ಮೈಸೂರು: ಮೈಸೂರು ಮಹಾನಗರ ಪಾಲಿಕೆ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲುಜಾಗೃತಿ ಜಾಥಾ ನಡೆಸಲಾಯಿತು.
ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಎದುರು ನಡೆದ ಕಾರ್ಯಕ್ರಮಕ್ಕೆಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಚಾಲನೆ ನೀಡಿದರು. ನಗರಪಾಲಿಕೆ ಆಯುಕ್ತ ಜಿ.ಲಕ್ಷ್ಮೀ ಕಾಂತ್ ರೆಡ್ಡಿ, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬಿ.ಆರ್.ಪೂರ್ಣಿಮಾ, ಅಪರ ಜಿಲ್ಲಾಧಿಕಾರಿ ಡಾ.ಬಿ.ಎಸ್.ಮಂಜುನಾಥ ಸ್ವಾಮಿ, ನಗರಪಾಲಿಕೆ ಹೆಚ್ಚುವರಿ ಆಯುಕ್ತರಾದ ಎಂ.ಕೆ.ಸವಿತ,ಕೌನ್ಸಿಲ್ ಕಾರ್ಯದರ್ಶಿ ರಂಗಸ್ವಾಮಿ ಇನ್ನಿತರರು ಹಾಜರಿದ್ದರು.
ಜಿಲ್ಲಾಧಿಕಾರಿ ಮಾತನಾಡಿ, ಮತದಾರರ ಪಟ್ಟಿಯ ಪರಿಷ್ಕರಣೆ ಒಂದು ತಿಂಗಳು ಕಾಲ ನಡೆಯಲಿದೆ. ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ನಡೆಯುವಾಗ ಹೊಸ ಮತದಾರರ ಸೇರ್ಪಡೆ, ತಿದ್ದುಪಡಿ, ಬದಲಾವಣೆ ಸೇರಿದಂತೆ ಇನ್ನಿತರ ಅಂಶಗಳನ್ನು ಸರಿಪಡಿಸಲಾಗುತ್ತದೆ.ರಾಜಕೀಯ ಪಕ್ಷಗಳ ನಾಯಕರ ಸಭೆ ಕರೆದು ಚರ್ಚಿಸಲಾಗುತ್ತದೆ. ನಾಲ್ಕು ದಿನಗಳ ಕಾಲ ಮಿಂಚಿನ ನೋಂದಣಿ ನಡೆಯಲಿದೆ. ಮತದಾರರ ಅಂತಿಮ ಮತದಾರರ ಪಟ್ಟಿ ಜನವರಿ ಐದರಂದು ಪ್ರಕಟವಾಗಲಿದೆ. ಸಮಸ್ಯೆ ಇಲ್ಲದಂತೆ ಮತ್ತು ಗೊಂದಲ ಇಲ್ಲದಂತೆ ಕರಡು ಪ್ರತಿಯನ್ನು ಪ್ರಕಟಿಸಿದಾಗ ಗಮನಿಸಿಕೊಳ್ಳಲು ಅವಕಾಶಗಳನ್ನು ನೀಡಲಾಗಿದೆ ಎಂದರು. ಪ್ರತಿಯೊಬ್ಬ ಮತದಾರರು ತಮ್ಮಹೆಸರನ್ನು ನೋಂದಣಿ ಮಾಡಿಕೊಳ್ಳಬೇಕು. ರಾಯಭಾರಿಯಾಗಿ ಮಾಡಿಕೊಂಡು ನೂರು ಮಂದಿಗೆ ಪ್ರಚಾರ ಮಾಡುವಂತೆ ಬಳಸಿಕೊಳ್ಳುವ ಕೆಲಸ ಮಾಡಲಾಗುವುದು ಎಂದರು.
ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…
ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…
ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್ಐಸಿ ಫಿಲೇಚರ್ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…
ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…