ಜಿಲ್ಲೆಗಳು

ಕಸ ಬಿಸಾಡುತ್ತಿದ್ದವರಿಗೆ ರಂಗೋಲಿ ಅಲಂಕಾರದ ಮದ್ದು, ವಾರ್ಡ್ ಸ್ವಚ್ಚತೆ ಮನವಿ

ಮೈಸೂರು : ವಾರ್ಡ್ ನಂಬರ್ 49ರ ಲಕ್ಷ್ಮಿಪುರಂ ಭಾಗದ ಜಾನ್ಸಿ ರಾಣಿ ಲಕ್ಷ್ಮೀಬಾಯಿ ರಸ್ತೆಯಲ್ಲಿರುವ ಹೊಯ್ಸಳ ಕರ್ನಾಟಕ ಸಭಾಭವನದ ಪಕ್ಕದ ಲಕ್ಷ್ಮಿಪುರಂ 2ನೇ ಕ್ರಾಸ್ ನಲ್ಲಿ ಸತತವಾಗಿ ಸಾರ್ವಜನಿಕರು ಕಸವನ್ನು ಬಿಸಾಡುತ್ತಿದ್ದುದರಿಂದ ಸ್ಥಳೀಯ ನಿವಾಸಿಗಳಿಗೆ ತೊಂದರೆಯಾಗುತ್ತಿದ್ದ ಕಾರಣ ಇಂದು ಶಾಸಕರಾದ ಎಸ್ಎ ರಾಮದಾಸ್ ರವರ ಆದೇಶದ ಮೇರೆಗೆ ಸ್ಥಳೀಯ ನಗರಪಾಲಿಕೆ ಸದಸ್ಯರು ಮತ್ತು ನಗರ ಪಾಲಿಕೆಯ ಪೌರಕಾರ್ಮಿಕರ ತಂಡವು ಕಸವನ್ನು ಬಿಸಾಡಿರುವ ಸ್ಥಳಗಳಲ್ಲಿ ರಂಗೋಲಿ ಹಾಕುವ ಮೂಲಕ ಸ್ಷಚ್ಚತೆಯ ಬಗ್ಗೆ ಅರಿವು ಮೂಡಿಸಲಾಯಿತು.
ವಿವಿಧ ಪ್ರದೇಶಗಳಲಿದ್ದ ಕಸವನ್ನು ತೆರವುಗೊಳಿಸಿ ಅಲ್ಲಿ ರಂಗೋಲಿ ಹಾಕಿ ಅಲಂಕಾರವನ್ನು ಮಾಡುವ ಮೂಲಕ ಕಸ ಹಾಕಲು ಬರುವವರಿಗೆ ಗುಲಾಬಿ ಹೂನೀಡುವ ಮೂಲಕ ಸ್ವಚ್ಛತೆಗೆ ಸಹಕರಿಸುವಂತೆ ಮನವಿ ಮಾಡಿಕೊಳ್ಳಲಾಯಿತು.

ಬಳಿಕ  ಪೌರಕಾರ್ಮಿಕರು ಸಂಪೂರ್ಣ ಕಸದ ರಾಶಿಯನ್ನು ತೆಗೆದು ಒಳಚರಂಡಿ ಕಾರ್ಮಿಕರ ಜಟ್ಟಿಂಗ್ ವಾಹನದ ಮೂಲಕ ರಸ್ತೆಗೆ ನೀರನ್ನು ಸಿಂಪಡಿಸಿ ಗ್ಯಾಂಗ್ ಮ್ಯಾನ್ ಕಾರ್ಮಿಕರಿಂದ ಅಲ್ಲಿದ್ದ ಹಲವು ಗುಡ್ಡೆ ಮಣ್ಣುಗಳನ್ನು ತೆರವುಗೊಳಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ನಗರಪಾಲಿಕೆ ಸದಸ್ಯರಾದ ಸೌಮ್ಯ ಉಮೇಶ್ ರವರು, ನಗರಪಾಲಿಕೆ ಆರೋಗ್ಯ ಪರಿವೀಕ್ಷಕರಾದ ಪ್ರೀತಿ ಮತ್ತು ತಂಡ, ಒಳಚರಂಡಿ ಅಭಿಯಂತರರಾದ ಅರಸೇಗೌಡರು ಮತ್ತು ‌ತಂಡ, ವಾಟರ್ ಇನ್ಸ್ಪೆಕ್ಟರ್ ಮಧುರವರು, ವರ್ಕ್ ಇನ್ಸ್ಪೆಕ್ಟರ್ ಮಧು ಮತ್ತು ತಂಡದ ಮುಂತಾದವರು ಇಂದಿನ ಸ್ವಚ್ಛತೆಗೆ ಸಂಪೂರ್ಣ ಸಹಕರಿಸಿದರು.

