ಜಿಲ್ಲೆಗಳು

ಕರಡು ಮತದಾರರ ಪಟ್ಟಿ ಕುರಿತು ಜಾಗೃತಿ ಜಾಥಾ

ಮೈಸೂರು: ಮೈಸೂರು ಮಹಾನಗರ ಪಾಲಿಕೆ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲುಜಾಗೃತಿ ಜಾಥಾ ನಡೆಸಲಾಯಿತು.
ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಎದುರು ನಡೆದ ಕಾರ್ಯಕ್ರಮಕ್ಕೆ‌ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಚಾಲನೆ ನೀಡಿದರು. ನಗರಪಾಲಿಕೆ ಆಯುಕ್ತ ಜಿ.ಲಕ್ಷ್ಮೀ ಕಾಂತ್ ರೆಡ್ಡಿ, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬಿ.ಆರ್.ಪೂರ್ಣಿಮಾ, ಅಪರ ಜಿಲ್ಲಾಧಿಕಾರಿ ಡಾ.ಬಿ.ಎಸ್.ಮಂಜುನಾಥ ಸ್ವಾಮಿ, ನಗರಪಾಲಿಕೆ ಹೆಚ್ಚುವರಿ ಆಯುಕ್ತರಾದ ಎಂ.ಕೆ.ಸವಿತ,ಕೌನ್ಸಿಲ್ ಕಾರ್ಯದರ್ಶಿ ರಂಗಸ್ವಾಮಿ ಇನ್ನಿತರರು ಹಾಜರಿದ್ದರು.
ಜಿಲ್ಲಾಧಿಕಾರಿ ಮಾತನಾಡಿ, ಮತದಾರರ ಪಟ್ಟಿಯ ಪರಿಷ್ಕರಣೆ ಒಂದು ತಿಂಗಳು ಕಾಲ ನಡೆಯಲಿದೆ. ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ನಡೆಯುವಾಗ ಹೊಸ ಮತದಾರರ ಸೇರ್ಪಡೆ, ತಿದ್ದುಪಡಿ, ಬದಲಾವಣೆ ಸೇರಿದಂತೆ ಇನ್ನಿತರ ಅಂಶಗಳನ್ನು ಸರಿಪಡಿಸಲಾಗುತ್ತದೆ.ರಾಜಕೀಯ ಪಕ್ಷಗಳ ನಾಯಕರ ಸಭೆ ಕರೆದು ಚರ್ಚಿಸಲಾಗುತ್ತದೆ. ನಾಲ್ಕು ದಿನಗಳ ಕಾಲ ಮಿಂಚಿನ ನೋಂದಣಿ ನಡೆಯಲಿದೆ. ಮತದಾರರ ಅಂತಿಮ ಮತದಾರರ ಪಟ್ಟಿ ಜನವರಿ ಐದರಂದು ಪ್ರಕಟವಾಗಲಿದೆ. ಸಮಸ್ಯೆ ಇಲ್ಲದಂತೆ ಮತ್ತು ಗೊಂದಲ ಇಲ್ಲದಂತೆ ಕರಡು ಪ್ರತಿಯನ್ನು ಪ್ರಕಟಿಸಿದಾಗ ಗಮನಿಸಿಕೊಳ್ಳಲು ಅವಕಾಶಗಳನ್ನು ನೀಡಲಾಗಿದೆ ಎಂದರು.‌ ಪ್ರತಿಯೊಬ್ಬ ಮತದಾರರು ತಮ್ಮ‌ಹೆಸರನ್ನು ನೋಂದಣಿ ಮಾಡಿಕೊಳ್ಳಬೇಕು. ರಾಯಭಾರಿಯಾಗಿ ಮಾಡಿಕೊಂಡು ನೂರು ಮಂದಿಗೆ ಪ್ರಚಾರ ಮಾಡುವಂತೆ ಬಳಸಿಕೊಳ್ಳುವ ಕೆಲಸ ಮಾಡಲಾಗುವುದು ಎಂದರು.

andolanait

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

21 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

21 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

21 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

21 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

21 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

21 hours ago