ಜಿಲ್ಲೆಗಳು

ಮೈಸೂರು ಜಿಲ್ಲೆಯಲ್ಲೂ ಮತದಾರರ ಪಟ್ಟಿಗೆ ಕನ್ನ: ಕಾಂಗ್ರೆಸ್ ಆರೋಪ

ಮೈಸೂರು: ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಜಿಲ್ಲೆಯಲ್ಲಿ ೧,೪೫,೯೦೮ ಮತದಾರರನ್ನು ಸಕಾರಣವಿಲ್ಲದೇ ಕೈಬಿಡಲಾಗಿದೆ ಎಂದು ಕೆಪಿಸಿಸಿ ವಕ್ತಾರ ಎಚ್.ಎ.ವೆಂಕಟೇಶ್ ಆರೋಪಿಸಿದರು.

ನಗರ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ದಾಖಲೆ ಬಿಡುಗಡೆ ಮಾಡಿ ಮಾತನಾಡಿದ ಅವರು, ಬೆಂಗಳೂರಿನ ಮಾದರಿಯಲ್ಲಿಯೇ ಮೈಸೂರಿನಲ್ಲಿಯೂ ಮತದಾರರ ಪಟ್ಟಿಗೆ ಕನ್ನ ಹಾಕಲಾಗಿದೆ ಎಂದರು.

ಮತದಾರರ ಪಟ್ಟಿಯಿಂದ ಹೆಸರು ಕೈ ಬಿಡಬೇಕಾದರೆ ಸೂಕ್ತ ಕಾರಣ ನೀಡಬೇಕು. ವರ್ಗಾವಣೆ, ನಿಧನ, ಡಂಬಲ್ ಎಂಟ್ರಿಯಾಗಿದ್ದರೆ ತೆಗೆಯಲಾಗುತ್ತದೆ. ಆದರೆ, ಜಿಲ್ಲೆಯಲ್ಲಿ ಸೂಕ್ತ ಕಾರಣವನ್ನೇ ನೀಡದೇ ಮತದಾರರ ಪಟ್ಟಿಯಿಂದ ಹೆಸರು ಕೈ ಬಿಡಲಾಗಿದೆ. ಇದು ಅಕ್ಷಮ್ಯ ಲೋಪ ಮಾತ್ರವಲ್ಲದೆ ದಲಿತರು, ಹಿಂದುಳಿದ ವರ್ಗಗಳ ಮತದಾರರು ಹಕ್ಕಿನಿಂದ ದೂರ ಉಳಿಯುವಂತೆ ಮಾಡಿರುವ ಕಾರಣ ಚುನಾವಣಾ ಆಯೋಗ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಮೈಸೂರು ಜಿಲ್ಲೆಯ ೧೧ ವಿಧಾನಸಭಾ ಕ್ಷೇತ್ರಗಳಿದ್ದು, ಈ ಪೈಕಿ ಚಾಮರಾಜ ಕ್ಷೇತ್ರದಲ್ಲಿ ೧೬,೨೪೨, ನರಸಿಂಹರಾಜ ೧೮೦೦೭, ವರುಣಾ ೧೧೯೮೭, ನರಸಿಂಹರಾಜ ೧೨೩೬೭, ಚಾಮರಾಜ ೧೭೮೪೭, ಕೆ.ಆರ್.ನಗರ ೧೦೬೦೪, ಹುಣಸೂರು ೧೦೨೨೦, ಪಿರಿಯಾಪಟ್ಟಣ ೮೫೭೦, ನಂಜನಗೂಡು ೧೧೭೨೪ ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂದರು.

