ಜಿಲ್ಲೆಗಳು

ಬೇಕೆಂದಾಗ ಕಟ್ಟಲು, ಬೇಡ ಎಂದಾಗ ಒಡೆಯಲು ಬಸ್ ತಂಗುದಾಣ ಖಾಸಗಿ ಸ್ವತ್ತಲ್ಲ : ಕೆ.ವಿ.ಮಲ್ಲೇಶ್ ಆಕ್ರೋಶ

ಮೈಸೂರು: ಸ್ವಪಕ್ಷೀಯರಾದ ಶಾಸಕರು ಹಾಗೂ ಸಂಸದರು ಸ್ವಪ್ರತಿಷ್ಠೆ, ಧರ್ಮ ರಾಜಕಾರಣ ಬಿಟ್ಟು ಅಭಿವೃದ್ಧಿ ರಾಜಕಾರಣ ಮಾಡಲಿ. ಬಸ್ ತಂಗುದಾಣವನ್ನು ಬೇಕೆಂದಾಗ ಕಟ್ಟಲು, ಬೇಡ ಎಂದಾಗ ಒಡೆಯಲು ಇದು ಅವರ ಖಾಸಗಿ ಸ್ವತ್ತಲ್ಲ ಎಂದು ನಗರಪಾಲಿಕೆ ಮಾಜಿ ಸದಸ್ಯ ಕೆ.ವಿ.ಮಲ್ಲೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಟ್ಟಲು, ಒಡೆಯಲು ಹಣ ವ್ಯಯವಾಗುವುದು ಸಾರ್ವಜನಿಕರದ್ದು ಎಂಬ ಅರಿವು ಇಲ್ಲದಂತೆ ವರ್ತಿಸುತ್ತಿದಾರೆ. ಪ್ಲಾನ್ ಎಲ್ಲವನ್ನೂ ಸಿದ್ಧಪಡಿಸಿಕೊಂಡು ಕಟ್ಟಿರುವ ಗುಂಬಜ್ ಮಾದರಿ ಬಸ್ ತಂಗುದಾಣವನ್ನು ಏಕಾಏಕಿ ಈಗ ಒಡೆಯುತ್ತೇವೆ ಎಂದು ಗಡುವು ನೀಡಿರುವ ಸಂಸದರು ಒಂದೆಡೆಂದರೆ ಅದು ತಪ್ಪಿದ್ದರೆ ತೆರವಿಗೆ ಸಿದ್ಧ ಎಂದು ಶಾಸಕರು ಹೇಳುವ ಮೂಲಕ ಕಟ್ಟೋದಕ್ಕೆ ಒಬ್ಬರು, ಕೆಡವೋದಕ್ಕೆ ಮತ್ತೊಬ್ಬರು ಎಂದು ಸಾರ್ವಜನಿಕರ ಆಸ್ತಿಂನ್ನು ತಮ್ಮ ಮತ ರಾಜಕೀಯಕ್ಕೆ ಬಳಸಿಕೊಳ್ಳುತ್ತಿರುವುದು ಕ್ಷೇತ್ರದ ಮತದಾರರಿಗೆ ಮಾಡುತ್ತಿರುವ ವಂಚನೆಂಗಿದೆ ಎಂದು ಹೇಳಿದ್ದಾರೆ.

ಕೆ.ಆರ್.ಕ್ಷೇತ್ರ ಸೇರಿದಂತೆ ನಗರದ ಪ್ರಮುಖ ಬಸ್ ತಂಗುದಾಣಗಳಲ್ಲಿ ಸಂಸದರ ಹಾಗೂ ಶಾಸಕರ ದೊಡ್ಡ ದೊಡ್ಡ ಭಾವಚಿತ್ರ ಇರುವ ವಿನ್ಯಾಸ ಮಾಡಲಾಗಿದೆ. ಸಾರ್ವಜನಿಕರ ಹಣದಲ್ಲಿ ಇರುವ ಪ್ರಚಾರ ತೆಗೆದುಕೊಳ್ಳುವುದು ಎಷ್ಟು ಸರಿ? ತಮ್ಮ ಸ್ವಂತ ಹಣದಲ್ಲಿ ಬಸ್ ತಂಗುದಾಣ ಕಟ್ಟಿಸಿದ ಎಷ್ಟೋ ಮಹನೀಯರು, ಸಂಘ ಸಂಸ್ಥೆಗಳು ತಮ್ಮ ಹೆಸರನ್ನೂ ಹಾಕಿಸಲು ಸಂಕೋಚ ಪಡುತ್ತಾರೆ. ಆದರೆ, ಒಂದು ರೂಪಾಯಿಯನ್ನೂ ಬಸ್ ತಂಗುದಾಣಕ್ಕೆ ಕಾಣಿಕೆ ನೀಡದೇ ಇರುವ ಇವರು ಬಸ್ ನಿಲ್ದಾಣದ ತುಂಬ ತಮ್ಮ ಹಾಗೂ ಪಕ್ಷದ ನಾಂಕರ ದೊಡ್ಡ ದೊಡ್ಡ ಭಾವಚಿತ್ರ ಹಾಕಿ ಪ್ರಚಾರ ಪಡೆಂತ್ತಾರೆ ಎಂದರೆ, ಇವರಿಗೆ ಯಾವ ನೈತಿಕತೆ ಇದೆ ಎಂದಿದ್ದಾರೆ.