ಇದರ ಜೊತೆಗೆ  ವಿಶೇಷವಾಗಿ ಇಂದಿನಿಂದ ರಾತ್ರಿ 9:00 ಯಿಂದ11 ಗಂಟೆಯವರೆಗೆ ಸ್ಥಳೀಯ ನಗರಪಾಲಿಕೆ ಸದಸ್ಯರು ಮತ್ತು ವಾರ್ಡಿನ ಪೌರಕಾರ್ಮಿಕ ಮೇಸ್ತ್ರಿಗಳು ಸ್ಥಳಕ್ಕೆ ಹಾಜರಾಗಿ ಈ ಭಾಗದಲ್ಲಿ ಕಸ ಹಾಕಲು ಬರುವ ಸಾರ್ವಜನಿಕರಿಗೆ ಕಸ ಹಾಕದಂತೆ ತಿಳಿಸಲಾಗುತ್ತದೆ

andolanait

Recent Posts

ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನಿಂದ ಹಿಟ್‌ ಅಂಡ್‌ ರನ್:‌ ಸವಾರ ಸಾವು

ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರ ಸಾವನ್ನಪ್ಪಿರುವ…

43 mins ago

ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ

ಮೈಸೂರು: ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…

53 mins ago

ಬೆಳಗಾವಿ ಅಧಿವೇಶನದ ಬಳಿಕ ಡಿಕೆಶಿ ಸಿಎಂ ಆಗುತ್ತಾರೆ: ಶಾಸಕ ಇಕ್ಬಾಲ್‌ ಹುಸೇನ್‌

ಬೆಳಗಾವಿ: ಬೆಳಗಾವಿ ಅಧಿವೇಶನದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

1 hour ago

ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರ ಆತ್ಮಹತ್ಯೆ

ಬೆಂಗಳೂರು: ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಒಟ್ಟು 377 ಪ್ರಕರಣಗಳ ಪೈಕಿ…

1 hour ago

ಫಲಿತಾಂಶ ಯಶಸ್ವಿಗೊಳಿಸಲು ಶಾಲೆಯಲ್ಲೇ ವಾಸ್ತವ್ಯ ಹೂಡಿದ ಬಿಇಓ

ಎಚ್.ಡಿ.ಕೋಟೆ: ತಾಲ್ಲೂಕಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಿಸಲು ಶಿಕ್ಷಣಾಧಿಕಾರಿ ಸಿ.ಎನ್.ರಾಜು ಅವರು ಕಾಡಂಚಿನ ಶಾಲೆಗಳಲ್ಲಿ ರಾತ್ರಿ ವಾಸ್ತವ್ಯ ಹಮ್ಮಿಕೊಂಡಿದ್ದಾರೆ. ತಾಲ್ಲೂಕಿನ ಗಡಿಭಾಗದ…

2 hours ago

ದೊಡ್ಡಕವಲಂದೆಯಲ್ಲಿ ಗಬ್ಬೆದ್ದು ನಾರುತ್ತಿರುವ ಚರಂಡಿಗಳು: ಸಾಂಕ್ರಾಮಿಕ ರೋಗದ ಭೀತಿ

ನಂಜನಗೂಡು: ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ಚರಂಡಿಗಳು ಗಬ್ಬೆದ್ದು ನಾರುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ…

2 hours ago