ಜಿಲ್ಲೆಗಳು

ಶೋಷಿತರ ಮತ್ತು ಧಮನಿತರ ಧ್ವನಿ- ಡಾ.ಅಮ್ಮಸಂದ್ರ ಸುರೇಶ್

ಮಂಜುಕೋಟೆ

ಹೋರಾಟ ಮತ್ತು ಸಾಹಿತ್ಯ ಕ್ಷೇತ್ರದ ನಿಸ್ವಾರ್ಥ ಸೇವೆಗಾಗಿ ಒಲಿದ ಸಮ್ಮೇಳನಾಧ್ಯಕ್ಷ ಸ್ಥಾನ

ಸಮಾಜದಲ್ಲಿನ ಶೋಷಿತರ, ಧಮನಿತರ, ನೆಲೆ ಇಲ್ಲದ ಸಮುದಾಯಗಳ ಬದುಕು-ಬವಣೆಗಳನ್ನು ತನ್ನ ಲೇಖನಿಯ ಮೂಲಕ ಸಮಾಜದ ಮುಂದಿಟ್ಟು ಅಂತಹ ಸಮುದಾಯಗಳನ್ನು ಮುಖ್ಯವಾಹಿನಿಗೆ ತರಲು ಪ್ರಯತ್ನಿಸುವ ಮೂಲಕ ಅಲೆಮಾರಿ, ಅರೆ ಅಲೆಮಾರಿ, ಆದಿವಾಸಿ-ಬುಡಕಟ್ಟು ಜನರು ಅನುಭವಿಸುತ್ತಿರುವ ನೋವುಗಳನ್ನು ತೆರೆದಿಟ್ಟು ಸಮಾಜ ಮತ್ತು ಸರ್ಕಾರಗಳ ಕಣ್ತೆರೆಸಿದವರು ಈ ಬಾರಿಯ ಹೆಗ್ಗಡದೇವನಕೋಟೆ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಲಿರುವ ಡಾ.ಅಮ್ಮಸಂದ್ರ ಸುರೇಶ್.
ಪತ್ರಿಕೋದ್ಯಮ, ಸ್ನಾತಕೋತ್ತರ ಪದವಿ ಮತ್ತು ಮೈಸೂರು ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪಿಎಚ್.ಡಿ ಪಡೆದಿರುವ ಅಮ್ಮಸಂದ್ರ ಸುರೇಶ್‌ರವರು ಅಂಚೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪ್ರವೃತ್ತಿಯಲ್ಲಿ ಲೇಖಕ, ಅಂಕಣಕಾರ, ಹವ್ಯಾಸಿ ಅಭಿವೃದ್ಧಿ ಪತ್ರಕರ್ತ, ಅಭಿವೃದ್ಧಿ ಮತ್ತು ಕೃಷಿ ಪತ್ರಿಕೋದ್ಯಮ ವಿಷಯದ ಸಂಪನ್ಮೂಲ ವ್ಯಕ್ತಿ ಹಾಗೂ ಮಾಧ್ಯಮ ವಿಶ್ಲೇಷಕರಾಗಿದ್ದಾರೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಅಲೆಮಾರಿ ಮತ್ತು ಅರೆ ಅಲೆಮಾರಿ ವೇದಿಕೆ ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಅಲೆಮಾರಿ, ಅರೆ ಅಲೆಮಾರಿ ವಿಮುಕ್ತ ಬುಡಕಟ್ಟು ಸಮುದಾಯಗಳ ಮಹಾ ಒಕ್ಕೂಟಗಳ ಮಾಧ್ಯಮ ಸಲಹೆಗಾರರಾಗಿಯೂ ಅವರು ಸೇವೆ ಸಲ್ಲಿಸುತ್ತಿದ್ದಾರೆ.
ಕಳೆದ 32 ವರ್ಷಗಳಿಂದ 1500ಕ್ಕೂ ಹೆಚ್ಚು ಲೇಖನಗಳನ್ನು ಬರೆದಿರುವ ಅಮ್ಮಸಂದ್ರ ಸುರೇಶ್‌ರವರ ‘ಮಾಧ್ಯಮ ಲೋಕದ ಎಂಬ ಯೂಟ್ಯೂಬ್ ವಾಹಿನಿಯನ್ನು ಜೊತೆಗೆ ಬಹುತೇಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ದೂರಶಿಕ್ಷಣ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಅಭಿವೃದ್ಧಿ ಮತ್ತು ಕೃಷಿ ಪತ್ರಿಕೋದ್ಯಮ ವಿಷಯಗಳನ್ನು ಬೋಧಿಸುವ ಮೂಲಕ 2021ರಿಂದ ಸಂಪನ್ಮೂಲ ವ್ಯಕ್ತಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಡಾ.ಅಮ್ಮಸಂದ್ರ ಸುರೇಶ್‌ರವರು, ಕನ್ನಡ ದಿನಪತ್ರಿಕೆಗಳಲ್ಲಿ ಕೃಷಿ ಸುದ್ದಿ, ಡಾ.ಅಂಬೇಡ್ಕರ್ ಮತ್ತು ಪತ್ರಿಕೋದ್ಯಮ, ಕೊರೊನಾ ತಂದ ಅನಿವಾರ್ಯತೆಗಳು, ಅಂಬೇಡ್ಕರ್ ಬೆಳಕಿನಲ್ಲಿ ಪತ್ರಿಕೋದ್ಯಮ, ಅಭಿವೃದ್ಧಿಗಾಗಿ ಸಂವಹನ, ಧೀಮಂತ ಪತ್ರಕರ್ತ ಡಾ.ಬಿ.ಆರ್.ಅಂಬೇಡ್ಕರ್, ಮಹಾನಾಯಕನ ಮಹಾ ಕೊಡುಗೆಗಳು, ನೆಲೆ ಇಲ್ಲದವರು, ಪತ್ರಿಕೋದ್ಯಮದ ಹೊನ್ನಾರು ಎಳೆದವರು, ಮಾಧ್ಯಮ: ಹಸಿ ಆಶಯ ಹುಸಿ ನಿರೀಕ್ಷೆ, ಮಹಾ ಮಾನವತಾವಾದಿ, ಅಸಮಾನತೆಯ ಉದಾರೀಕರಣ, ಸಂವಿಧಾನ: ನಾಡಿಮಿಡಿತ-ಜನಮಿಡಿತ ಕೃತಿಗಳನ್ನು ರಚಿಸಿದ್ದಾರೆ.
ಇವರೆ ಸೇವೆಯನ್ನು ಗುರುತಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯಿಂದ 2022ರ ‘ವಿಶ್ವಮಾನವ ಪ್ರಶಸ್ತಿ. ಕರ್ನಾಟಕ ಹೊಯ್ಸಳ ಸಂಘ ಮತ್ತು ಸವಿಗನ್ನಡ ಪತ್ರಿಕೆಗಳು ‘ಹೊಯ್ಸಳ. ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯಿಂದ ‘ಸೇವಾ ಭೂಷಣ ಮತ್ತು ‘ಕರುನಾಡ ರತ್ನ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

11 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

15 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

15 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

15 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

15 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

16 hours ago