ಜನಪ್ರತಿನಿಧಿಗಳ ಕೆಲಸ ಸಾರ್ವಜನಿಕ ಸೇವೆ ಎಂಬುದನ್ನು ಮರೆತಿರುವ ಇವರು ಪ್ರತಿಷ್ಠೆ, ಧರ್ಮದ ಅಫೀಮನ್ನು ಯಾವ ಸಮೂಹದ ತಲೆಗೇರಿಸಿ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಕೆ.ಆರ್.ಕ್ಷೇತದಲ್ಲಿನ ಕಸ ವಿಲೇವಾರಿ ಘಟಕದಿಂದ ಸುತ್ತಲಿನ ನಿವಾಸಿಗಳಿಗೆ ಆರೋಗ್ಯ ಸಮಸ್ಯೆ ಎದುರಾಗುತ್ತಿದೆ ಎಂದು ಮಾಜಿ ಆಗಿದ್ದ ಇದೇ ಶಾಸಕರು ಟೆಂಟ್‌ಹಾಕಿ ಹಗಲು ರಾತ್ರಿ ಪ್ರತಿಭಟನೆ ನಡೆಸಿದ್ದರು. ಶಾಸಕರಾಗಿ ಗೆದ್ದ ಬಳಿಕ ತಮ್ಮದೇ ಸರ್ಕಾರ ಕೇಂದ್ರ ಹಾಗೂ ರಾಜ್ಯದಲ್ಲಿ ಇರುವಾಗ ಏನು ಮಾಡುತ್ತಿದ್ದಾರೆ. ಇನ್ನೆಷ್ಟು ವರ್ಷ ಬೇಕು ಇವರಿಗೆ? ಇನ್ನಾದರೂ ಮಾತು ನಿಲ್ಲಿಸಿ ಕೆಲಸ ಮಾಡಿ ಎಂದು ಕೆ.ವಿ.ಮಲ್ಲೇಶ್ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.

andolanait

Recent Posts

ಮೇ-1ರಿಂದ ಮೈಸೂರು-ಹೈದರಾಬಾದ್‌ಗೆ ಮತ್ತೊಂದು ವಿಮಾನ ಸಂಚಾರ: ಯದುವೀರ್

ಮೈಸೂರು : ಸಾಂಸ್ಕ ತಿಕ ನಗರಿಯ ಜನತೆಯ ಅನುಕೂಲಕ್ಕಾಗಿ ಮೈಸೂರಿನಿಂದ ಮುತ್ತಿನ ನಗರಿ ಹೈದರಾಬಾದ್‌ಗೆ ಮತ್ತೊಂದು ವಿಮಾನ ಸಂಚಾರ ಅತಿ…

2 hours ago

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಗೆ ಸೋಲು

ನವದೆಹಲಿ : ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆ (Women’s Reservation Bill) ಭಾರೀ…

2 hours ago

ಹೊರ್ಮುಜ್ ಜಲಸಂಧಿ ಹಡಗುಗಳ ಸಂಚಾರಕ್ಕೆ ಮುಕ್ತ ; ಇರಾನ್‌ ಮಹತ್ವದ ಘೋಷಣೆ,

ಟೆಹ್ರಾರ್‌ : ಇರಾನ್ ಹೊರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಸಂಚಾರಕ್ಕೆ ಪೂರ್ಣ ಮುಕ್ತಿ ನೀಡಿದೆ ಎಂದು ಮಹತ್ವದ ಘೋಷಣೆ ಮಾಡಿದೆ.…

2 hours ago

ಹನೂರು | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೃಹತ್‌ ಪ್ರತಿಭಟನೆ

ಹನೂರು : ಕುಡಿಯುವ ನೀರು, ಇ-ಸ್ವತ್ತು, ಪೋಡಿ ಹಾಗೂ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ…

3 hours ago

ಮೈಸೂರಿನ ರೈಲ್ವೆ ಗೂಡ್ಸ್‌ ಶೆಡ್‌ ಸ್ಥಾಳಾಂತಕ್ಕೆ ಹುನ್ನಾರ : ಎಂ.ಲಕ್ಷ್ಮಣ್‌ ಆರೋಪ

ಮೈಸೂರು : ನಗರದಲ್ಲಿರುವ ರೈಲ್ವೇ ಗೂಡ್ಸ್‌ ಶೆಡನ್ನು ಪಾಂಡವಪುರಕ್ಕೆ ಸ್ಥಳಾಂತರಿಸಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿ.ಸೋಮಣ್ಣ ಅವರು ಹುನ್ನಾರ…

3 hours ago

ಮಹಿಳಾ ಮೀಸಲಾತಿ ಕಾಯ್ದೆ ಏ.16 ರಿಂದಲೇ ಜಾರಿ

ಕಾನೂನು ಸಚಿವಾಲಯದಿಂದ ಅಧಿಸೂಚನೆ ಪ್ರಕಟ ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಸ್ಥಾನ ಒದಗಿಸುವ ಮಹಿಳಾ ಮೀಸಲಾತಿ…

3 hours ago