ಮಂಜುಕೋಟೆ
ಹೋರಾಟ ಮತ್ತು ಸಾಹಿತ್ಯ ಕ್ಷೇತ್ರದ ನಿಸ್ವಾರ್ಥ ಸೇವೆಗಾಗಿ ಒಲಿದ ಸಮ್ಮೇಳನಾಧ್ಯಕ್ಷ ಸ್ಥಾನ
ಸಮಾಜದಲ್ಲಿನ ಶೋಷಿತರ, ಧಮನಿತರ, ನೆಲೆ ಇಲ್ಲದ ಸಮುದಾಯಗಳ ಬದುಕು-ಬವಣೆಗಳನ್ನು ತನ್ನ ಲೇಖನಿಯ ಮೂಲಕ ಸಮಾಜದ ಮುಂದಿಟ್ಟು ಅಂತಹ ಸಮುದಾಯಗಳನ್ನು ಮುಖ್ಯವಾಹಿನಿಗೆ ತರಲು ಪ್ರಯತ್ನಿಸುವ ಮೂಲಕ ಅಲೆಮಾರಿ, ಅರೆ ಅಲೆಮಾರಿ, ಆದಿವಾಸಿ-ಬುಡಕಟ್ಟು ಜನರು ಅನುಭವಿಸುತ್ತಿರುವ ನೋವುಗಳನ್ನು ತೆರೆದಿಟ್ಟು ಸಮಾಜ ಮತ್ತು ಸರ್ಕಾರಗಳ ಕಣ್ತೆರೆಸಿದವರು ಈ ಬಾರಿಯ ಹೆಗ್ಗಡದೇವನಕೋಟೆ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಲಿರುವ ಡಾ.ಅಮ್ಮಸಂದ್ರ ಸುರೇಶ್.
ಪತ್ರಿಕೋದ್ಯಮ, ಸ್ನಾತಕೋತ್ತರ ಪದವಿ ಮತ್ತು ಮೈಸೂರು ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪಿಎಚ್.ಡಿ ಪಡೆದಿರುವ ಅಮ್ಮಸಂದ್ರ ಸುರೇಶ್ರವರು ಅಂಚೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪ್ರವೃತ್ತಿಯಲ್ಲಿ ಲೇಖಕ, ಅಂಕಣಕಾರ, ಹವ್ಯಾಸಿ ಅಭಿವೃದ್ಧಿ ಪತ್ರಕರ್ತ, ಅಭಿವೃದ್ಧಿ ಮತ್ತು ಕೃಷಿ ಪತ್ರಿಕೋದ್ಯಮ ವಿಷಯದ ಸಂಪನ್ಮೂಲ ವ್ಯಕ್ತಿ ಹಾಗೂ ಮಾಧ್ಯಮ ವಿಶ್ಲೇಷಕರಾಗಿದ್ದಾರೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಅಲೆಮಾರಿ ಮತ್ತು ಅರೆ ಅಲೆಮಾರಿ ವೇದಿಕೆ ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಅಲೆಮಾರಿ, ಅರೆ ಅಲೆಮಾರಿ ವಿಮುಕ್ತ ಬುಡಕಟ್ಟು ಸಮುದಾಯಗಳ ಮಹಾ ಒಕ್ಕೂಟಗಳ ಮಾಧ್ಯಮ ಸಲಹೆಗಾರರಾಗಿಯೂ ಅವರು ಸೇವೆ ಸಲ್ಲಿಸುತ್ತಿದ್ದಾರೆ.
ಕಳೆದ 32 ವರ್ಷಗಳಿಂದ 1500ಕ್ಕೂ ಹೆಚ್ಚು ಲೇಖನಗಳನ್ನು ಬರೆದಿರುವ ಅಮ್ಮಸಂದ್ರ ಸುರೇಶ್ರವರ ‘ಮಾಧ್ಯಮ ಲೋಕದ ಎಂಬ ಯೂಟ್ಯೂಬ್ ವಾಹಿನಿಯನ್ನು ಜೊತೆಗೆ ಬಹುತೇಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ದೂರಶಿಕ್ಷಣ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಅಭಿವೃದ್ಧಿ ಮತ್ತು ಕೃಷಿ ಪತ್ರಿಕೋದ್ಯಮ ವಿಷಯಗಳನ್ನು ಬೋಧಿಸುವ ಮೂಲಕ 2021ರಿಂದ ಸಂಪನ್ಮೂಲ ವ್ಯಕ್ತಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಡಾ.ಅಮ್ಮಸಂದ್ರ ಸುರೇಶ್ರವರು, ಕನ್ನಡ ದಿನಪತ್ರಿಕೆಗಳಲ್ಲಿ ಕೃಷಿ ಸುದ್ದಿ, ಡಾ.ಅಂಬೇಡ್ಕರ್ ಮತ್ತು ಪತ್ರಿಕೋದ್ಯಮ, ಕೊರೊನಾ ತಂದ ಅನಿವಾರ್ಯತೆಗಳು, ಅಂಬೇಡ್ಕರ್ ಬೆಳಕಿನಲ್ಲಿ ಪತ್ರಿಕೋದ್ಯಮ, ಅಭಿವೃದ್ಧಿಗಾಗಿ ಸಂವಹನ, ಧೀಮಂತ ಪತ್ರಕರ್ತ ಡಾ.ಬಿ.ಆರ್.ಅಂಬೇಡ್ಕರ್, ಮಹಾನಾಯಕನ ಮಹಾ ಕೊಡುಗೆಗಳು, ನೆಲೆ ಇಲ್ಲದವರು, ಪತ್ರಿಕೋದ್ಯಮದ ಹೊನ್ನಾರು ಎಳೆದವರು, ಮಾಧ್ಯಮ: ಹಸಿ ಆಶಯ ಹುಸಿ ನಿರೀಕ್ಷೆ, ಮಹಾ ಮಾನವತಾವಾದಿ, ಅಸಮಾನತೆಯ ಉದಾರೀಕರಣ, ಸಂವಿಧಾನ: ನಾಡಿಮಿಡಿತ-ಜನಮಿಡಿತ ಕೃತಿಗಳನ್ನು ರಚಿಸಿದ್ದಾರೆ.
ಇವರೆ ಸೇವೆಯನ್ನು ಗುರುತಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯಿಂದ 2022ರ ‘ವಿಶ್ವಮಾನವ ಪ್ರಶಸ್ತಿ. ಕರ್ನಾಟಕ ಹೊಯ್ಸಳ ಸಂಘ ಮತ್ತು ಸವಿಗನ್ನಡ ಪತ್ರಿಕೆಗಳು ‘ಹೊಯ್ಸಳ. ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯಿಂದ ‘ಸೇವಾ ಭೂಷಣ ಮತ್ತು ‘ಕರುನಾಡ ರತ್ನ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.
ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್…
ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…
ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…
ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…