ಜಿಲ್ಲೆಗಳು

ಬೇಕೆಂದಾಗ ಕಟ್ಟಲು, ಬೇಡ ಎಂದಾಗ ಒಡೆಯಲು ಬಸ್ ತಂಗುದಾಣ ಖಾಸಗಿ ಸ್ವತ್ತಲ್ಲ : ಕೆ.ವಿ.ಮಲ್ಲೇಶ್ ಆಕ್ರೋಶ

ಮೈಸೂರು: ಸ್ವಪಕ್ಷೀಯರಾದ ಶಾಸಕರು ಹಾಗೂ ಸಂಸದರು ಸ್ವಪ್ರತಿಷ್ಠೆ, ಧರ್ಮ ರಾಜಕಾರಣ ಬಿಟ್ಟು ಅಭಿವೃದ್ಧಿ ರಾಜಕಾರಣ ಮಾಡಲಿ. ಬಸ್ ತಂಗುದಾಣವನ್ನು ಬೇಕೆಂದಾಗ ಕಟ್ಟಲು, ಬೇಡ ಎಂದಾಗ ಒಡೆಯಲು ಇದು ಅವರ ಖಾಸಗಿ ಸ್ವತ್ತಲ್ಲ ಎಂದು ನಗರಪಾಲಿಕೆ ಮಾಜಿ ಸದಸ್ಯ ಕೆ.ವಿ.ಮಲ್ಲೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಟ್ಟಲು, ಒಡೆಯಲು ಹಣ ವ್ಯಯವಾಗುವುದು ಸಾರ್ವಜನಿಕರದ್ದು ಎಂಬ ಅರಿವು ಇಲ್ಲದಂತೆ ವರ್ತಿಸುತ್ತಿದಾರೆ. ಪ್ಲಾನ್ ಎಲ್ಲವನ್ನೂ ಸಿದ್ಧಪಡಿಸಿಕೊಂಡು ಕಟ್ಟಿರುವ ಗುಂಬಜ್ ಮಾದರಿ ಬಸ್ ತಂಗುದಾಣವನ್ನು ಏಕಾಏಕಿ ಈಗ ಒಡೆಯುತ್ತೇವೆ ಎಂದು ಗಡುವು ನೀಡಿರುವ ಸಂಸದರು ಒಂದೆಡೆಂದರೆ ಅದು ತಪ್ಪಿದ್ದರೆ ತೆರವಿಗೆ ಸಿದ್ಧ ಎಂದು ಶಾಸಕರು ಹೇಳುವ ಮೂಲಕ ಕಟ್ಟೋದಕ್ಕೆ ಒಬ್ಬರು, ಕೆಡವೋದಕ್ಕೆ ಮತ್ತೊಬ್ಬರು ಎಂದು ಸಾರ್ವಜನಿಕರ ಆಸ್ತಿಂನ್ನು ತಮ್ಮ ಮತ ರಾಜಕೀಯಕ್ಕೆ ಬಳಸಿಕೊಳ್ಳುತ್ತಿರುವುದು ಕ್ಷೇತ್ರದ ಮತದಾರರಿಗೆ ಮಾಡುತ್ತಿರುವ ವಂಚನೆಂಗಿದೆ ಎಂದು ಹೇಳಿದ್ದಾರೆ.

ಕೆ.ಆರ್.ಕ್ಷೇತ್ರ ಸೇರಿದಂತೆ ನಗರದ ಪ್ರಮುಖ ಬಸ್ ತಂಗುದಾಣಗಳಲ್ಲಿ ಸಂಸದರ ಹಾಗೂ ಶಾಸಕರ ದೊಡ್ಡ ದೊಡ್ಡ ಭಾವಚಿತ್ರ ಇರುವ ವಿನ್ಯಾಸ ಮಾಡಲಾಗಿದೆ. ಸಾರ್ವಜನಿಕರ ಹಣದಲ್ಲಿ ಇರುವ ಪ್ರಚಾರ ತೆಗೆದುಕೊಳ್ಳುವುದು ಎಷ್ಟು ಸರಿ? ತಮ್ಮ ಸ್ವಂತ ಹಣದಲ್ಲಿ ಬಸ್ ತಂಗುದಾಣ ಕಟ್ಟಿಸಿದ ಎಷ್ಟೋ ಮಹನೀಯರು, ಸಂಘ ಸಂಸ್ಥೆಗಳು ತಮ್ಮ ಹೆಸರನ್ನೂ ಹಾಕಿಸಲು ಸಂಕೋಚ ಪಡುತ್ತಾರೆ. ಆದರೆ, ಒಂದು ರೂಪಾಯಿಯನ್ನೂ ಬಸ್ ತಂಗುದಾಣಕ್ಕೆ ಕಾಣಿಕೆ ನೀಡದೇ ಇರುವ ಇವರು ಬಸ್ ನಿಲ್ದಾಣದ ತುಂಬ ತಮ್ಮ ಹಾಗೂ ಪಕ್ಷದ ನಾಂಕರ ದೊಡ್ಡ ದೊಡ್ಡ ಭಾವಚಿತ್ರ ಹಾಕಿ ಪ್ರಚಾರ ಪಡೆಂತ್ತಾರೆ ಎಂದರೆ, ಇವರಿಗೆ ಯಾವ ನೈತಿಕತೆ ಇದೆ ಎಂದಿದ್ದಾರೆ.

ಜನಪ್ರತಿನಿಧಿಗಳ ಕೆಲಸ ಸಾರ್ವಜನಿಕ ಸೇವೆ ಎಂಬುದನ್ನು ಮರೆತಿರುವ ಇವರು ಪ್ರತಿಷ್ಠೆ, ಧರ್ಮದ ಅಫೀಮನ್ನು ಯಾವ ಸಮೂಹದ ತಲೆಗೇರಿಸಿ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಕೆ.ಆರ್.ಕ್ಷೇತದಲ್ಲಿನ ಕಸ ವಿಲೇವಾರಿ ಘಟಕದಿಂದ ಸುತ್ತಲಿನ ನಿವಾಸಿಗಳಿಗೆ ಆರೋಗ್ಯ ಸಮಸ್ಯೆ ಎದುರಾಗುತ್ತಿದೆ ಎಂದು ಮಾಜಿ ಆಗಿದ್ದ ಇದೇ ಶಾಸಕರು ಟೆಂಟ್‌ಹಾಕಿ ಹಗಲು ರಾತ್ರಿ ಪ್ರತಿಭಟನೆ ನಡೆಸಿದ್ದರು. ಶಾಸಕರಾಗಿ ಗೆದ್ದ ಬಳಿಕ ತಮ್ಮದೇ ಸರ್ಕಾರ ಕೇಂದ್ರ ಹಾಗೂ ರಾಜ್ಯದಲ್ಲಿ ಇರುವಾಗ ಏನು ಮಾಡುತ್ತಿದ್ದಾರೆ. ಇನ್ನೆಷ್ಟು ವರ್ಷ ಬೇಕು ಇವರಿಗೆ? ಇನ್ನಾದರೂ ಮಾತು ನಿಲ್ಲಿಸಿ ಕೆಲಸ ಮಾಡಿ ಎಂದು ಕೆ.ವಿ.ಮಲ್ಲೇಶ್ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.

andolanait

Recent Posts

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

23 mins ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

28 mins ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

37 mins ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

1 hour ago

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…

2 hours ago

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 hours ago