ಚಾಮರಾಜನಗರ :.ನಗರದ ಸೋಮವಾರಪೇಟೆಯ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ದಿನನಿತ್ಯವೂ ಚರಂಡಿ ನೀರು ಹರಿದುಬರುತ್ತಿದ್ದು, ಅವ್ಯವಸ್ಥೆ ತಾಂಡವಾಡುತ್ತಿದೆ. ಮಾಮೂಲಿ ದಿನಗಳಲ್ಲಿ ಹೀಗಾದರೆ ಇನ್ನೂ ಮಳೆ ಬಂದರಂತೂ ಇಲ್ಲಿ ಸಂಚರಿಸುವುದು ದುಸ್ತರವಾಗುತ್ತಿದೆ. ಅದರಲ್ಲಿಯೂ ವಾಹನ ಸವಾರರು ಹಾಗೂ ಪ್ರತಿನಿತ್ಯ ತೆರಳುವ ಶಾಲಾ ಮಕ್ಕಳಿಗೆ ಕಿರಿಕಿರಿ ಉಂಟಾಗುತ್ತಿದೆ.
ರಾಷ್ಟ್ರೀಯ ಹೆದ್ದಾರಿಯ ಸಮೀಪವೇ ಇರುವ ಕ್ಲಬ್ ನಿಂದ ಬರುವ ಗಲೀಜು ನೀರು ರಸ್ತೆಗೆ ಹರಿದುಬರುತ್ತಿರುವ ಹಿನ್ನೆಲೆ ಸಂಚಾರಕ್ಕೆ ಯೊಂದರೆಯಾಗುತ್ತಿರುವುದಲ್ಲದೆ ನಿತ್ಯವೂ ಅಪಘಾತಗಳು ಸಂಭವಿಸುತ್ತಿವೆ. ಈ ಬಗ್ಗೆ ನಗರಸಭೆ ಹಾಗೂ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದರು ಸಹ ಯಾವುದೇ ಪ್ರಯೋಜನವಾಗಿಲ್ಲವೆನ್ನುತ್ತಾರೆ ಸ್ಥಳೀಯರು.
ಮುಂದಾದರು ಜಿಲ್ಲಾಧಿಕಾರಿಗಳೇ ಇಲ್ಲಿಗೆ ಭೇಟಿ ನೀಡಿ ಸಮಸ್ಯೆಯನ್ನು ಬಗೆಹರಿಸಬೇಕೆಂದು ಸಾರ್ವಜನಿಕರು ಪಟ್ಟು ಹಿಡಿದಿದ್ದಾರೆ.
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…
೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…