ಚುನಾವಣೆ ಗೆಲ್ಲುವುದಕ್ಕಾಗಿ ಬಿಜೆಪಿಯವರು ಏನನ್ನು ಮಾಡಲಿಕ್ಕೂ ಸಿದ್ಧರಿದ್ದಾರೆ. ದಯಮಾಡಿ ಸಾರ್ವಜನಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರಿದೆಯೇ ಎಂಬುದನ್ನು ಪರೀಕ್ಷಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಮತದಾರರ ಪಟ್ಟಿಗೆ ಕನ್ನ ಪ್ರಕರಣ ಬೆಳಕಿಗೆ ಬಂದಾಗ ಮುಖ್ಯಮಂತ್ರಿ ಏನೂ ಆಗಿಲ್ಲ ಎಂಬಂತೆ ಸಮರ್ಥಿಸಿದ್ದರು. ಅಧಿಕಾರಕ್ಕಾಗಿ ಬಿಜೆಪಿ ಅನೈತಿಕ ಮಾರ್ಗ ಹಿಡಿದಿದೆ. ಜನ ಜಾಗೃತರಾಗಬೇಕು. ಪ್ರಜಾಪ್ರಭುತ್ವ ಬುಡಮೇಲು ಮಾಡುವ ಈ ಪ್ರಯತ್ನದ ವಿರುದ್ಧ ಪ್ರಗತಿಪರರು, ಬುದ್ಧಿಜೀವಿಗಳು, ಸಾಹಿತಿಗಳು ದನಿ ಎತ್ತಬೇಕು ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯ ಪ್ರವೇಶಿಸಿಸಿ ಮತದಾರರ ಹಕ್ಕನ್ನು ಕಸಿಯುತ್ತಿರುವ ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ಮಾತನಾಡಿ, ಬೆಂಗಳೂರು ಬಳಿಕ ಮೈಸೂರಿನಲ್ಲಿಯೂ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಮತದಾರರನ್ನು ಕೈ ಬಿಡಲಾಗಿದೆ. ರಾಜ್ಯವ್ಯಾಪಿ ದೊಡ್ಡ ಜಾಲ ಹರಡಿರುವಂತಿದೆ. ಕೂಡಲೇ ರಾಜ್ಯ ಚುನಾವಣಾ ಆಯೋಗ ಮತದಾರರ ಪಟ್ಟಿ ಪರಿಷ್ಕರಣೆ ಕೆಲಸವನ್ನು ಸ್ಥಗಿತಗೊಳಿಸಬೇಕು. ಚುನಾವಣಾ ಕೆಲಸದಲ್ಲಿ ನಿಯೋಜಿತ ಅಧಿಕಾರಿಗಳನ್ನು ವರ್ಗಾಯಿಸಬೇಕು ಎಂದು ಒತ್ತಾಯಿಸಿದರು.
ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ ಮಾತನಾಡಿ, ನಗರದ ಪ್ರತಿ ವಾರ್ಡ್‌ಗಳಲ್ಲಿ ಪಕ್ಷದ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಕೊಡಲಿದ್ದಾರೆ. ಜನರ ಹಕ್ಕಿಗೆ ಚ್ಯುತಿ ತರುತ್ತಿರುವುದರ ವಿರುದ್ಧ ಆಂದೋಲನ ಮಾಡುತ್ತೇವೆ ಎಂದು ತಿಳಿಸಿದರು.

ಮುಖಂಡರಾದ ಭಾಸ್ಕರ್ ಎಲ್.ಗೌಡ, ಎನ್.ಎಸ್.ಗೋಪಿನಾಥ್, ಮಾಧ್ಯಮ ವಕ್ತಾರ ಮಹೇಶ್, ಗಿರೀಶ್ ಸುದ್ದಿಗೋಷ್ಠಿಯಲ್ಲಿದ್ದರು.

ಸಿದ್ದರಾಮಯ್ಯ ಅವರನ್ನು ಟೀಕಿಸಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿಗೆ ಯೋಗ್ಯತೆ ಇಲ್ಲ. ಉನ್ನತ ಶಿಕ್ಷಣ ಸಚಿವರಾಗಿ ಕುಲಪತಿ ಹುದ್ದೆಗಳನ್ನು ಹರಾಜಿನಲ್ಲಿ ಆಯ್ಕೆ ಮಾಡಿದವರು ಸಿದ್ದರಾಮಯ್ಯ ಬಗ್ಗೆ ಮಾತಾಡುತ್ತಾರೆ. ಲೂಟಿ ರವಿ ಎಂದು ಸಿದ್ದರಾಮಯ್ಯ ಹೇಳಿರುವುದು ಸರಿಯಾಗಿದೆ. -ಎಚ್.ಎ.ವೆಂಕಟೇಶ್, ಕೆಪಿಸಿಸಿ ವಕ್ತಾರ

 

 

andolana

Recent Posts

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

34 mins ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

2 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

2 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

7 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

7 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

7 hours ago