ಜಿಲ್ಲೆಗಳು

ಬೇಕೆಂದಾಗ ಕಟ್ಟಲು, ಬೇಡ ಎಂದಾಗ ಒಡೆಯಲು ಬಸ್ ತಂಗುದಾಣ ಖಾಸಗಿ ಸ್ವತ್ತಲ್ಲ : ಕೆ.ವಿ.ಮಲ್ಲೇಶ್ ಆಕ್ರೋಶ

ಮೈಸೂರು: ಸ್ವಪಕ್ಷೀಯರಾದ ಶಾಸಕರು ಹಾಗೂ ಸಂಸದರು ಸ್ವಪ್ರತಿಷ್ಠೆ, ಧರ್ಮ ರಾಜಕಾರಣ ಬಿಟ್ಟು ಅಭಿವೃದ್ಧಿ ರಾಜಕಾರಣ ಮಾಡಲಿ. ಬಸ್ ತಂಗುದಾಣವನ್ನು ಬೇಕೆಂದಾಗ ಕಟ್ಟಲು, ಬೇಡ ಎಂದಾಗ ಒಡೆಯಲು ಇದು ಅವರ ಖಾಸಗಿ ಸ್ವತ್ತಲ್ಲ ಎಂದು ನಗರಪಾಲಿಕೆ ಮಾಜಿ ಸದಸ್ಯ ಕೆ.ವಿ.ಮಲ್ಲೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಟ್ಟಲು, ಒಡೆಯಲು ಹಣ ವ್ಯಯವಾಗುವುದು ಸಾರ್ವಜನಿಕರದ್ದು ಎಂಬ ಅರಿವು ಇಲ್ಲದಂತೆ ವರ್ತಿಸುತ್ತಿದಾರೆ. ಪ್ಲಾನ್ ಎಲ್ಲವನ್ನೂ ಸಿದ್ಧಪಡಿಸಿಕೊಂಡು ಕಟ್ಟಿರುವ ಗುಂಬಜ್ ಮಾದರಿ ಬಸ್ ತಂಗುದಾಣವನ್ನು ಏಕಾಏಕಿ ಈಗ ಒಡೆಯುತ್ತೇವೆ ಎಂದು ಗಡುವು ನೀಡಿರುವ ಸಂಸದರು ಒಂದೆಡೆಂದರೆ ಅದು ತಪ್ಪಿದ್ದರೆ ತೆರವಿಗೆ ಸಿದ್ಧ ಎಂದು ಶಾಸಕರು ಹೇಳುವ ಮೂಲಕ ಕಟ್ಟೋದಕ್ಕೆ ಒಬ್ಬರು, ಕೆಡವೋದಕ್ಕೆ ಮತ್ತೊಬ್ಬರು ಎಂದು ಸಾರ್ವಜನಿಕರ ಆಸ್ತಿಂನ್ನು ತಮ್ಮ ಮತ ರಾಜಕೀಯಕ್ಕೆ ಬಳಸಿಕೊಳ್ಳುತ್ತಿರುವುದು ಕ್ಷೇತ್ರದ ಮತದಾರರಿಗೆ ಮಾಡುತ್ತಿರುವ ವಂಚನೆಂಗಿದೆ ಎಂದು ಹೇಳಿದ್ದಾರೆ.

