ಜಿಲ್ಲೆಗಳು

ಶೋಷಿತರ ಮತ್ತು ಧಮನಿತರ ಧ್ವನಿ- ಡಾ.ಅಮ್ಮಸಂದ್ರ ಸುರೇಶ್

ಮಂಜುಕೋಟೆ

ಹೋರಾಟ ಮತ್ತು ಸಾಹಿತ್ಯ ಕ್ಷೇತ್ರದ ನಿಸ್ವಾರ್ಥ ಸೇವೆಗಾಗಿ ಒಲಿದ ಸಮ್ಮೇಳನಾಧ್ಯಕ್ಷ ಸ್ಥಾನ

ಸಮಾಜದಲ್ಲಿನ ಶೋಷಿತರ, ಧಮನಿತರ, ನೆಲೆ ಇಲ್ಲದ ಸಮುದಾಯಗಳ ಬದುಕು-ಬವಣೆಗಳನ್ನು ತನ್ನ ಲೇಖನಿಯ ಮೂಲಕ ಸಮಾಜದ ಮುಂದಿಟ್ಟು ಅಂತಹ ಸಮುದಾಯಗಳನ್ನು ಮುಖ್ಯವಾಹಿನಿಗೆ ತರಲು ಪ್ರಯತ್ನಿಸುವ ಮೂಲಕ ಅಲೆಮಾರಿ, ಅರೆ ಅಲೆಮಾರಿ, ಆದಿವಾಸಿ-ಬುಡಕಟ್ಟು ಜನರು ಅನುಭವಿಸುತ್ತಿರುವ ನೋವುಗಳನ್ನು ತೆರೆದಿಟ್ಟು ಸಮಾಜ ಮತ್ತು ಸರ್ಕಾರಗಳ ಕಣ್ತೆರೆಸಿದವರು ಈ ಬಾರಿಯ ಹೆಗ್ಗಡದೇವನಕೋಟೆ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಲಿರುವ ಡಾ.ಅಮ್ಮಸಂದ್ರ ಸುರೇಶ್.
ಪತ್ರಿಕೋದ್ಯಮ, ಸ್ನಾತಕೋತ್ತರ ಪದವಿ ಮತ್ತು ಮೈಸೂರು ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪಿಎಚ್.ಡಿ ಪಡೆದಿರುವ ಅಮ್ಮಸಂದ್ರ ಸುರೇಶ್‌ರವರು ಅಂಚೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪ್ರವೃತ್ತಿಯಲ್ಲಿ ಲೇಖಕ, ಅಂಕಣಕಾರ, ಹವ್ಯಾಸಿ ಅಭಿವೃದ್ಧಿ ಪತ್ರಕರ್ತ, ಅಭಿವೃದ್ಧಿ ಮತ್ತು ಕೃಷಿ ಪತ್ರಿಕೋದ್ಯಮ ವಿಷಯದ ಸಂಪನ್ಮೂಲ ವ್ಯಕ್ತಿ ಹಾಗೂ ಮಾಧ್ಯಮ ವಿಶ್ಲೇಷಕರಾಗಿದ್ದಾರೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಅಲೆಮಾರಿ ಮತ್ತು ಅರೆ ಅಲೆಮಾರಿ ವೇದಿಕೆ ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಅಲೆಮಾರಿ, ಅರೆ ಅಲೆಮಾರಿ ವಿಮುಕ್ತ ಬುಡಕಟ್ಟು ಸಮುದಾಯಗಳ ಮಹಾ ಒಕ್ಕೂಟಗಳ ಮಾಧ್ಯಮ ಸಲಹೆಗಾರರಾಗಿಯೂ ಅವರು ಸೇವೆ ಸಲ್ಲಿಸುತ್ತಿದ್ದಾರೆ.
ಕಳೆದ 32 ವರ್ಷಗಳಿಂದ 1500ಕ್ಕೂ ಹೆಚ್ಚು ಲೇಖನಗಳನ್ನು ಬರೆದಿರುವ ಅಮ್ಮಸಂದ್ರ ಸುರೇಶ್‌ರವರ ‘ಮಾಧ್ಯಮ ಲೋಕದ ಎಂಬ ಯೂಟ್ಯೂಬ್ ವಾಹಿನಿಯನ್ನು ಜೊತೆಗೆ ಬಹುತೇಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ದೂರಶಿಕ್ಷಣ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಅಭಿವೃದ್ಧಿ ಮತ್ತು ಕೃಷಿ ಪತ್ರಿಕೋದ್ಯಮ ವಿಷಯಗಳನ್ನು ಬೋಧಿಸುವ ಮೂಲಕ 2021ರಿಂದ ಸಂಪನ್ಮೂಲ ವ್ಯಕ್ತಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಡಾ.ಅಮ್ಮಸಂದ್ರ ಸುರೇಶ್‌ರವರು, ಕನ್ನಡ ದಿನಪತ್ರಿಕೆಗಳಲ್ಲಿ ಕೃಷಿ ಸುದ್ದಿ, ಡಾ.ಅಂಬೇಡ್ಕರ್ ಮತ್ತು ಪತ್ರಿಕೋದ್ಯಮ, ಕೊರೊನಾ ತಂದ ಅನಿವಾರ್ಯತೆಗಳು, ಅಂಬೇಡ್ಕರ್ ಬೆಳಕಿನಲ್ಲಿ ಪತ್ರಿಕೋದ್ಯಮ, ಅಭಿವೃದ್ಧಿಗಾಗಿ ಸಂವಹನ, ಧೀಮಂತ ಪತ್ರಕರ್ತ ಡಾ.ಬಿ.ಆರ್.ಅಂಬೇಡ್ಕರ್, ಮಹಾನಾಯಕನ ಮಹಾ ಕೊಡುಗೆಗಳು, ನೆಲೆ ಇಲ್ಲದವರು, ಪತ್ರಿಕೋದ್ಯಮದ ಹೊನ್ನಾರು ಎಳೆದವರು, ಮಾಧ್ಯಮ: ಹಸಿ ಆಶಯ ಹುಸಿ ನಿರೀಕ್ಷೆ, ಮಹಾ ಮಾನವತಾವಾದಿ, ಅಸಮಾನತೆಯ ಉದಾರೀಕರಣ, ಸಂವಿಧಾನ: ನಾಡಿಮಿಡಿತ-ಜನಮಿಡಿತ ಕೃತಿಗಳನ್ನು ರಚಿಸಿದ್ದಾರೆ.
ಇವರೆ ಸೇವೆಯನ್ನು ಗುರುತಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯಿಂದ 2022ರ ‘ವಿಶ್ವಮಾನವ ಪ್ರಶಸ್ತಿ. ಕರ್ನಾಟಕ ಹೊಯ್ಸಳ ಸಂಘ ಮತ್ತು ಸವಿಗನ್ನಡ ಪತ್ರಿಕೆಗಳು ‘ಹೊಯ್ಸಳ. ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯಿಂದ ‘ಸೇವಾ ಭೂಷಣ ಮತ್ತು ‘ಕರುನಾಡ ರತ್ನ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

