ಜಿಲ್ಲೆಗಳು

ಮೈಸೂರು ಜಿಲ್ಲೆಯಲ್ಲೂ ಮತದಾರರ ಪಟ್ಟಿಗೆ ಕನ್ನ: ಕಾಂಗ್ರೆಸ್ ಆರೋಪ

ಮೈಸೂರು: ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಜಿಲ್ಲೆಯಲ್ಲಿ ೧,೪೫,೯೦೮ ಮತದಾರರನ್ನು ಸಕಾರಣವಿಲ್ಲದೇ ಕೈಬಿಡಲಾಗಿದೆ ಎಂದು ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್ ಆರೋಪಿಸಿದರು.

ನಗರ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ದಾಖಲೆ ಬಿಡುಗಡೆ ಮಾಡಿ ಮಾತನಾಡಿದ ಅವರು, ಬೆಂಗಳೂರಿನ ಮಾದರಿಯಲ್ಲಿಯೇ ಮೈಸೂರಿನಲ್ಲಿಯೂ ಮತದಾರರ ಪಟ್ಟಿಗೆ ಕನ್ನ ಹಾಕಲಾಗಿದೆ ಎಂದರು.

ಮತದಾರರ ಪಟ್ಟಿಯಿಂದ ಹೆಸರು ಕೈ ಬಿಡಬೇಕಾದರೆ ಸೂಕ್ತ ಕಾರಣ ನೀಡಬೇಕು. ವರ್ಗಾವಣೆ, ನಿಧನ, ಡಂಬಲ್ ಎಂಟ್ರಿಯಾಗಿದ್ದರೆ ತೆಗೆಯಲಾಗುತ್ತದೆ. ಆದರೆ, ಜಿಲ್ಲೆಯಲ್ಲಿ ಸೂಕ್ತ ಕಾರಣವನ್ನೇ ನೀಡದೇ ಮತದಾರರ ಪಟ್ಟಿಯಿಂದ ಹೆಸರು ಕೈ ಬಿಡಲಾಗಿದೆ. ಇದು ಅಕ್ಷಮ್ಯ ಲೋಪ ಮಾತ್ರವಲ್ಲದೆ ದಲಿತರು, ಹಿಂದುಳಿದ ವರ್ಗಗಳ ಮತದಾರರು ಹಕ್ಕಿನಿಂದ ದೂರ ಉಳಿಯುವಂತೆ ಮಾಡಿರುವ ಕಾರಣ ಚುನಾವಣಾ ಆಯೋಗ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಮೈಸೂರು ಜಿಲ್ಲೆಯ ೧೧ ವಿಧಾನಸಭಾ ಕ್ಷೇತ್ರಗಳಿದ್ದು, ಈ ಪೈಕಿ ಚಾಮರಾಜ ಕ್ಷೇತ್ರದಲ್ಲಿ ೧೬,೨೪೨, ನರಸಿಂಹರಾಜ ೧೮೦೦೭, ವರುಣಾ ೧೧೯೮೭, ನರಸಿಂಹರಾಜ ೧೨೩೬೭, ಚಾಮರಾಜ ೧೭೮೪೭, ಕೆ.ಆರ್.ನಗರ ೧೦೬೦೪, ಹುಣಸೂರು ೧೦೨೨೦, ಪಿರಿಯಾಪಟ್ಟಣ ೮೫೭೦, ನಂಜನಗೂಡು ೧೧೭೨೪ ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂದರು.

