ಜಿಲ್ಲೆಗಳು

ಕಸ ಬಿಸಾಡುತ್ತಿದ್ದವರಿಗೆ ರಂಗೋಲಿ ಅಲಂಕಾರದ ಮದ್ದು, ವಾರ್ಡ್ ಸ್ವಚ್ಚತೆ ಮನವಿ

ಮೈಸೂರು : ವಾರ್ಡ್ ನಂಬರ್ 49ರ ಲಕ್ಷ್ಮಿಪುರಂ ಭಾಗದ ಜಾನ್ಸಿ ರಾಣಿ ಲಕ್ಷ್ಮೀಬಾಯಿ ರಸ್ತೆಯಲ್ಲಿರುವ ಹೊಯ್ಸಳ ಕರ್ನಾಟಕ ಸಭಾಭವನದ ಪಕ್ಕದ ಲಕ್ಷ್ಮಿಪುರಂ 2ನೇ ಕ್ರಾಸ್ ನಲ್ಲಿ ಸತತವಾಗಿ ಸಾರ್ವಜನಿಕರು ಕಸವನ್ನು ಬಿಸಾಡುತ್ತಿದ್ದುದರಿಂದ ಸ್ಥಳೀಯ ನಿವಾಸಿಗಳಿಗೆ ತೊಂದರೆಯಾಗುತ್ತಿದ್ದ ಕಾರಣ ಇಂದು ಶಾಸಕರಾದ ಎಸ್ಎ ರಾಮದಾಸ್ ರವರ ಆದೇಶದ ಮೇರೆಗೆ ಸ್ಥಳೀಯ ನಗರಪಾಲಿಕೆ ಸದಸ್ಯರು ಮತ್ತು ನಗರ ಪಾಲಿಕೆಯ ಪೌರಕಾರ್ಮಿಕರ ತಂಡವು ಕಸವನ್ನು ಬಿಸಾಡಿರುವ ಸ್ಥಳಗಳಲ್ಲಿ ರಂಗೋಲಿ ಹಾಕುವ ಮೂಲಕ ಸ್ಷಚ್ಚತೆಯ ಬಗ್ಗೆ ಅರಿವು ಮೂಡಿಸಲಾಯಿತು.
ವಿವಿಧ ಪ್ರದೇಶಗಳಲಿದ್ದ ಕಸವನ್ನು ತೆರವುಗೊಳಿಸಿ ಅಲ್ಲಿ ರಂಗೋಲಿ ಹಾಕಿ ಅಲಂಕಾರವನ್ನು ಮಾಡುವ ಮೂಲಕ ಕಸ ಹಾಕಲು ಬರುವವರಿಗೆ ಗುಲಾಬಿ ಹೂನೀಡುವ ಮೂಲಕ ಸ್ವಚ್ಛತೆಗೆ ಸಹಕರಿಸುವಂತೆ ಮನವಿ ಮಾಡಿಕೊಳ್ಳಲಾಯಿತು.

ಬಳಿಕ  ಪೌರಕಾರ್ಮಿಕರು ಸಂಪೂರ್ಣ ಕಸದ ರಾಶಿಯನ್ನು ತೆಗೆದು ಒಳಚರಂಡಿ ಕಾರ್ಮಿಕರ ಜಟ್ಟಿಂಗ್ ವಾಹನದ ಮೂಲಕ ರಸ್ತೆಗೆ ನೀರನ್ನು ಸಿಂಪಡಿಸಿ ಗ್ಯಾಂಗ್ ಮ್ಯಾನ್ ಕಾರ್ಮಿಕರಿಂದ ಅಲ್ಲಿದ್ದ ಹಲವು ಗುಡ್ಡೆ ಮಣ್ಣುಗಳನ್ನು ತೆರವುಗೊಳಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ನಗರಪಾಲಿಕೆ ಸದಸ್ಯರಾದ ಸೌಮ್ಯ ಉಮೇಶ್ ರವರು, ನಗರಪಾಲಿಕೆ ಆರೋಗ್ಯ ಪರಿವೀಕ್ಷಕರಾದ ಪ್ರೀತಿ ಮತ್ತು ತಂಡ, ಒಳಚರಂಡಿ ಅಭಿಯಂತರರಾದ ಅರಸೇಗೌಡರು ಮತ್ತು ‌ತಂಡ, ವಾಟರ್ ಇನ್ಸ್ಪೆಕ್ಟರ್ ಮಧುರವರು, ವರ್ಕ್ ಇನ್ಸ್ಪೆಕ್ಟರ್ ಮಧು ಮತ್ತು ತಂಡದ ಮುಂತಾದವರು ಇಂದಿನ ಸ್ವಚ್ಛತೆಗೆ ಸಂಪೂರ್ಣ ಸಹಕರಿಸಿದರು.

