ಜಿಲ್ಲೆಗಳು

ಗ್ರಂಥಾಲಯಕ್ಕೆ ಭೇಟಿ ನೀಡಿ ಓದುವ ಅಭಿರುಚಿ ಬೆಳೆಸಿಕೊಳ್ಳಿ : ಅಂಶಿ ಪ್ರಸನ್ನ ಕುಮಾರ್

ಹನೂರು: ಪ್ರತಿಯೊಬ್ಬರೂ ಗ್ರಂಥಾಲಯಕ್ಕೆ ಭೇಟಿ ನೀಡಿ ಓದುವ ಅಭಿರುಚಿಯನ್ನು ಬೆಳೆಸಿಕೊಳ್ಳಬೇಕು ಎಂದು
ಕನ್ನಡಪ್ರಭ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ಅಂಶಿ
ಪ್ರಸನ್ನಕುಮಾರ್ ತಿಳಿಸಿದರು.

ಪಟ್ಟಣದ ಜಿ.ವಿ ಗೌಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ, ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕಾಲೇಜು ವತಿಯಿಂದ ಅಯೋಜಿಸಿದ್ಧ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ತಾಲೂಕು ಘಟಕ ಹಾಗೂ ಸಾಹಿತಿ ಡಾ.ಎಸ್ ಶಿವರಾಜಪ್ಪ ಅವರ ಬದುಕು – ಬರಹ ಕುರಿತ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.

ಚಾ.ನಗರ ಜಿಲ್ಲೆ ಸಾಹಿತ್ತಿಕವಾಗಿ ಶ್ರೀಮಂತಿಕೆಯಾಗಿದ್ದು, ಜನಪದ ಕಲೆಗಳ ತವರೂರಾಗಿದೆ. ಈ ಹಿಂದೆ ಮದ್ರಾಸ್ ಪ್ರಾಂತ್ಯಕ್ಕೆ ಸೇರಿತ್ತು. ಬಳಿಕ ಭಾಷವಾರು ಪ್ರಾಂತ್ಯವನ್ನು ರಚಿಸಲಾಯಿತು. ಈ ದಿಸೆಯಲ್ಲಿ ತಮಿಳುನಾಡಿಗೆ ಹೊಂದಿಕೊಂಡಂತಿರುವ ಗಡಿ ಭಾಗದಲ್ಲಿ ಕನ್ನಡದ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಸಲುವಾಗಿ ವೇದಿಕೆ ಕಲ್ಪಿಸಿರುವುದು ನಿಜಕ್ಕೂ ಉತ್ತಮ ಬೆಳವಣಿಗೆ. ಕನ್ನಡಕ್ಕೆಹೆಚ್ಚು ಜ್ಞಾನಪೀಠ ಪ್ರಶಸ್ತಿಗಳು ಲಭಿಸಿದ್ದು, ಭಾಷಾ ಪ್ರೌಢಿಮೆಯನ್ನು ಎತ್ತಿ ಹಿಡಿಯುತ್ತದೆ.

ಆದರೆ ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆ ಆಧುನಿಕ ತಂತ್ರಜ್ಞಾನಕ್ಕೆ ಮಾರು ಹೋಗಿದ್ದು, ಹೆಚ್ಚು ಮೊಬೈಲ್ ಬಳಕೆಯಲ್ಲಿ ತೊಡಗಿದ್ದಾರೆ. ಆದ್ದರಿಂದ ದೃಶ್ಯ ಮಾದ್ಯಮ
ಮನಸ್ಸನ್ನು ಕೆರಳಿಸಿದರೆ ಸಾಹಿತ್ಯ ಮನಸ್ಸನ್ನು ಅರಳಿಸುತ್ತದೆ. ಹಾಗಾಗಿ ಸಾಹಿತ್ಯದ ಕಡೆ ಹೆಚ್ಚಿನ ಗಮನ ನೀಡಬೇಕು. ಈ
ದಿಸೆಯಲ್ಲಿ ಗ್ರಂಥಾಲಯಕ್ಕೆ ಭೇಟಿ ನೀಡಿ ಓದುವ  ಅಭಿರುಚಿಯನ್ನು ಬೆಳೆಸಿಕೊಳ್ಳಬೇಕು. ಜತೆಗೆ ಸಾಮಾನ್ಯ ಜ್ಞಾನ ಹೆಚ್ಚಿಸಿಕೊಟ್ಟುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಪತ್ರಿಕೆ ಓದುವ
ಹವ್ಯಾಸವನ್ನು ಹೊಂದಬೇಕು ಎಂದು ಸಲಹೆ
ನೀಡಿದರು.

