: ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ೧೧ ಕೋಟಿ ರೂ.ಗಳ ಅಂದಾಜು ವೆಚ್ಚಕ್ಕೆ ಅನುಮೋದನೆ ನೀಡಿ, ನಿರ್ಮಾಣ ಕಾಮಗಾರಿ ಕೈಗೊಂಡ ಕರ್ನಾಟಕ ರಾಜ್ಯ ಪೊಲೀಸ್ ವಸತಿ ನಿಗಮಕ್ಕೆ ಈಗಾಗಲೇ ೧೦ ಕೋಟಿ ರೂ. ಬಿಡುಗಡೆ ಮಾಡಿದೆ. ಇನ್ನುಳಿದ ೧ ಕೋಟಿ ರೂ. ಬಾಕಿ ಹಣದ ಜತೆಗೆ ಹೆಚ್ಚುವರಿಯಾಗಿ ೩.೪೬ ಕೋಟಿ ರೂ. ವೆಚ್ಚವಾಗಿದ್ದು, ನಿಗಧಿತ ಅನುದಾನದ ಶೇ.೨೫ಕ್ಕಿಂತ ಹೆಚ್ಚುವರಿ ಅನುದಾನದ ಅಗತ್ಯವಿದ್ದಲ್ಲಿ ಹಣಕಾಸು ಇಲಾಖೆಯ ಅನುಮತಿ ಅಗತ್ಯವಿರುವುದರಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೆಚ್ಚುವರಿ ಅನುದಾನ ಬಿಡುಗಡೆ ಸಂಬಂಧ ಕಡತ ತರಿಸಿಕೊಂಡಿದ್ದು, ಪೊಲೀಸ್ ವಸತಿ ನಿಗಮ ಈವರೆಗೆ ಬಿಡುಗಡೆಯಾದ ಅನುದಾನದ ಬಳಕೆ ಪ್ರಮಾಣ ಪತ್ರವನ್ನು ಸಲ್ಲಿಸಿದ ನಂತರ ಹೆಚ್ಚುವರಿ ಅನುದಾನ ಬಿಡುಗಡೆಯಾಗಲಿದೆ ಎಂದು ತಿಳಿದುಬಂದಿದೆ.


ಬೇಡಿಕೆಗಳೇನು?
* ಡಾ.ರಾಜ್‌ಕುಮಾರ್ ಸ್ಮಾರಕ ನಿರ್ವಹಣೆಗೆ ಸರ್ಕಾರ ವಾರ್ಷಿಕ ೨೫ ಲಕ್ಷ ರೂ. ಅನುದಾನ ನೀಡುತ್ತಿದೆ. ಅದೇ ರೀತಿಯಲ್ಲಿ ವಿಷ್ಣು ಸ್ಮಾರಕ ನಿರ್ವಹಣೆಗೂ ಸರ್ಕಾರ ಅನುದಾನ ನಿಗದಿಪಡಿಸಬೇಕಿದೆ.
* ಸದ್ಯ ವಿಷ್ಣು ಸ್ಮಾರಕ ಈಗಷ್ಟೇ ಲೋಕಾರ್ಪಣೆಯಾಗಿರುವುದರಿಂದ ಅಲ್ಲಿನ ಥಿಯೇಟರ್‌ನಲ್ಲಿ ಕಾರ್ಯಕ್ರಮಗಳ ಆಯೋಜನೆ, ಗ್ಯಾಲರಿ ನಿರ್ವಹಣೆ ಆಗಬೇಕಿದೆ.
* ವಿಷ್ಣು ವರ್ಧನ್ ಅವರ ಜಯಂತಿ, ಪುಣ್ಯತಿಥಿಗಳಂದು ಕಾರ್ಯಕ್ರಮ ಆಯೋಜನೆಗೂ ಅನುದಾನ ನಿಗದಿಯಾಗಬೇಕಿದೆ.
* ಮುಖ್ಯವಾಗಿ ಪುಣೆಯಲ್ಲಿರುವ ಕೇಂದ್ರ ಸರ್ಕಾರಿ ಸ್ವಾಮ್ಯದ ಫಿಲ್ಮ್ ಇನ್ಸ್ಟಿಟ್ಯೂಟ್‌ನ ಪ್ರಾದೇಶಿಕ ಕಚೇರಿಯನ್ನು ಇಲ್ಲಿ ಸ್ಥಾಪಿಸುವ ಉದ್ದೇಶವಿದೆಯಾದರೂ ಸರ್ಕಾರದ ಮಟ್ಟದಲ್ಲಿ ಈ ಕೆಲಸ ಆಗಬೇಕಿದೆ.
* ಸ್ಮಾರಕ ವೀಕ್ಷಣೆಗೆ ಬಂದು-ಹೋಗುವವರು ಉದ್ಭೂರು ಕ್ರಾಸ್‌ನ ಬಸ್ ತಂಗುದಾಣದಲ್ಲಿ ಹತ್ತಿ-ಇಳಿಯಬೇಕಿದೆ. ಈ ಸಮಸ್ಯೆ ಹೋಗಲಾಡಿಸಲು ಹಾಲಾಳು ಗೇಟ್‌ನಲ್ಲೇ ಬಸ್ ತಂಗುದಾಣ ನಿರ್ಮಾಣವಾಗಬೇಕಿದೆ.


