ಜಿಲ್ಲೆಗಳು

ಕರಡು ಮತದಾರರ ಪಟ್ಟಿ ಕುರಿತು ಜಾಗೃತಿ ಜಾಥಾ

ಮೈಸೂರು: ಮೈಸೂರು ಮಹಾನಗರ ಪಾಲಿಕೆ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲುಜಾಗೃತಿ ಜಾಥಾ ನಡೆಸಲಾಯಿತು.
ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಎದುರು ನಡೆದ ಕಾರ್ಯಕ್ರಮಕ್ಕೆ‌ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಚಾಲನೆ ನೀಡಿದರು. ನಗರಪಾಲಿಕೆ ಆಯುಕ್ತ ಜಿ.ಲಕ್ಷ್ಮೀ ಕಾಂತ್ ರೆಡ್ಡಿ, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬಿ.ಆರ್.ಪೂರ್ಣಿಮಾ, ಅಪರ ಜಿಲ್ಲಾಧಿಕಾರಿ ಡಾ.ಬಿ.ಎಸ್.ಮಂಜುನಾಥ ಸ್ವಾಮಿ, ನಗರಪಾಲಿಕೆ ಹೆಚ್ಚುವರಿ ಆಯುಕ್ತರಾದ ಎಂ.ಕೆ.ಸವಿತ,ಕೌನ್ಸಿಲ್ ಕಾರ್ಯದರ್ಶಿ ರಂಗಸ್ವಾಮಿ ಇನ್ನಿತರರು ಹಾಜರಿದ್ದರು.
ಜಿಲ್ಲಾಧಿಕಾರಿ ಮಾತನಾಡಿ, ಮತದಾರರ ಪಟ್ಟಿಯ ಪರಿಷ್ಕರಣೆ ಒಂದು ತಿಂಗಳು ಕಾಲ ನಡೆಯಲಿದೆ. ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ನಡೆಯುವಾಗ ಹೊಸ ಮತದಾರರ ಸೇರ್ಪಡೆ, ತಿದ್ದುಪಡಿ, ಬದಲಾವಣೆ ಸೇರಿದಂತೆ ಇನ್ನಿತರ ಅಂಶಗಳನ್ನು ಸರಿಪಡಿಸಲಾಗುತ್ತದೆ.ರಾಜಕೀಯ ಪಕ್ಷಗಳ ನಾಯಕರ ಸಭೆ ಕರೆದು ಚರ್ಚಿಸಲಾಗುತ್ತದೆ. ನಾಲ್ಕು ದಿನಗಳ ಕಾಲ ಮಿಂಚಿನ ನೋಂದಣಿ ನಡೆಯಲಿದೆ. ಮತದಾರರ ಅಂತಿಮ ಮತದಾರರ ಪಟ್ಟಿ ಜನವರಿ ಐದರಂದು ಪ್ರಕಟವಾಗಲಿದೆ. ಸಮಸ್ಯೆ ಇಲ್ಲದಂತೆ ಮತ್ತು ಗೊಂದಲ ಇಲ್ಲದಂತೆ ಕರಡು ಪ್ರತಿಯನ್ನು ಪ್ರಕಟಿಸಿದಾಗ ಗಮನಿಸಿಕೊಳ್ಳಲು ಅವಕಾಶಗಳನ್ನು ನೀಡಲಾಗಿದೆ ಎಂದರು.‌ ಪ್ರತಿಯೊಬ್ಬ ಮತದಾರರು ತಮ್ಮ‌ಹೆಸರನ್ನು ನೋಂದಣಿ ಮಾಡಿಕೊಳ್ಳಬೇಕು. ರಾಯಭಾರಿಯಾಗಿ ಮಾಡಿಕೊಂಡು ನೂರು ಮಂದಿಗೆ ಪ್ರಚಾರ ಮಾಡುವಂತೆ ಬಳಸಿಕೊಳ್ಳುವ ಕೆಲಸ ಮಾಡಲಾಗುವುದು ಎಂದರು.

andolanait

Recent Posts

ಓದುಗರ ಪತ್ರ: ರಸ್ತೆ ದುರಸ್ತಿಗೊಳಿಸಿ

ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದ ರಸ್ತೆ ಹಾಳಾಗಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಹರ ಸಾಹಸ ಮಾಡಬೇಕಾಗಿದೆ. ರಸ್ತೆಯ…

2 hours ago

ಓದುಗರ ಪತ್ರ: ಮಾನಸ ಗಂಗೋತ್ರಿಯಲ್ಲಿ ಕಸ ತೆರವುಗೊಳಿಸಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಜ್ಯೂಸ್ ಸೆಂಟರ್, ಕಾಫಿ, ಟೀ ಅಂಗಡಿಗಳು ಪ್ಲಾಸ್ಟಿಕ್ ಕವರ್, ನೀರಿನ ಬಾಟಲಿ, ಪ್ಲಾಸ್ಟಿಕ್ ಕಪ್‌ಗಳನ್ನು…

3 hours ago

ಹಾರ್ಮುಜ್ ಹಾದಿಯಲ್ಲಿ ಬಟ್ಟಬಯಲಾದ ನೀತಿ ವೈಫಲ್ಯ

ಭಾರತದ ಹೆಚ್ಚಿನ ಕುಟುಂಬಗಳಿಗೆ ಅಡುಗೆ ಅನಿಲ ಅಥವಾ ಎಲ್‌ಪಿಜಿ ಎಂಬುದು ದಿನಚರಿಯ ಅವಿಭಾಜ್ಯ ಅಂಗವಾಗಿದೆ. ಸಿಲಿಂಡರ್ ಯಾವಾಗ ಖಾಲಿಯಾಗುತ್ತದೆ ಎನ್ನುವುದರತ್ತ…

3 hours ago

ಕಡಂಗಮರೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ

ಗ್ರಾಮದಲ್ಲಿ ಆತಂಕ ಸೃಷ್ಟಿಸಿದ ಆನೆಗಳ ಹಿಂಡು; ಶಾಶ್ವತ ಪರಿಹಾರಕ್ಕೆ ಗ್ರಾಮಸ್ಥರ ಒತ್ತಾಯ ಕಾಂಗೀರ ಬೋಪಣ್ಣ ವಿರಾಜಪೇಟೆ: ಸಮೀಪದ ಅರಣ್ಯ ಪ್ರದೇಶದಿಂದ…

3 hours ago

ಗುಂಡ್ಲುಪೇಟೆ: ಟಿಪ್ಪರ್‌ಗಳಿಗೆ ಬೀಳಬೇಕಿದೆ ಬ್ರೇಕ್

ಒಂದು ವರ್ಷದಲ್ಲಿ ಹತ್ತಕ್ಕೂ ಹೆಚ್ಚು ಅಪಘಾತ; ಗಣಿಗಾರಿಕೆ ಹಗಲು-ರಾತ್ರಿ ನಡೆಯುವುದರಿಂದ ಟಿಪ್ಪರ್‌ಗಳ ಸಂಚಾರ ಹೆಚ್ಚಳ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ…

3 hours ago