ಜಿಲ್ಲೆಗಳು

ಗ್ರಂಥಾಲಯಕ್ಕೆ ಭೇಟಿ ನೀಡಿ ಓದುವ ಅಭಿರುಚಿ ಬೆಳೆಸಿಕೊಳ್ಳಿ : ಅಂಶಿ ಪ್ರಸನ್ನ ಕುಮಾರ್

ಹನೂರು: ಪ್ರತಿಯೊಬ್ಬರೂ ಗ್ರಂಥಾಲಯಕ್ಕೆ ಭೇಟಿ ನೀಡಿ ಓದುವ ಅಭಿರುಚಿಯನ್ನು ಬೆಳೆಸಿಕೊಳ್ಳಬೇಕು ಎಂದು
ಕನ್ನಡಪ್ರಭ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ಅಂಶಿ
ಪ್ರಸನ್ನಕುಮಾರ್ ತಿಳಿಸಿದರು.

ಪಟ್ಟಣದ ಜಿ.ವಿ ಗೌಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ, ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕಾಲೇಜು ವತಿಯಿಂದ ಅಯೋಜಿಸಿದ್ಧ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ತಾಲೂಕು ಘಟಕ ಹಾಗೂ ಸಾಹಿತಿ ಡಾ.ಎಸ್ ಶಿವರಾಜಪ್ಪ ಅವರ ಬದುಕು – ಬರಹ ಕುರಿತ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.

ಚಾ.ನಗರ ಜಿಲ್ಲೆ ಸಾಹಿತ್ತಿಕವಾಗಿ ಶ್ರೀಮಂತಿಕೆಯಾಗಿದ್ದು, ಜನಪದ ಕಲೆಗಳ ತವರೂರಾಗಿದೆ. ಈ ಹಿಂದೆ ಮದ್ರಾಸ್ ಪ್ರಾಂತ್ಯಕ್ಕೆ ಸೇರಿತ್ತು. ಬಳಿಕ ಭಾಷವಾರು ಪ್ರಾಂತ್ಯವನ್ನು ರಚಿಸಲಾಯಿತು. ಈ ದಿಸೆಯಲ್ಲಿ ತಮಿಳುನಾಡಿಗೆ ಹೊಂದಿಕೊಂಡಂತಿರುವ ಗಡಿ ಭಾಗದಲ್ಲಿ ಕನ್ನಡದ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಸಲುವಾಗಿ ವೇದಿಕೆ ಕಲ್ಪಿಸಿರುವುದು ನಿಜಕ್ಕೂ ಉತ್ತಮ ಬೆಳವಣಿಗೆ. ಕನ್ನಡಕ್ಕೆಹೆಚ್ಚು ಜ್ಞಾನಪೀಠ ಪ್ರಶಸ್ತಿಗಳು ಲಭಿಸಿದ್ದು, ಭಾಷಾ ಪ್ರೌಢಿಮೆಯನ್ನು ಎತ್ತಿ ಹಿಡಿಯುತ್ತದೆ.

ಆದರೆ ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆ ಆಧುನಿಕ ತಂತ್ರಜ್ಞಾನಕ್ಕೆ ಮಾರು ಹೋಗಿದ್ದು, ಹೆಚ್ಚು ಮೊಬೈಲ್ ಬಳಕೆಯಲ್ಲಿ ತೊಡಗಿದ್ದಾರೆ. ಆದ್ದರಿಂದ ದೃಶ್ಯ ಮಾದ್ಯಮ
ಮನಸ್ಸನ್ನು ಕೆರಳಿಸಿದರೆ ಸಾಹಿತ್ಯ ಮನಸ್ಸನ್ನು ಅರಳಿಸುತ್ತದೆ. ಹಾಗಾಗಿ ಸಾಹಿತ್ಯದ ಕಡೆ ಹೆಚ್ಚಿನ ಗಮನ ನೀಡಬೇಕು. ಈ
ದಿಸೆಯಲ್ಲಿ ಗ್ರಂಥಾಲಯಕ್ಕೆ ಭೇಟಿ ನೀಡಿ ಓದುವ  ಅಭಿರುಚಿಯನ್ನು ಬೆಳೆಸಿಕೊಳ್ಳಬೇಕು. ಜತೆಗೆ ಸಾಮಾನ್ಯ ಜ್ಞಾನ ಹೆಚ್ಚಿಸಿಕೊಟ್ಟುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಪತ್ರಿಕೆ ಓದುವ
ಹವ್ಯಾಸವನ್ನು ಹೊಂದಬೇಕು ಎಂದು ಸಲಹೆ
ನೀಡಿದರು.

