ಜಿಲ್ಲೆಗಳು

ಮತದಾನದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಕಾರ್ಯಗಾರ

ಮೈಸೂರು: ycc (ಯಂಗ್ ಕಮ್ಯೂನಿಕೆಟರ್ ಕ್ಲಬ್) ಹಾಗೂ ವಿ-ಲೀಡ್ ಆರ್ಗನೈಜೇಷನ್ ಇವರ ವತಿಯಿಂದ ನಗರದ ಶೇಷಾದ್ರಿಪುರಂ ಪದವಿ ಕಾಲೇಜ್ ರವರ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ  ಮತದಾನದ ಮಹತ್ವವನ್ನು ತಿಳಿಸಲು ವಿಶೇಷ ಕಾರ್ಯಗಾರವನ್ನು ಏರ್ಪಡಿಸಲಾಗಿತ್ತು.

ಕಾರ್ಯಗಾರದ ಮುಖ್ಯ ಭಾಷಣಕಾರರಾಗಿ ಡಾ ಸೀತಾರಾಮ್ ಹಾಗೂ ರಮೇಶ್ ವೆಂಕಟನಮ್ ರವರು ಭಾಗವಹಿಸಿ ವಿದ್ಯಾರ್ಥಿಗಳಿಗೊಂದಿಗೆ ಇಂಟರಾಕ್ಷನ್ ನಡೆಸುವ ಮೂಲಕ ಒಂದು ಮತದ ಮೌಲ್ಯವೆಷ್ಟು, ಎಷ್ಟು ಮುಖ್ಯವಾಗುತ್ತದೆ ಮತ್ತು ಒಂದು ಮತದಿಂದ ಸರ್ಕಾರವನ್ನು ಕಟ್ಟಲುಬಹುದು ಹಾಗೂ ಕೆಡವಲುಬಹುದು. ಪ್ರತಿಯೊಬ್ಬರೂ ಮತದಾನ ಮಾಡುವುದು ಅವರ ಹಕ್ಕು. 2004ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಎ ಆರ್ ಕೃಷ್ಣಮೂರ್ತಿಯವರು ಸಂತೆಮಾರಹಳ್ಳಿ, ಚಾಮರಾಜನಗರದಿಂದ ಸ್ಪರ್ಧಿಸುವಾಗ ಅವರ ವಿರುದ್ಧ ನಿಂತಿದ್ದ ಅಭ್ಯರ್ಥಿಯಿಂದ ಒಂದು ಮತದಿಂದ ಸೋಲನ್ನು ಅನುಭವಿಸುತ್ತಾರೆ. ಆ ಒಂದು ಮತ ಬೇರೆ ಯಾರದ್ದು ಅಲ್ಲ ಅವರ ಕಾರ್ ಡ್ರೈವರ್ ನಾದು. ಡ್ರೈವರ್ ಬೆಳಗ್ಗೆಯಿಂದ ಸರ್ ಮತದಾನ ಮಾಡಲು ಹೋಗಬೇಕು ಎಂದು ಕೇಳಿದಾಗ ಮತದಾನ ಮಾಡುವಂತೆ ಬಿಡು ಎಂದು ಹೇಳಿದರು, ಆದರೆ ಕಾಲ ಮಿಂಚಿ ಹೋಯಿತು. ಈ ಒಂದೇ ಒಂದು ಕಾರಣದಿಂದಾಗಿ ಸೋಲನ್ನು ಎದುರಿಸಬೇಕಾಯಿತು. ಇದನ್ನು ಉದಾಹರಣೆಯಾಗಿ ಹೇಳುವುದರ ಮೂಲಕ ವಿದ್ಯಾರ್ಥಿಗಳಲ್ಲಿ ಒಂದು ಮತದ ಬೆಲೆ ಎಷ್ಟರಮಟ್ಟಿಗೆ ಎಂಬುದನ್ನು ತಿಳಿಸಿದರು.