ಪ್ರವೇಶಕ್ಕೆ ಟಿಕೆಟ್?
ಮುಖ್ಯವಾಗಿ ಮುಂಬರುವ ದಿನಗಳಲ್ಲಿ ಇಡೀ ಸ್ಮಾರಕ ಇರುವ ಸಮುಚ್ಛಯದ ನಿರ್ವಹಣೆ ದೃಷ್ಟಿಯಿಂದ ಸರ್ಕಾರದ ಅನುದಾನದ ಜತೆಗೆ ಸ್ಥಳೀಯವಾಗಿಯೂ ಸಂಪನ್ಮೂಲ ಕ್ರೋಢಿಕರಿಸಿ ಕೊಳ್ಳಬೇಕಾದ ಅಗತ್ಯತೆ ಇರುವುದರಿಂದ ಸ್ಮಾರಕ ಪ್ರವೇಶಕ್ಕೆ ಟಿಕೆಟ್, ಸಭಾಂಗಣಗಳ ಬಾಡಿಗೆ ನಿಗಧಿಯೂ ವಿಷ್ಣು ಸ್ಮಾರಕ ಪ್ರತಿಷ್ಠಾನದಲ್ಲಿ ಚರ್ಚೆಯಾಗಿ ಸರ್ಕಾರದ ಒಪ್ಪಿಗೆ ಪಡೆಯಬೇಕಾಗಿದೆ.


ಸ್ಮಾರಕದ ಲೋಕಾರ್ಪಣೆಯೊಂದಿಗೆ ಸಾರ್ವಜನಿಕರು, ವಿಷ್ಣುವರ್ಧನ್ ಅಭಿಮಾನಿಗಳ ವೀಕ್ಷಣೆಗೆ ವಿಷ್ಣು ಸ್ಮಾರಕಕ್ಕೆ ಮುಕ್ತ ಪ್ರವೇಶ ಕಲ್ಪಿಸಲಾಗಿದ್ದು, ಬೆಳಿಗ್ಗೆ ೯ ರಿಂದ ಸಂಜೆ ೫ಗಂಟೆವರೆಗೆ ಸ್ಮಾರಕವನ್ನು ವೀಕ್ಷಿಸಬಹುದಾಗಿದೆ.
-ವಿಜಯಾನಂದ, ಸದಸ್ಯ ಕಾರ್ಯದರ್ಶಿ, ಡಾ.ವಿಷ್ಣು ಸ್ಮಾರಕ ಪ್ರತಿಷ್ಠಾನ

andolanait

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

40 seconds ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 21 ಶುಕ್ರವಾರ

2 hours ago

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

15 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

16 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

17 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

17 hours ago