ಕೆ.ಆರ್.ಕ್ಷೇತ್ರ ಸೇರಿದಂತೆ ನಗರದ ಪ್ರಮುಖ ಬಸ್ ತಂಗುದಾಣಗಳಲ್ಲಿ ಸಂಸದರ ಹಾಗೂ ಶಾಸಕರ ದೊಡ್ಡ ದೊಡ್ಡ ಭಾವಚಿತ್ರ ಇರುವ ವಿನ್ಯಾಸ ಮಾಡಲಾಗಿದೆ. ಸಾರ್ವಜನಿಕರ ಹಣದಲ್ಲಿ ಇರುವ ಪ್ರಚಾರ ತೆಗೆದುಕೊಳ್ಳುವುದು ಎಷ್ಟು ಸರಿ? ತಮ್ಮ ಸ್ವಂತ ಹಣದಲ್ಲಿ ಬಸ್ ತಂಗುದಾಣ ಕಟ್ಟಿಸಿದ ಎಷ್ಟೋ ಮಹನೀಯರು, ಸಂಘ ಸಂಸ್ಥೆಗಳು ತಮ್ಮ ಹೆಸರನ್ನೂ ಹಾಕಿಸಲು ಸಂಕೋಚ ಪಡುತ್ತಾರೆ. ಆದರೆ, ಒಂದು ರೂಪಾಯಿಯನ್ನೂ ಬಸ್ ತಂಗುದಾಣಕ್ಕೆ ಕಾಣಿಕೆ ನೀಡದೇ ಇರುವ ಇವರು ಬಸ್ ನಿಲ್ದಾಣದ ತುಂಬ ತಮ್ಮ ಹಾಗೂ ಪಕ್ಷದ ನಾಂಕರ ದೊಡ್ಡ ದೊಡ್ಡ ಭಾವಚಿತ್ರ ಹಾಕಿ ಪ್ರಚಾರ ಪಡೆಂತ್ತಾರೆ ಎಂದರೆ, ಇವರಿಗೆ ಯಾವ ನೈತಿಕತೆ ಇದೆ ಎಂದಿದ್ದಾರೆ.

ಜನಪ್ರತಿನಿಧಿಗಳ ಕೆಲಸ ಸಾರ್ವಜನಿಕ ಸೇವೆ ಎಂಬುದನ್ನು ಮರೆತಿರುವ ಇವರು ಪ್ರತಿಷ್ಠೆ, ಧರ್ಮದ ಅಫೀಮನ್ನು ಯಾವ ಸಮೂಹದ ತಲೆಗೇರಿಸಿ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ. ಕೆ.ಆರ್.ಕ್ಷೇತದಲ್ಲಿನ ಕಸ ವಿಲೇವಾರಿ ಘಟಕದಿಂದ ಸುತ್ತಲಿನ ನಿವಾಸಿಗಳಿಗೆ ಆರೋಗ್ಯ ಸಮಸ್ಯೆ ಎದುರಾಗುತ್ತಿದೆ ಎಂದು ಮಾಜಿ ಆಗಿದ್ದ ಇದೇ ಶಾಸಕರು ಟೆಂಟ್‌ಹಾಕಿ ಹಗಲು ರಾತ್ರಿ ಪ್ರತಿಭಟನೆ ನಡೆಸಿದ್ದರು. ಶಾಸಕರಾಗಿ ಗೆದ್ದ ಬಳಿಕ ತಮ್ಮದೇ ಸರ್ಕಾರ ಕೇಂದ್ರ ಹಾಗೂ ರಾಜ್ಯದಲ್ಲಿ ಇರುವಾಗ ಏನು ಮಾಡುತ್ತಿದ್ದಾರೆ. ಇನ್ನೆಷ್ಟು ವರ್ಷ ಬೇಕು ಇವರಿಗೆ? ಇನ್ನಾದರೂ ಮಾತು ನಿಲ್ಲಿಸಿ ಕೆಲಸ ಮಾಡಿ ಎಂದು ಕೆ.ವಿ.ಮಲ್ಲೇಶ್ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.

andolanait

Recent Posts

ಕಾಕ್ರೋಚ್‌ ಪ್ರತಿಭಟನೆ ; ವಿದ್ಯಾರ್ಥಿಗಳ ರಕ್ಷಣೆಗೆ ಪೊಲೀಸ್‌ ವ್ಯಾನ್‌ ತಡೆದ ಜೇನ್‌-ಝಿ ಕಿಡ್‌

ಮುಂಬೈ : ನೀಟ್‌ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…

8 hours ago

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

21 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

21 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

21 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

21 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

21 hours ago