ಪ್ರತಿಯೊಬ್ಬರೂ 18 ವರ್ಷ ತುಂಬಿದ ನಂತರ ಮತದಾರರ ಚೀಟಿಯನ್ನು ಪಡೆದುಕೊಳ್ಳಬೇಕು ಮತ್ತು ತಪ್ಪದೇ ತಮ್ಮ ಕ್ಷೇತ್ರಕ್ಕೆ ಬರುವ ಪ್ರತಿಯೊಂದು ಚುನಾವಣೆಯಲ್ಲಿ ಕೂಡ ಮತದಾನ ಮಾಡಬೇಕು. ಸರ್ಕಾರವನ್ನು ತಪ್ಪು ಎಂದು ದೋಷಿಸುವುದು ಬಹಳ ಸುಲಭ ಆದರೆ ಆ ದೋಷದಲ್ಲಿ ನಮ್ಮ ಪಾಲು ಕೂಡ ಅಷ್ಟೇ ಇರುತ್ತದೆ. ನಾವು ಪ್ರಜಾಪ್ರಭುತ್ವದಲ್ಲಿ ಇರುವುದು, ನಮ್ಮ ನಾಯಕರನ್ನು ನಾವೇ ಆರಿಸಿಕೊಳ್ಳಲು ಅವಕಾಶ ಇರುವಾಗ ಅದನ್ನು ತಪ್ಪಿ ಹೋಗಲು ಬಿಡಬಾರದು.ವಿದ್ಯಾರ್ಥಿಗಳಿಗೆ ಇನ್ನಷ್ಟು ಪರಿಣಾಮಕಾರಿಯಾಗಿ ಹೇಳಲು ಅವರ ತರಗತಿಯ ಲೀಡರ್ಗಳನ್ನು ವೇದಿಕೆ ಮೇಲೆ ಕರೆಸಿ ಅವರು ಯಾವ ರೀತಿ ಚುನಾವಣೆಯನ್ನು ಎದುರಿಸಿದರು ಹಾಗೂ ಅವರು ಚುನಾವಣೆಯನ್ನು ಗೆದ್ದ ನಂತರ ಯಾವ ರೀತಿ ತರಗತಿಯ ಹಾಗೂ ಹೋಗುಗಳನ್ನು ನೋಡಿಕೊಳ್ಳುತ್ತಿದ್ದಾರೆ ಎಂದು ಕೇಳಿ ಇನ್ನಷ್ಟು ಪರಿಣಾಮಕಾರಿಯಾಗಿ ಪ್ರಭಾವ ಬೀರುವಂತೆ ಮಾಡಿದರು.

ಅಭ್ಯರ್ಥಿಗಳು ಯಾರು ನಮಗೆ ಇಷ್ಟ ಇಲ್ಲ ಎಂದಾಗ ಅದನ್ನು ಕೂಡ ತೋರಿಸಲು ನಮ್ಮ ಸಂವಿಧಾನದಲ್ಲಿ ಅವಕಾಶವಿದೆ. ಅದೇನೆಂದರೆ ನೋಟ, ನೋಟವನ್ನು ಹಾಕುವುದರ ಮೂಲಕ ನಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಬಹುದು. ಆದರೆ ಮತ ಹಾಕದೆ ಇರಬಾರದು ಎಂದು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು.

ಕಾರ್ಯಕ್ರಮದಲ್ಲಿ ವೈ ಸಿ ಸಿ ಮೈಸೂರು ವಿಭಾಗದ ಅಧ್ಯಕ್ಷರು ಹಾಗೂ ಪ್ರಾಧ್ಯಾಪಕರು, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಮೈಸೂರು ವಿಶ್ವವಿದ್ಯಾನಿಯ ಡಾ ಎಂ ಎಸ್ ಸಪ್ನ, ಪ್ರೊ ಸೌಮ್ಯ ಇರಪ್ಪ ಪ್ರಾಂಶುಪಾಲರು, ಶೇಷಾದ್ರಿಪುರಂ ಕಾಲೇಜ್, ಅಧ್ಯಾಪಕರು, ಆಡಳಿತ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

9 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

10 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

11 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

12 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

1 day ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago