ಜಿಲ್ಲೆಗಳು

ಮತದಾನದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಕಾರ್ಯಗಾರ

ಮೈಸೂರು: ycc (ಯಂಗ್ ಕಮ್ಯೂನಿಕೆಟರ್ ಕ್ಲಬ್) ಹಾಗೂ ವಿ-ಲೀಡ್ ಆರ್ಗನೈಜೇಷನ್ ಇವರ ವತಿಯಿಂದ ನಗರದ ಶೇಷಾದ್ರಿಪುರಂ ಪದವಿ ಕಾಲೇಜ್ ರವರ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ  ಮತದಾನದ ಮಹತ್ವವನ್ನು ತಿಳಿಸಲು ವಿಶೇಷ ಕಾರ್ಯಗಾರವನ್ನು ಏರ್ಪಡಿಸಲಾಗಿತ್ತು.

ಕಾರ್ಯಗಾರದ ಮುಖ್ಯ ಭಾಷಣಕಾರರಾಗಿ ಡಾ ಸೀತಾರಾಮ್ ಹಾಗೂ ರಮೇಶ್ ವೆಂಕಟನಮ್ ರವರು ಭಾಗವಹಿಸಿ ವಿದ್ಯಾರ್ಥಿಗಳಿಗೊಂದಿಗೆ ಇಂಟರಾಕ್ಷನ್ ನಡೆಸುವ ಮೂಲಕ ಒಂದು ಮತದ ಮೌಲ್ಯವೆಷ್ಟು, ಎಷ್ಟು ಮುಖ್ಯವಾಗುತ್ತದೆ ಮತ್ತು ಒಂದು ಮತದಿಂದ ಸರ್ಕಾರವನ್ನು ಕಟ್ಟಲುಬಹುದು ಹಾಗೂ ಕೆಡವಲುಬಹುದು. ಪ್ರತಿಯೊಬ್ಬರೂ ಮತದಾನ ಮಾಡುವುದು ಅವರ ಹಕ್ಕು. 2004ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಎ ಆರ್ ಕೃಷ್ಣಮೂರ್ತಿಯವರು ಸಂತೆಮಾರಹಳ್ಳಿ, ಚಾಮರಾಜನಗರದಿಂದ ಸ್ಪರ್ಧಿಸುವಾಗ ಅವರ ವಿರುದ್ಧ ನಿಂತಿದ್ದ ಅಭ್ಯರ್ಥಿಯಿಂದ ಒಂದು ಮತದಿಂದ ಸೋಲನ್ನು ಅನುಭವಿಸುತ್ತಾರೆ. ಆ ಒಂದು ಮತ ಬೇರೆ ಯಾರದ್ದು ಅಲ್ಲ ಅವರ ಕಾರ್ ಡ್ರೈವರ್ ನಾದು. ಡ್ರೈವರ್ ಬೆಳಗ್ಗೆಯಿಂದ ಸರ್ ಮತದಾನ ಮಾಡಲು ಹೋಗಬೇಕು ಎಂದು ಕೇಳಿದಾಗ ಮತದಾನ ಮಾಡುವಂತೆ ಬಿಡು ಎಂದು ಹೇಳಿದರು, ಆದರೆ ಕಾಲ ಮಿಂಚಿ ಹೋಯಿತು. ಈ ಒಂದೇ ಒಂದು ಕಾರಣದಿಂದಾಗಿ ಸೋಲನ್ನು ಎದುರಿಸಬೇಕಾಯಿತು. ಇದನ್ನು ಉದಾಹರಣೆಯಾಗಿ ಹೇಳುವುದರ ಮೂಲಕ ವಿದ್ಯಾರ್ಥಿಗಳಲ್ಲಿ ಒಂದು ಮತದ ಬೆಲೆ ಎಷ್ಟರಮಟ್ಟಿಗೆ ಎಂಬುದನ್ನು ತಿಳಿಸಿದರು.

