ಚಾಮರಾಜನಗರ :.ನಗರದ ಸೋಮವಾರಪೇಟೆಯ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ದಿನನಿತ್ಯವೂ ಚರಂಡಿ ನೀರು ಹರಿದುಬರುತ್ತಿದ್ದು, ಅವ್ಯವಸ್ಥೆ ತಾಂಡವಾಡುತ್ತಿದೆ. ಮಾಮೂಲಿ ದಿನಗಳಲ್ಲಿ ಹೀಗಾದರೆ ಇನ್ನೂ ಮಳೆ ಬಂದರಂತೂ ಇಲ್ಲಿ ಸಂಚರಿಸುವುದು ದುಸ್ತರವಾಗುತ್ತಿದೆ. ಅದರಲ್ಲಿಯೂ ವಾಹನ ಸವಾರರು ಹಾಗೂ ಪ್ರತಿನಿತ್ಯ ತೆರಳುವ ಶಾಲಾ ಮಕ್ಕಳಿಗೆ ಕಿರಿಕಿರಿ ಉಂಟಾಗುತ್ತಿದೆ.
ರಾಷ್ಟ್ರೀಯ ಹೆದ್ದಾರಿಯ ಸಮೀಪವೇ ಇರುವ ಕ್ಲಬ್ ನಿಂದ ಬರುವ ಗಲೀಜು ನೀರು ರಸ್ತೆಗೆ ಹರಿದುಬರುತ್ತಿರುವ ಹಿನ್ನೆಲೆ ಸಂಚಾರಕ್ಕೆ ಯೊಂದರೆಯಾಗುತ್ತಿರುವುದಲ್ಲದೆ ನಿತ್ಯವೂ ಅಪಘಾತಗಳು ಸಂಭವಿಸುತ್ತಿವೆ. ಈ ಬಗ್ಗೆ ನಗರಸಭೆ ಹಾಗೂ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದರು ಸಹ ಯಾವುದೇ ಪ್ರಯೋಜನವಾಗಿಲ್ಲವೆನ್ನುತ್ತಾರೆ ಸ್ಥಳೀಯರು.
ಮುಂದಾದರು ಜಿಲ್ಲಾಧಿಕಾರಿಗಳೇ ಇಲ್ಲಿಗೆ ಭೇಟಿ ನೀಡಿ ಸಮಸ್ಯೆಯನ್ನು ಬಗೆಹರಿಸಬೇಕೆಂದು ಸಾರ್ವಜನಿಕರು ಪಟ್ಟು ಹಿಡಿದಿದ್ದಾರೆ.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…