ಜಿಲ್ಲೆಗಳು

ಮತದಾನ ಶೇ.100 ರಷ್ಟು ಆಗಬೇಕು: ಪ್ರಾದೇಶಿಕ ಆಯುಕ್ತ ಪ್ರಕಾಶ್

ಮೈಸೂರು : ಇತ್ತೀಚಿನ ದಿನಗಳಲ್ಲಿ ಗ್ರಾಮಾಂತರಗಳಿಗೆ ಹೋಲಿಸಿದರೆ ನಗರ ಭಾಗಗಳಲ್ಲಿ ಮತದಾನ ಮಾಡುವವರು ಹಿಂದೆ ಇದ್ದಾರೆ. ಹೀಗಾಗಿ ಮತದಾನ ಶೇ.100 ರಷ್ಟು ಆಗಬೇಕಾಗಿದ್ದು, ಜನರಿಗೆ ಮತದಾನದ ಬಗ್ಗೆ ಅರಿವು ಮೂಡಿಸಿ ಎಂದು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಪ್ರಕಾಶ್ ಅವರು ತಿಳಿಸಿದರು.

ಗುರುವಾರ ನಗರದ ಆಡಳಿತ ತರಬೇತಿ ಸಂಸ್ಥೆಯ ಕಾವೇರಿ ಸಭಾಂಗಣದಲ್ಲಿ ಮತದಾರರಿಗೆ ವ್ಯವಸ್ಥಿತ ಶಿಕ್ಷಣ ಮತ್ತು ಚುನಾವಣೆಯ ಮತದಾನದಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸುವ ಸಲುವಾಗಿ ಕೇಂದ್ರ ಹಾಗೂ ರಾಜ್ಯ ಚುನಾವಣಾ ಆಯೋಗ, ಮೈಸೂರು ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ಮೈಸೂರು ವಿಭಾಗೀಯ ಮಟ್ಟದ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳ ತರಬೇತಿ ಕಾರ್ಯದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮೊದಲು ಮತದಾನ ಮಾಡಲು ಜನ ಭಯಪಡುತ್ತಿದ್ದರು. ಆದರೆ ಇಂದು ಚುನಾವಣಾ ಆಯೋಗ ಅಂತಹ ಭಯದ ವಾತಾವರಣವನ್ನು ದೂರ ಮಾಡಿದೆ. ದಿನದಿಂದ ದಿನಕ್ಕೆ ಹೊಸ ಮತದಾರರು ಹುಟ್ಟಿಕೊಳ್ಳುತ್ತಿದ್ದಾರೆ. ಹೀಗಾಗಿ ಮತದಾನದ ಬಗ್ಗೆ ಹಾಗೂ ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.

ಉತ್ತರ ಭಾರತಕ್ಕೆ ಹೋಲಿಸಿದರೆ ದಕ್ಷಿಣ ಭಾರತದಲ್ಲಿ ಮತದಾರರ ಮೇಲೆ ಹೆಚ್ಚು ಒತ್ತಡ ಇರುತ್ತದೆ. ಹಲವಾರು ಆಸೆ ಆಮೀಷಗಳಿಗೆ ಮತದಾರರು ಬಲಿಯಾಗುವ ಸಾಧ್ಯತೆಗಳಿರುತ್ತದೆ. ಇಂತಹ ಕಾರಣಕ್ಕೆ ಮತದಾರರನ್ನು ಸಂಪರ್ಕಿಸಿ ಅವರಿಗೆ ತಿಳಿ ಹೇಳುವ ಕೆಲಸವಾಗಬೇಕು ಎಂದರು. ರಾಜ್ಯ ಚುನಾವಣೆಯ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ್ ಅವರು ಮಾತನಾಡಿ, ಗ್ರಾಮಾಂತರ ಭಾಗಗಳಲ್ಲಿ ಮತದಾನದ ಬಗ್ಗೆ ಮಾಹಿತಿ ನೀಡಬೇಕು. ಬುಡಕಟ್ಟು ಸಮುದಾಯದ ಜನರಿಗೂ ಮತದಾನದ ಮಹತ್ವ ತಿಳಿಸಿ ಅವರು ಭಾಗವಹಿಸಿಕೊಳ್ಳುಂತೆ ಪ್ರೇರಿಪಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಆಡಳಿತ ತರಬೇತಿ ಸಂಸ್ಥೆಯ ಜಂಟಿ ನಿರ್ದೇಶಕರಾದ ವರ್ಣೀತ್ ನೇಗಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಕೆ.ಎಂ.ಗಾಯಿತ್ರಿ, ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿಗಳಾದ ಎಂ.ಕೃಷ್ಣರಾಜು, ಇಲವಾಲ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಮಹದೇವ ಸೇರಿದಂತೆ ಇತರರು ಹಾಜರಿದ್ದರು.

andolanait

Recent Posts

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ ಆರೋಪ ; ಇಬ್ಬರು ಶಿಕ್ಷಕರು ಅಮಾನತ್ತು

ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…

5 hours ago

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

5 hours ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

6 hours ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

6 hours ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

7 hours ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

7 hours ago