ಪ್ರತಿಯೊಬ್ಬರೂ 18 ವರ್ಷ ತುಂಬಿದ ನಂತರ ಮತದಾರರ ಚೀಟಿಯನ್ನು ಪಡೆದುಕೊಳ್ಳಬೇಕು ಮತ್ತು ತಪ್ಪದೇ ತಮ್ಮ ಕ್ಷೇತ್ರಕ್ಕೆ ಬರುವ ಪ್ರತಿಯೊಂದು ಚುನಾವಣೆಯಲ್ಲಿ ಕೂಡ ಮತದಾನ ಮಾಡಬೇಕು. ಸರ್ಕಾರವನ್ನು ತಪ್ಪು ಎಂದು ದೋಷಿಸುವುದು ಬಹಳ ಸುಲಭ ಆದರೆ ಆ ದೋಷದಲ್ಲಿ ನಮ್ಮ ಪಾಲು ಕೂಡ ಅಷ್ಟೇ ಇರುತ್ತದೆ. ನಾವು ಪ್ರಜಾಪ್ರಭುತ್ವದಲ್ಲಿ ಇರುವುದು, ನಮ್ಮ ನಾಯಕರನ್ನು ನಾವೇ ಆರಿಸಿಕೊಳ್ಳಲು ಅವಕಾಶ ಇರುವಾಗ ಅದನ್ನು ತಪ್ಪಿ ಹೋಗಲು ಬಿಡಬಾರದು.ವಿದ್ಯಾರ್ಥಿಗಳಿಗೆ ಇನ್ನಷ್ಟು ಪರಿಣಾಮಕಾರಿಯಾಗಿ ಹೇಳಲು ಅವರ ತರಗತಿಯ ಲೀಡರ್ಗಳನ್ನು ವೇದಿಕೆ ಮೇಲೆ ಕರೆಸಿ ಅವರು ಯಾವ ರೀತಿ ಚುನಾವಣೆಯನ್ನು ಎದುರಿಸಿದರು ಹಾಗೂ ಅವರು ಚುನಾವಣೆಯನ್ನು ಗೆದ್ದ ನಂತರ ಯಾವ ರೀತಿ ತರಗತಿಯ ಹಾಗೂ ಹೋಗುಗಳನ್ನು ನೋಡಿಕೊಳ್ಳುತ್ತಿದ್ದಾರೆ ಎಂದು ಕೇಳಿ ಇನ್ನಷ್ಟು ಪರಿಣಾಮಕಾರಿಯಾಗಿ ಪ್ರಭಾವ ಬೀರುವಂತೆ ಮಾಡಿದರು.

ಅಭ್ಯರ್ಥಿಗಳು ಯಾರು ನಮಗೆ ಇಷ್ಟ ಇಲ್ಲ ಎಂದಾಗ ಅದನ್ನು ಕೂಡ ತೋರಿಸಲು ನಮ್ಮ ಸಂವಿಧಾನದಲ್ಲಿ ಅವಕಾಶವಿದೆ. ಅದೇನೆಂದರೆ ನೋಟ, ನೋಟವನ್ನು ಹಾಕುವುದರ ಮೂಲಕ ನಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಬಹುದು. ಆದರೆ ಮತ ಹಾಕದೆ ಇರಬಾರದು ಎಂದು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು.

ಕಾರ್ಯಕ್ರಮದಲ್ಲಿ ವೈ ಸಿ ಸಿ ಮೈಸೂರು ವಿಭಾಗದ ಅಧ್ಯಕ್ಷರು ಹಾಗೂ ಪ್ರಾಧ್ಯಾಪಕರು, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಮೈಸೂರು ವಿಶ್ವವಿದ್ಯಾನಿಯ ಡಾ ಎಂ ಎಸ್ ಸಪ್ನ, ಪ್ರೊ ಸೌಮ್ಯ ಇರಪ್ಪ ಪ್ರಾಂಶುಪಾಲರು, ಶೇಷಾದ್ರಿಪುರಂ ಕಾಲೇಜ್, ಅಧ್ಯಾಪಕರು, ಆಡಳಿತ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

andolanait

Recent Posts

ಕೆನಡಾದಲ್ಲಿ ಕನ್ನಡಿಗನ ಹತ್ಯೆ ಪ್ರಕರಣ: ಆರೋಪಿ ಭಾವಚಿತ್ರ ಬಿಡುಗಡೆ

ನೆಲಮಂಗಲ: ಕೆನಡಾ ದೇಶದಲ್ಲಿ ಕನ್ನಡಿಗನನ್ನು ಗುಂಡಿಟ್ಟು ಹತ್ಯೆ ಮಾಡಿದ ಪ್ರಕರಣದಲ್ಲಿ ಕೊಲೆ ಮಾಡಿರುವ ಆರೋಪಿ ಭಾವಚಿತ್ರವನ್ನು ಕೆನಡಾದ ಟೊರಂಟೊ ಪೊಲೀಸರು…