ಮೈಸೂರು ಕನ್ನಡ ಸಾಹಿತ್ಯ ಕಲಾಕೂಟದ ಅಧ್ಯಕ್ಷ ಎಂ ಚಂದ್ರಶೇಖರ್ ಮಾತನಾಡಿ, ಸಾಹಿತಿ ಡಾ.ಎಸ್ ಶಿವರಾಜಪ್ಪ ಅವರು ಕನ್ನಡ ಸಾಹಿತ್ಯ ಲೋಕಕ್ಕೆ ಉತ್ತಮ ಕೊಡುಗೆ ನೀಡಿದ್ದಾರೆ. ೪೦ ವರ್ಷಗಳ ಸುಧಿರ್ಘ ಅವಧಿಯಲ್ಲಿ ೭೨
ಸ್ವತಂತ್ರ ಕೃತಿ, ೫೯ ಸಂಪಾದಿತ ಕೃತಿಗಳನ್ನು ರಚಿಸಿದ್ದು, ಇವರ ಸಾಹಿತ್ಯ ಸಾಧನೆಗೆ ಸಿದ್ದಗಂಗಾ ಶ್ರೀ, ಬಸವ, ಹೊಯ್ಸಳ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಮೈಸೂರುಮಹಾರಾಜ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ,
ಗಾಂಧಿಭವನದ ನಿರ್ದೇಶಕರಾಗಿ ಉತ್ತಮ ಸೇವೆಯನ್ನು ಸಲ್ಲಿಸಿದ್ದು, ಇವರ ಮಾರ್ಗದರ್ಶನದಲ್ಲಿ ೨೦ಕ್ಕೂ ಹೆಚ್ಚು
ವಿದ್ಯಾರ್ಥಿಗಳು ಪಿಹೆಚ್.ಡಿ ಪ್ರಬಂಧ ಮಂಡಿಸಿರುವುದು ಹೆಮ್ಮೆಯ ವಿಷಯ ಎಂದರು.

ಈ ಸಂದರ್ಭದಲ್ಲಿ ನಿವೃತ್ತ ಪ್ರಾಧ್ಯಾಪಕ ಡಾ.ಎಸ್
ಶಿವರಾಜಪ್ಪ, ಸಾಹಿತಿಗಳಾದ ಟಿ.ಸತೀಶ್ ಜವರೇಗೌಡ,
ಡಿ.ಪಿ ಚಿಕ್ಕಣ್ಣ, ಪ್ರಾಂಶುಪಾಲ ಶೈಲೇಶ್ ಕುಮಾರ್,
ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ತಾಲೂಕು
ಅಧ್ಯಕ್ಷ ಕಂದವೇಲು ದೈಹಿಕ ಶಿಕ್ಷಣ
ಪರಿವೀಕ್ಷಕ ಮಹದೇವ ಹಾಗೂ ಕಾಲೇಜಿನ
ಉಪನ್ಯಾಸಕರು, ವಿದ್ಯಾರ್ಥಿಗಳು ಹಾಜರಿದ್ದರು .

andolanait

Recent Posts

ಅಷ್ಟಾಂಗ ಯೋಗದ ರಾಜಧಾನಿ ಮೈಸೂರು

ಉದ್ಯಮವಾಗಿಯೂ ಬೆಳೆಯುವತ್ತ ಯೋಗ ಮಕ್ಕಳು ವಯೋವೃದ್ಧರನ್ನೂ ಸೆಳೆಯುವ ಯೋಗ ಯೋಗ ದೈಹಿಕ ಬಲ ಮತ್ತು ನಮ್ಯತೆ ಹೆಚ್ಚಿಸುವಲ್ಲಿ ಸಹಕಾರಿ ನಮಗೆ…