ಚುನಾವಣೆ ಗೆಲ್ಲುವುದಕ್ಕಾಗಿ ಬಿಜೆಪಿಯವರು ಏನನ್ನು ಮಾಡಲಿಕ್ಕೂ ಸಿದ್ಧರಿದ್ದಾರೆ. ದಯಮಾಡಿ ಸಾರ್ವಜನಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರಿದೆಯೇ ಎಂಬುದನ್ನು ಪರೀಕ್ಷಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಮತದಾರರ ಪಟ್ಟಿಗೆ ಕನ್ನ ಪ್ರಕರಣ ಬೆಳಕಿಗೆ ಬಂದಾಗ ಮುಖ್ಯಮಂತ್ರಿ ಏನೂ ಆಗಿಲ್ಲ ಎಂಬಂತೆ ಸಮರ್ಥಿಸಿದ್ದರು. ಅಧಿಕಾರಕ್ಕಾಗಿ ಬಿಜೆಪಿ ಅನೈತಿಕ ಮಾರ್ಗ ಹಿಡಿದಿದೆ. ಜನ ಜಾಗೃತರಾಗಬೇಕು. ಪ್ರಜಾಪ್ರಭುತ್ವ ಬುಡಮೇಲು ಮಾಡುವ ಈ ಪ್ರಯತ್ನದ ವಿರುದ್ಧ ಪ್ರಗತಿಪರರು, ಬುದ್ಧಿಜೀವಿಗಳು, ಸಾಹಿತಿಗಳು ದನಿ ಎತ್ತಬೇಕು ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯ ಪ್ರವೇಶಿಸಿಸಿ ಮತದಾರರ ಹಕ್ಕನ್ನು ಕಸಿಯುತ್ತಿರುವ ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ಮಾತನಾಡಿ, ಬೆಂಗಳೂರು ಬಳಿಕ ಮೈಸೂರಿನಲ್ಲಿಯೂ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಮತದಾರರನ್ನು ಕೈ ಬಿಡಲಾಗಿದೆ. ರಾಜ್ಯವ್ಯಾಪಿ ದೊಡ್ಡ ಜಾಲ ಹರಡಿರುವಂತಿದೆ. ಕೂಡಲೇ ರಾಜ್ಯ ಚುನಾವಣಾ ಆಯೋಗ ಮತದಾರರ ಪಟ್ಟಿ ಪರಿಷ್ಕರಣೆ ಕೆಲಸವನ್ನು ಸ್ಥಗಿತಗೊಳಿಸಬೇಕು. ಚುನಾವಣಾ ಕೆಲಸದಲ್ಲಿ ನಿಯೋಜಿತ ಅಧಿಕಾರಿಗಳನ್ನು ವರ್ಗಾಯಿಸಬೇಕು ಎಂದು ಒತ್ತಾಯಿಸಿದರು.
ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ ಮಾತನಾಡಿ, ನಗರದ ಪ್ರತಿ ವಾರ್ಡ್‌ಗಳಲ್ಲಿ ಪಕ್ಷದ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಕೊಡಲಿದ್ದಾರೆ. ಜನರ ಹಕ್ಕಿಗೆ ಚ್ಯುತಿ ತರುತ್ತಿರುವುದರ ವಿರುದ್ಧ ಆಂದೋಲನ ಮಾಡುತ್ತೇವೆ ಎಂದು ತಿಳಿಸಿದರು.

ಮುಖಂಡರಾದ ಭಾಸ್ಕರ್ ಎಲ್.ಗೌಡ, ಎನ್.ಎಸ್.ಗೋಪಿನಾಥ್, ಮಾಧ್ಯಮ ವಕ್ತಾರ ಮಹೇಶ್, ಗಿರೀಶ್ ಸುದ್ದಿಗೋಷ್ಠಿಯಲ್ಲಿದ್ದರು.

ಸಿದ್ದರಾಮಯ್ಯ ಅವರನ್ನು ಟೀಕಿಸಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿಗೆ ಯೋಗ್ಯತೆ ಇಲ್ಲ. ಉನ್ನತ ಶಿಕ್ಷಣ ಸಚಿವರಾಗಿ ಕುಲಪತಿ ಹುದ್ದೆಗಳನ್ನು ಹರಾಜಿನಲ್ಲಿ ಆಯ್ಕೆ ಮಾಡಿದವರು ಸಿದ್ದರಾಮಯ್ಯ ಬಗ್ಗೆ ಮಾತಾಡುತ್ತಾರೆ. ಲೂಟಿ ರವಿ ಎಂದು ಸಿದ್ದರಾಮಯ್ಯ ಹೇಳಿರುವುದು ಸರಿಯಾಗಿದೆ. -ಎಚ್.ಎ.ವೆಂಕಟೇಶ್, ಕೆಪಿಸಿಸಿ ವಕ್ತಾರ

 

 

andolana

Recent Posts

ವಾಹನ ದಟ್ಟನೆ : ಸುಗಮ ಸಂಚಾರಕ್ಕೆ ರೈಲ್ವೆ ಅಂಡರ್‌ ಬ್ರಿಡ್ಜ್‌ ವಿಸ್ತರಿಸಲು ಮನವಿ

ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…

7 mins ago

ಮೈಸೂರು–ಜಲ್ಪೈಗುಡಿ ನಡುವೆ ವಿಶೇಷ ರೈಲು ಸಂಚಾರ

ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್‌ ನಡುವೆ ವಿಶೇಷ ಎಕ್ಸ್‌ಪ್ರೆಸ್…

14 mins ago

ಯಮುನಾ ನದಿಯಲ್ಲಿ ಮುಳುಗಿದ ಪ್ರವಾಸಿಗರ ದೋಣಿ ; 6 ಮಂದಿ ಸಾವು, ಹಲವರು ನಾಪತ್ತೆ

ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…

1 hour ago

ಹಡಗುಗಳ ಮೇಲಿನ ಶುಲ್ಕ ನಿಲ್ಲಿಸಿ ; ಇರಾನ್‌ಗೆ ಟ್ರಂಪ್ ಸೂಚನೆ

ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…

2 hours ago

ನಂಜನಗೂಡು | ದೇವರಾಯಶೆಟ್ಟಿಪುರದಲ್ಲಿ ಚಿರತೆ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಆತಂಕ

ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…

2 hours ago

ಹನೂರು | ಪ್ರತ್ಯೇಕ ಮನೆಕಳ್ಳತನ ; ಐವರ ಬಂಧನ

ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…

3 hours ago