ಜಿಲ್ಲೆಗಳು

ಬೇಕೆಂದಾಗ ಕಟ್ಟಲು, ಬೇಡ ಎಂದಾಗ ಒಡೆಯಲು ಬಸ್ ತಂಗುದಾಣ ಖಾಸಗಿ ಸ್ವತ್ತಲ್ಲ : ಕೆ.ವಿ.ಮಲ್ಲೇಶ್ ಆಕ್ರೋಶ

ಮೈಸೂರು: ಸ್ವಪಕ್ಷೀಯರಾದ ಶಾಸಕರು ಹಾಗೂ ಸಂಸದರು ಸ್ವಪ್ರತಿಷ್ಠೆ, ಧರ್ಮ ರಾಜಕಾರಣ ಬಿಟ್ಟು ಅಭಿವೃದ್ಧಿ ರಾಜಕಾರಣ ಮಾಡಲಿ. ಬಸ್ ತಂಗುದಾಣವನ್ನು ಬೇಕೆಂದಾಗ ಕಟ್ಟಲು, ಬೇಡ ಎಂದಾಗ ಒಡೆಯಲು ಇದು ಅವರ ಖಾಸಗಿ ಸ್ವತ್ತಲ್ಲ ಎಂದು ನಗರಪಾಲಿಕೆ ಮಾಜಿ ಸದಸ್ಯ ಕೆ.ವಿ.ಮಲ್ಲೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಟ್ಟಲು, ಒಡೆಯಲು ಹಣ ವ್ಯಯವಾಗುವುದು ಸಾರ್ವಜನಿಕರದ್ದು ಎಂಬ ಅರಿವು ಇಲ್ಲದಂತೆ ವರ್ತಿಸುತ್ತಿದಾರೆ. ಪ್ಲಾನ್ ಎಲ್ಲವನ್ನೂ ಸಿದ್ಧಪಡಿಸಿಕೊಂಡು ಕಟ್ಟಿರುವ ಗುಂಬಜ್ ಮಾದರಿ ಬಸ್ ತಂಗುದಾಣವನ್ನು ಏಕಾಏಕಿ ಈಗ ಒಡೆಯುತ್ತೇವೆ ಎಂದು ಗಡುವು ನೀಡಿರುವ ಸಂಸದರು ಒಂದೆಡೆಂದರೆ ಅದು ತಪ್ಪಿದ್ದರೆ ತೆರವಿಗೆ ಸಿದ್ಧ ಎಂದು ಶಾಸಕರು ಹೇಳುವ ಮೂಲಕ ಕಟ್ಟೋದಕ್ಕೆ ಒಬ್ಬರು, ಕೆಡವೋದಕ್ಕೆ ಮತ್ತೊಬ್ಬರು ಎಂದು ಸಾರ್ವಜನಿಕರ ಆಸ್ತಿಂನ್ನು ತಮ್ಮ ಮತ ರಾಜಕೀಯಕ್ಕೆ ಬಳಸಿಕೊಳ್ಳುತ್ತಿರುವುದು ಕ್ಷೇತ್ರದ ಮತದಾರರಿಗೆ ಮಾಡುತ್ತಿರುವ ವಂಚನೆಂಗಿದೆ ಎಂದು ಹೇಳಿದ್ದಾರೆ.

ಕೆ.ಆರ್.ಕ್ಷೇತ್ರ ಸೇರಿದಂತೆ ನಗರದ ಪ್ರಮುಖ ಬಸ್ ತಂಗುದಾಣಗಳಲ್ಲಿ ಸಂಸದರ ಹಾಗೂ ಶಾಸಕರ ದೊಡ್ಡ ದೊಡ್ಡ ಭಾವಚಿತ್ರ ಇರುವ ವಿನ್ಯಾಸ ಮಾಡಲಾಗಿದೆ. ಸಾರ್ವಜನಿಕರ ಹಣದಲ್ಲಿ ಇರುವ ಪ್ರಚಾರ ತೆಗೆದುಕೊಳ್ಳುವುದು ಎಷ್ಟು ಸರಿ? ತಮ್ಮ ಸ್ವಂತ ಹಣದಲ್ಲಿ ಬಸ್ ತಂಗುದಾಣ ಕಟ್ಟಿಸಿದ ಎಷ್ಟೋ ಮಹನೀಯರು, ಸಂಘ ಸಂಸ್ಥೆಗಳು ತಮ್ಮ ಹೆಸರನ್ನೂ ಹಾಕಿಸಲು ಸಂಕೋಚ ಪಡುತ್ತಾರೆ. ಆದರೆ, ಒಂದು ರೂಪಾಯಿಯನ್ನೂ ಬಸ್ ತಂಗುದಾಣಕ್ಕೆ ಕಾಣಿಕೆ ನೀಡದೇ ಇರುವ ಇವರು ಬಸ್ ನಿಲ್ದಾಣದ ತುಂಬ ತಮ್ಮ ಹಾಗೂ ಪಕ್ಷದ ನಾಂಕರ ದೊಡ್ಡ ದೊಡ್ಡ ಭಾವಚಿತ್ರ ಹಾಕಿ ಪ್ರಚಾರ ಪಡೆಂತ್ತಾರೆ ಎಂದರೆ, ಇವರಿಗೆ ಯಾವ ನೈತಿಕತೆ ಇದೆ ಎಂದಿದ್ದಾರೆ.

ಜನಪ್ರತಿನಿಧಿಗಳ ಕೆಲಸ ಸಾರ್ವಜನಿಕ ಸೇವೆ ಎಂಬುದನ್ನು ಮರೆತಿರುವ ಇವರು ಪ್ರತಿಷ್ಠೆ, ಧರ್ಮದ ಅಫೀಮನ್ನು ಯಾವ ಸಮೂಹದ ತಲೆಗೇರಿಸಿ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಕೆ.ಆರ್.ಕ್ಷೇತದಲ್ಲಿನ ಕಸ ವಿಲೇವಾರಿ ಘಟಕದಿಂದ ಸುತ್ತಲಿನ ನಿವಾಸಿಗಳಿಗೆ ಆರೋಗ್ಯ ಸಮಸ್ಯೆ ಎದುರಾಗುತ್ತಿದೆ ಎಂದು ಮಾಜಿ ಆಗಿದ್ದ ಇದೇ ಶಾಸಕರು ಟೆಂಟ್‌ಹಾಕಿ ಹಗಲು ರಾತ್ರಿ ಪ್ರತಿಭಟನೆ ನಡೆಸಿದ್ದರು. ಶಾಸಕರಾಗಿ ಗೆದ್ದ ಬಳಿಕ ತಮ್ಮದೇ ಸರ್ಕಾರ ಕೇಂದ್ರ ಹಾಗೂ ರಾಜ್ಯದಲ್ಲಿ ಇರುವಾಗ ಏನು ಮಾಡುತ್ತಿದ್ದಾರೆ. ಇನ್ನೆಷ್ಟು ವರ್ಷ ಬೇಕು ಇವರಿಗೆ? ಇನ್ನಾದರೂ ಮಾತು ನಿಲ್ಲಿಸಿ ಕೆಲಸ ಮಾಡಿ ಎಂದು ಕೆ.ವಿ.ಮಲ್ಲೇಶ್ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.

andolanait

Recent Posts

SIR ನೋಟಿಸ್: ವಿಚಾರಣೆಗೆ ತೆರಳುವಾಗ ಈ ದಾಖಲೆಗಳು ನಿಮ್ಮ ಬಳಿ ಇರಲಿ

ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…

34 mins ago

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

6 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

6 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

6 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

16 hours ago