ಮೈಸೂರು ಕನ್ನಡ ಸಾಹಿತ್ಯ ಕಲಾಕೂಟದ ಅಧ್ಯಕ್ಷ ಎಂ ಚಂದ್ರಶೇಖರ್ ಮಾತನಾಡಿ, ಸಾಹಿತಿ ಡಾ.ಎಸ್ ಶಿವರಾಜಪ್ಪ ಅವರು ಕನ್ನಡ ಸಾಹಿತ್ಯ ಲೋಕಕ್ಕೆ ಉತ್ತಮ ಕೊಡುಗೆ ನೀಡಿದ್ದಾರೆ. ೪೦ ವರ್ಷಗಳ ಸುಧಿರ್ಘ ಅವಧಿಯಲ್ಲಿ ೭೨
ಸ್ವತಂತ್ರ ಕೃತಿ, ೫೯ ಸಂಪಾದಿತ ಕೃತಿಗಳನ್ನು ರಚಿಸಿದ್ದು, ಇವರ ಸಾಹಿತ್ಯ ಸಾಧನೆಗೆ ಸಿದ್ದಗಂಗಾ ಶ್ರೀ, ಬಸವ, ಹೊಯ್ಸಳ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಮೈಸೂರುಮಹಾರಾಜ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ,
ಗಾಂಧಿಭವನದ ನಿರ್ದೇಶಕರಾಗಿ ಉತ್ತಮ ಸೇವೆಯನ್ನು ಸಲ್ಲಿಸಿದ್ದು, ಇವರ ಮಾರ್ಗದರ್ಶನದಲ್ಲಿ ೨೦ಕ್ಕೂ ಹೆಚ್ಚು
ವಿದ್ಯಾರ್ಥಿಗಳು ಪಿಹೆಚ್.ಡಿ ಪ್ರಬಂಧ ಮಂಡಿಸಿರುವುದು ಹೆಮ್ಮೆಯ ವಿಷಯ ಎಂದರು.

ಈ ಸಂದರ್ಭದಲ್ಲಿ ನಿವೃತ್ತ ಪ್ರಾಧ್ಯಾಪಕ ಡಾ.ಎಸ್
ಶಿವರಾಜಪ್ಪ, ಸಾಹಿತಿಗಳಾದ ಟಿ.ಸತೀಶ್ ಜವರೇಗೌಡ,
ಡಿ.ಪಿ ಚಿಕ್ಕಣ್ಣ, ಪ್ರಾಂಶುಪಾಲ ಶೈಲೇಶ್ ಕುಮಾರ್,
ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ತಾಲೂಕು
ಅಧ್ಯಕ್ಷ ಕಂದವೇಲು ದೈಹಿಕ ಶಿಕ್ಷಣ
ಪರಿವೀಕ್ಷಕ ಮಹದೇವ ಹಾಗೂ ಕಾಲೇಜಿನ
ಉಪನ್ಯಾಸಕರು, ವಿದ್ಯಾರ್ಥಿಗಳು ಹಾಜರಿದ್ದರು .

andolanait

Recent Posts

ಡಿ.16 ರಂದು ಮಳವಳ್ಳಿಗೆ ರಾಷ್ಟ್ರಪತಿ ಆಗಮನ : ಭದ್ರತಾ ವ್ಯವಸ್ಥೆ ಪರಿಶೀಲನೆ

ಮಂಡ್ಯ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…

1 min ago

ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ : ಗ್ರಾ.ಪಂ ಮಾಜಿ ಅಧ್ಯಕ್ಷನ ವಿರುದ್ಧ ದೂರು

ಸಿದ್ದಾಪುರ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಗ್ರಾ.ಪಂ. ಮಾಜಿ ಅಧ್ಯಕ್ಷನ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ…

26 mins ago

ರೈತರಿಗೆ ಸಿಹಿ ಸುದ್ದಿ ; ಕೊಬ್ಬರಿಗೆ ಬೆಂಬಲ ಬೆಲೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟವು ೨೦೨೬ರ ಹಂಗಾಮಿನ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು…

31 mins ago

ಮಾಗಿ ಚಳಿಯ ಅಬ್ಬರಕ್ಕೆ ರಾಜ್ಯದ ಜನತೆ ಕಕ್ಕಾಬಿಕ್ಕಿ

ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ೩೦ ಡಿ.ಸೆ. ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ಹೆಚ್ಚಾಗಿರುವ ಮಾಗಿ ಚಳಿಯ ವಾತಾವರಣಕ್ಕೆ ಜನರು…

34 mins ago

ಹುಲಿ ದಾಳಿ; ಹಸು ಸಾವು

ಗುಂಡ್ಲುಪೇಟೆ : ತಾಲ್ಲೂಕಿನಲ್ಲಿ ಹುಲಿ ದಾಳಿ ಪ್ರಕರಣಗಳು ಮುಂದುವರಿದಿದ್ದು ಹಸುವಿನ ಮೇಲೆ ದಾಳಿ ಮಾಡಿದ ವ್ಯಾಘ್ರ ರಕ್ತ ಹೀರಿ ಕೊಂದಿರುವ…

36 mins ago

ಮೈಸೂರು | ಜಿಲ್ಲೆಯಲ್ಲಿ ಅಪೌಷ್ಠಿಕ‌ ಮಕ್ಕಳ ಸಂಖ್ಯೆ ಗಣನೀಯ ಇಳಿಕೆ

ಮೈಸೂರು : NFHS-5 ವರದಿಯ ಪ್ರಕಾರ ಮೈಸೂರು ಜಿಲ್ಲೆಯ SAM ಮಕ್ಕಳ ಪ್ರಮಾಣ 7.2% ಇದ್ದು ಪ್ರಸ್ತುತ 0.21% ಗೆ…

39 mins ago