28 mins ago

ಕೊಡಗು ಜಿಲ್ಲೆಯಲ್ಲಿ ಏಪ್ರಿಲ್.‌8ರಿಂದ ಪಾಸ್‌ಪೋರ್ಟ್‌ ಮೇಳ: ಸಂಸದ ಯದುವೀರ್‌ ಒಡೆಯರ್‌ ಮಾಹಿತಿ

ಕೊಡಗು: ಸಂಸದ ಯದುವೀರ್‌ ಕೃಷ್ಣದತತ ಚಾಮರಾಜ ಒಡೆಯರ್‌ ಅವರ ಪರಿಶ್ರಮದ ಫಲವಾಗಿ ಕೊಡಗಿನಲ್ಲಿ ಪಾಸ್‌ಪೋರ್ಟ್‌ ಮೇಳ ಆಯೋಜಿಸಲು ಬೆಂಗಳೂರು ವಿಭಾಗೀಯ…

43 mins ago

ಇರಾನ್‌ ಸರ್ವೋಚ್ಛ ನಾಯಕನಾಗಿ ಅಯತೊಲ್ಲಾ ಅಲಿ ಖಮೇನಿ ಪುತ್ರ ಮೊಜ್ತಬಾ ಖಮೇನಿ ಆಯ್ಕೆ.?

ಟೆಹರಾನ್:‌ ಇರಾನ್‌ ಸರ್ವೋಚ್ಛ ನಾಯಕರಾಗಿದ್ದ ಅಯತೊಲ್ಲಾ ಅಲಿ ಖಮೇನಿಯವರು ಮಗ ಉತ್ತರಾಧಿಕಾಗಲು ಪ್ರಮುಖ ಆಯ್ಕೆಯಾಗಿ ಹೊರಹೊಮ್ಮಿದ್ದಾರೆ. ಇರಾನ್‌ನ ಮುಂದಿನ ಸರ್ವೋಚ್ಛ…

1 hour ago

ರಾಕಿಂಗ್‌ ಸ್ಟಾರ್‌ ಯಶ್‌ ನಟನೆಯ ಟಾಕ್ಸಿಕ್‌ ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಿಕೆ

ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಬಿಗ್‌ ಬಜೆಟ್‌ ಸಿನಿಮಾ ಟಾಕ್ಸಿಕ್‌ ಇರಾನ್-‌ ಇಸ್ರೇಲ್‌ ಯುದ್ಧದ ಕಾರಣದಿಂದಾಗಿ ಮುಂದೂಡಲ್ಪಟ್ಟಿದೆ. ಮಾರ್ಚ್.‌19ರಂದು ಬಿಡುಗಡೆಯಾಗಬೇಕಿದ್ದ…

1 hour ago

ಬೆಟ್ಟಳ್ಳಿ ಮಾರಮ್ಮ ಜಾತ್ರಾ ವಿಶೇಷ: ಸಾವಿರಾರು ಭಕ್ತರ ಸಮ್ಮುಖದಲ್ಲಿ ನಡೆದ ಕಂಬ ಪ್ರತಿಷ್ಠಾಪನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಸ್ಥಾನದ ಜಾತ್ರಾ ಮಹೋತ್ಸವ…

2 hours ago

ಹನೂರು| ಚಂಗಡಿ ಗ್ರಾಮದ ಸುತ್ತಮುತ್ತ ಪ್ರತಿನಿತ್ಯ ಹುಲಿ ಓಡಾಟ: ಆತಂಕದಲ್ಲಿ ಸ್ಥಳೀಯರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮದ ಚಂಗಡಿ ಗ್ರಾಮದ ಸಮೀಪ ಪ್ರತಿನಿತ್ಯ…

3 hours ago