ಇದರ ಜೊತೆಗೆ  ವಿಶೇಷವಾಗಿ ಇಂದಿನಿಂದ ರಾತ್ರಿ 9:00 ಯಿಂದ11 ಗಂಟೆಯವರೆಗೆ ಸ್ಥಳೀಯ ನಗರಪಾಲಿಕೆ ಸದಸ್ಯರು ಮತ್ತು ವಾರ್ಡಿನ ಪೌರಕಾರ್ಮಿಕ ಮೇಸ್ತ್ರಿಗಳು ಸ್ಥಳಕ್ಕೆ ಹಾಜರಾಗಿ ಈ ಭಾಗದಲ್ಲಿ ಕಸ ಹಾಕಲು ಬರುವ ಸಾರ್ವಜನಿಕರಿಗೆ ಕಸ ಹಾಕದಂತೆ ತಿಳಿಸಲಾಗುತ್ತದೆ

andolanait

Recent Posts

ವಿಬಿ ಜಿ ರಾಮ್ ಜಿ ಗೊಂದಲ ನಿವಾರಣೆ ಕೇಂದ್ರದ ಹೊಣೆ

ವಿಬಿ- ಜಿ ರಾಮ್ ಜಿ (ವಿಕಸಿತ್ ಭಾರತ್- ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ್)- ೨೦೨೫) ಕಾಯ್ದೆಯು…

2 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಿಎಂ ಶಿಶಿರ್ ಚಂದ್ರ ಏಕೆ ಕೆಳಗಿಳಿಯುತ್ತಿಲ್ಲ?

ಜನನಾಯಕ ಅನ್ನಿಸಿಕೊಂಡವರ ಅಧಿಕಾರ ಬದಲಿಸುವುದು ಅಷ್ಟು ಸುಲಭದ ಕೆಲಸವಲ್ಲ  ಅವತ್ತು ವಿಧಾನಸಭೆಯ ಮೊಗಸಾಲೆಗೆ ಪ್ರವೇಶ ಮಾಡುತ್ತಿದ್ದಂತೆಯೇ ಪತ್ರಕರ್ತ ರಾಕೇಶನ ಮುಖದಲ್ಲಿ…

2 hours ago

ರಂಗನತಿಟ್ಟು ಸಮೀಪ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ: ಪರ-ವಿರೋಧ ಅಭಿಪ್ರಾಯ

ಪರಿಸರ ಪ್ರೇಮಿಗಳು, ಸಾರ್ವಜನಿಕರ ಪರ-ವಿರೋಧ ಅಭಿಪ್ರಾಯ ಮಂಡ್ಯ: ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ ೨೭೫ರ ವಿಸ್ತೃತ ಮಾರ್ಗವಾದ…

2 hours ago

ಅಳಿವಿನತ್ತ ರಾಜ್ಯದ ಮೊದಲ ಬಾಲಕಿಯರ ಶಾಲೆ

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ಹೆಣ್ಣುಮಕ್ಕಳಿಗಾಗಿ ರಾಜ್ಯದಲ್ಲಿ ಸ್ಥಾಪಿಸಿದ ಮೊದಲ ಶಾಲೆ ಇದು. ಶತೋತ್ತರ ಅರ್ಧ…

2 hours ago

2ನೇ ಮದುವೆಗೆ ಸಜ್ಜಾಗಿದ್ದ ವರ : ಕಲ್ಯಾಣ ಮಂಟಪಕ್ಕೆ ಬಂದು ಮದುವೆ ನಿಲ್ಲಿಸಿದ ಮೊದಲ ಹೆಂಡತಿ!

ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…

8 hours ago