ಜಿಲ್ಲೆಗಳು

ಮತದಾನ ಶೇ.100 ರಷ್ಟು ಆಗಬೇಕು: ಪ್ರಾದೇಶಿಕ ಆಯುಕ್ತ ಪ್ರಕಾಶ್

ಮೈಸೂರು : ಇತ್ತೀಚಿನ ದಿನಗಳಲ್ಲಿ ಗ್ರಾಮಾಂತರಗಳಿಗೆ ಹೋಲಿಸಿದರೆ ನಗರ ಭಾಗಗಳಲ್ಲಿ ಮತದಾನ ಮಾಡುವವರು ಹಿಂದೆ ಇದ್ದಾರೆ. ಹೀಗಾಗಿ ಮತದಾನ ಶೇ.100 ರಷ್ಟು ಆಗಬೇಕಾಗಿದ್ದು, ಜನರಿಗೆ ಮತದಾನದ ಬಗ್ಗೆ ಅರಿವು ಮೂಡಿಸಿ ಎಂದು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಪ್ರಕಾಶ್ ಅವರು ತಿಳಿಸಿದರು.

ಗುರುವಾರ ನಗರದ ಆಡಳಿತ ತರಬೇತಿ ಸಂಸ್ಥೆಯ ಕಾವೇರಿ ಸಭಾಂಗಣದಲ್ಲಿ ಮತದಾರರಿಗೆ ವ್ಯವಸ್ಥಿತ ಶಿಕ್ಷಣ ಮತ್ತು ಚುನಾವಣೆಯ ಮತದಾನದಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸುವ ಸಲುವಾಗಿ ಕೇಂದ್ರ ಹಾಗೂ ರಾಜ್ಯ ಚುನಾವಣಾ ಆಯೋಗ, ಮೈಸೂರು ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ಮೈಸೂರು ವಿಭಾಗೀಯ ಮಟ್ಟದ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳ ತರಬೇತಿ ಕಾರ್ಯದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮೊದಲು ಮತದಾನ ಮಾಡಲು ಜನ ಭಯಪಡುತ್ತಿದ್ದರು. ಆದರೆ ಇಂದು ಚುನಾವಣಾ ಆಯೋಗ ಅಂತಹ ಭಯದ ವಾತಾವರಣವನ್ನು ದೂರ ಮಾಡಿದೆ. ದಿನದಿಂದ ದಿನಕ್ಕೆ ಹೊಸ ಮತದಾರರು ಹುಟ್ಟಿಕೊಳ್ಳುತ್ತಿದ್ದಾರೆ. ಹೀಗಾಗಿ ಮತದಾನದ ಬಗ್ಗೆ ಹಾಗೂ ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.

ಉತ್ತರ ಭಾರತಕ್ಕೆ ಹೋಲಿಸಿದರೆ ದಕ್ಷಿಣ ಭಾರತದಲ್ಲಿ ಮತದಾರರ ಮೇಲೆ ಹೆಚ್ಚು ಒತ್ತಡ ಇರುತ್ತದೆ. ಹಲವಾರು ಆಸೆ ಆಮೀಷಗಳಿಗೆ ಮತದಾರರು ಬಲಿಯಾಗುವ ಸಾಧ್ಯತೆಗಳಿರುತ್ತದೆ. ಇಂತಹ ಕಾರಣಕ್ಕೆ ಮತದಾರರನ್ನು ಸಂಪರ್ಕಿಸಿ ಅವರಿಗೆ ತಿಳಿ ಹೇಳುವ ಕೆಲಸವಾಗಬೇಕು ಎಂದರು. ರಾಜ್ಯ ಚುನಾವಣೆಯ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ್ ಅವರು ಮಾತನಾಡಿ, ಗ್ರಾಮಾಂತರ ಭಾಗಗಳಲ್ಲಿ ಮತದಾನದ ಬಗ್ಗೆ ಮಾಹಿತಿ ನೀಡಬೇಕು. ಬುಡಕಟ್ಟು ಸಮುದಾಯದ ಜನರಿಗೂ ಮತದಾನದ ಮಹತ್ವ ತಿಳಿಸಿ ಅವರು ಭಾಗವಹಿಸಿಕೊಳ್ಳುಂತೆ ಪ್ರೇರಿಪಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಆಡಳಿತ ತರಬೇತಿ ಸಂಸ್ಥೆಯ ಜಂಟಿ ನಿರ್ದೇಶಕರಾದ ವರ್ಣೀತ್ ನೇಗಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಕೆ.ಎಂ.ಗಾಯಿತ್ರಿ, ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿಗಳಾದ ಎಂ.ಕೃಷ್ಣರಾಜು, ಇಲವಾಲ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಮಹದೇವ ಸೇರಿದಂತೆ ಇತರರು ಹಾಜರಿದ್ದರು.

andolanait

Recent Posts

ಆಂಧ್ರದಲ್ಲಿ ಮತ್ತೆ ಕೋವಿಡ್‌ ಆತಂಕ: ಇಬ್ಬರು ಬಲಿ

ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್‌ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್‌…

9 hours ago

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಎಸ್.ಜಾನಕಿ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…

9 hours ago

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

11 hours ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

11 hours ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

11 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

12 hours ago