ಜಿಲ್ಲೆಗಳು

ವಿಶ್ವಕರ್ಮ ಸಮುದಾಯದವರು ಸಂಘಟಿತರಾಗಿ : ಶಾಸಕ ಆರ್ ನರೇಂದ್ರ

ಹನೂರು: ವಿಶ್ವಕರ್ಮ ಸಮುದಾಯದ ಜನತೆ ಸಂಘಟಿತರಾಗಿ ತಮ್ಮ ಹಕ್ಕು ಮತ್ತು ಕರ್ತವ್ಯಗಳನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಮುಂದಾಗಬೇಕೆಂದು ಶಾಸಕ ಆರ್ ನರೇಂದ್ರ ತಿಳಿಸಿದರು.

ಪಟ್ಟಣದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಶ್ವಕರ್ಮ ಜಯಂತಿ ಅಂಗವಾಗಿ ವಿಶ್ವಕರ್ಮರ ಪ್ರತಿಮೆಯನ್ನೋಳಗೊಂಡ ಒಳಗೊಂಡ ಅಶ್ವರೂಢ ವಾಹನಕ್ಕೆ ಪೂಜೆ ಸಲ್ಲಿಸಿ ಬಳಿಕ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು.

ಶಿಲ್ಪಕಲೆಯಿಂದ ಭಾರತವನ್ನು ಜಾಗತಿಕ ಮಟ್ಟದಲ್ಲಿ ಮನ್ನಣೆ ಮಾಡಿದ ಕೀರ್ತಿ ವಿಶ್ವಕರ್ಮ ಸಮುದಾಯಕ್ಕೆ ಸಲ್ಲುತ್ತದೆ. ಇತ್ತೀಚಿಗೆ ವಿಶ್ವಕರ್ಮ ಸಮುದಾಯದವರು ಸಂಘಟಿತರಾಗಿರುವುದು ಸಂತಸ ತಂದಿದೆ ಎಂದರು.ತಮ್ಮ ಮಕ್ಕಳಿಗೆ ಉನ್ನತ ವಿದ್ಯಾಭ್ಯಾಸ ಕೊಡಿಸುವ ಮೂಲಕ ಶೈಕ್ಷಣಿಕ ಪ್ರಗತಿಗೆ ಶ್ರಮಿಸಿ ಎಂದು ಕರೆ ನೀಡಿದರು.

ಮೆರವಣಿಗೆಗೆ ಮೆರಗು ತಂದ ಸಾಂಸ್ಕೃತಿಕ ಕಲಾ ತಂಡಗಳು: ರಾಷ್ಟ್ರೀಯ ಹಬ್ಬಗಳ ಆಚರಣಾ ತಾಲೂಕು ಸಮಿತಿ ವತಿಯಿಂದ ಏರ್ಪಡಿಸಲಾಗಿದ್ದ ವಿಶ್ವಕರ್ಮ ಜಯಂತಿ ಮೆರವಣಿಗೆ ಕಾರ್ಯಕ್ರಮದಲ್ಲಿ ವಿವಿಧ ಕಲಾತಂಡಗಳು ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರಗನ್ನು ತಂದವು.

ಪಟ್ಟಣದ ಆರ್.ಎಸ್.ದೊಡ್ಡಿಯಿಂದ ಹೊರಟ ಮೆರವಣಿಗೆ ಡಾ.ಬಿ.ಆರ್.ಅಂಬೇಡ್ಕರ್ ವೃತ್ತ ಹಾಗೂ ದಿ. ಹೆಚ್.ನಾಗಪ್ಪ ವೃತ್ತದ ಮೂಲಕ ಸಾಗಿ ಬಂಡಳ್ಳಿ ರಸ್ತೆ ಕ್ರಿಸ್ತರಾಜ ಶಾಲೆವರೆಗೆ ವಿವಿಧ ತಾಳ ಮೇಳಗಳೊಂದಿಗೆ ಸಾಗಿತು.

ಈ ಸಂದರ್ಭದಲ್ಲಿ ವಿಶ್ವಕರ್ಮ ತಾಲೂಕು ಸಂಘದ ಅಧ್ಯಕ್ಷ ಮುತ್ತುರಾಜು, ಖಜಾಂಚಿ ಸಿದ್ದರಾಜು, ಸಮುದಾಯದ ಮುಖಂಡರಾದ ತಮ್ಮಯ್ಯ ಚಾರ್, ಶಿವಮೂರ್ತಿ, ಮುರುಗೇಶ್, ಕುಮಾರ ಹಾಗೂ ವಿವಿಧ ಗ್ರಾಮಗಳ ಮುಖಂಡರುಗಳು, ಯಜಮಾನರುಗಳು, ಯುವಕರು, ಮಹಿಳೆಯರು ಉಪಸ್ಥಿತರಿದ್ದರು

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

11 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

11 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

11 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

11 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

11 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

11 hours ago