1 hour ago

ಆಂದೋಲನ ಸಾರ್ಥಕ ಪಯಣ : ಪರಿಸರ ಸಂರಕ್ಷಣೆ ಎಲ್ಲರ ಹೊಣೆ

ಎಚ್.ಎಸ್.ದಿನೇಶ್‌ ಕುಮಾರ್‌ ಜಾಗತಿಕ ತಾಪಮಾನ ವಿಪರೀತ ಹೆಚ್ಚಳವಾಗುತ್ತಿದೆ. ಈ ಸಂದರ್ಭದಲ್ಲಿ ಪರಿಸರ ಸಮತೋಲನ ಕಾಪಾಡಿಕೊಳ್ಳದಿದ್ದರೆ ಇಡೀ ಮಾನವ ಕುಲವೇ ಸಂಕಷ್ಟಕ್ಕೀಡಾಗಬೇಕಾಗುತ್ತದೆ.…

2 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ಬಿಎಸ್‌ವೈಗೆ ಲಿಂಗಾಯತ ಶಕ್ತಿಯದ್ದೇ ಚಿಂತೆ

ಮುಂಬರುವ ಚುನಾವಣೆಯಲ್ಲೂ ಕಾಂಗ್ರೆಸ್‌ ಕಡೆಗೆ ವಾಲುವ ಆತಂಕ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಯಡಿಯೂರಪ್ಪ ಚಿಂತೆಯಲ್ಲಿದ್ದಾರೆ. ಅವರ ಚಿಂತೆಗೆ ಕಾರಣ…

2 hours ago

ಒಡನಾಡಿ ಸ್ಟ್ಯಾನ್ಲಿ ಅವರ ವಾರದ ಅಂಕಣ ; ಕೋಟಿಗೊಬ್ಬರೇ ಕೋಟಿ….!

ʻಬದುಕಿ ನಿರ್ಗಮಿಸುವುದಾದರೆ ಕೋಟಿಯವರಂತೆ ಬಾಳಿ ಹೊರಡಬೇಕುʼ ಕನ್ನಡದ ಪಾಪು, ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪನವರು ಸಂಪಾದಕರಾಗಿದ್ದ ಧಾರವಾಡದ ‘ವಿಶ್ವವಾಣಿ’ ಪತ್ರಿಕೆಯ…

6 hours ago

ಆಂದೋಲನ ಸಂಪಾದಕೀಯ | ಸಾರ್ಥಕ ಪಯಣ 54 ; ಬೆನ್ನುತಟ್ಟಿ ನಡೆಸಿದವರು ನೀವು. . .

ನಿಮ್ಮೆಲ್ಲರ ‘ಆಂದೋಲನ’ ದಿನಪತ್ರಿಕೆ ೫೪ನೇ ವಸಂತಕ್ಕೆ ಪಾದಾರ್ಪಣೆ ಮಾಡಿದೆ. ಹುಟ್ಟಿನಿಂದ ನಡೆದುಬಂದ ಮಾರ್ಗದಲ್ಲೇ, ರೂಢಿಸಿಕೊಂಡ ಸಿದ್ಧಾಂತಗಳ ನೆರಳಲ್ಲೇ ಸಹಸ್ರಾರು ಸವಾಲುಗಳ…

6 hours ago

ಎಸ್‌ಐಆರ್‌ | ಬಿಜೆಪಿಯಿಂದ ಅನಗತ್ಯ ಆರೋಪ ; ಎಂ.ಲಕ್ಷ್ಮಣ್‌ ಕಿಡಿ

ಮೈಸೂರು : ಎಸ್‌ಐಆರ್ ಪ್ರಕ್ರಿಯೆ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ಕದಿಯುತ್ತಿರುವ ಬಿಜೆಪಿ, ಕೆಲವು ದಿನಗಳಿಂದ ಅನಗತ್ಯ…

21 hours ago