andolanait

Recent Posts

ಪಶ್ಚಿಮ ಬಂಗಾಳ ಎರಡನೇ ಹಂತದ ಚುನಾವಣೆ : ಏ.29ರಂದು ಮತದಾನ ; ಭಾರೀ ಬಿಗಿ ಭದ್ರತೆ

ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು,…

47 mins ago

ಅರಳುಮರಳು ಮಾತು, ಕ್ಷಮಿಸಿಬಿಡೋಣ : ಎಚ್.ವಿಶ್ವನಾಥ್ ಹೇಳಿಕೆಗೆ ಸಚಿವ ಮಧು ಬಂಗಾರಪ್ಪ ತಿರುಗೇಟು

ಶಿವಮೊಗ್ಗ : ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್‌ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ…

1 hour ago

ಭಾರತ-ನ್ಯೂಜಿಲೆಂಡ್‌ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ : 1.88 ಲಕ್ಷ ಕೋಟಿ ಹೂಡಿಕೆ

ನವದೆಹಲಿ : ಭಾರತ ಮತ್ತು ನ್ಯೂಜಿಲೆಂಡ್ ನಡುವೆ ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸೋಮವಾರ ನವದೆಹಲಿಯಲ್ಲಿ ʼಮುಕ್ತ…

2 hours ago

ಕಾಂಗ್ರೆಸ್ ಮಹಿಳಾ ವಿರೋಧಿ ಅಲ್ಲ, ಬಿಜೆಪಿಯದ್ದು ರಾಜಕೀಯ ಆಟ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ : ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು. ಆದರೆ…

3 hours ago

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ : ಶಾರಿಕ್‌ಗೆ 10 ವರ್ಷ ಜೈಲು

ಬೆಂಗಳೂರು : ಮಂಗಳೂರು ನಗರದಲ್ಲಿ ನಡೆದಿದ್ದ ಆತಂಕಕಾರಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್‌ನನ್ನು ದೋಷಿ…

3 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭದ್ರತಾ ಲೋಪ ಪ್ರಕರಣ | ಸಿಬ್ಬಂದಿಗಳಿಂದಲೇ ಕೃತ್ಯ ; ಇಬ್ಬರ ಬಂಧನ

ಬೆಂಗಳೂರು : ಐಪಿಎಲ್ ಪಂದ್ಯಗಳ ವೇಳೆ ಭದ್ರತೆ ನಿರ್ವಹಣೆಗಾಗಿ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳ ಸಂಪರ್ಕ ಕಡಿತಗೊಳಿಸುವ ಮೂಲಕ…

4 hours ago