ಜಿಲ್ಲೆಗಳು

ನೀರು ಪರೀಕ್ಷಾ ಪ್ರಯೋಗಾಲಯ ಕಾಮಗಾರಿ ಪೂರ್ಣ

ಹೊಸ ಕಟ್ಟಡದಲ್ಲಿ ಜನವರಿಯಿಂದ ಕಾರ್ಯರಂಭ ಸಾಧ್ಯತೆ; ೫೦ ಲಕ್ಷ ರೂ. ವೆಚ್ಚದ ಕಾಮಗಾರಿ

ಪ್ರಸಾದ್ ಲಕ್ಕೂರು

ಚಾಮರಾಜನಗರ: ಕುಡಿಯುವ ನೀರು ಪರೀಕ್ಷಿಸಿ ಜನರಿಗೆ ಶುದ್ಧ ನೀರು ಪೂರೈಸಲು ನಿರ್ಮಿಸುತ್ತಿರುವ ಜಿಲ್ಲಾ ಕುಡಿಯುವ ನೀರಿನ ಗುಣಮಟ್ಟ ಪರೀಕ್ಷಾ ಪ್ರೋಂಗಾಲಯದ ಕಟ್ಟಡ ಕಾಮಗಾರಿ ಬಹುತೇಕ ಮುಕ್ತಾಯ ಹಂತದಲ್ಲಿದ್ದು, ಮುಂದಿನ ವರ್ಷದ ಜನವರಿುಂಲ್ಲಿ ಉದ್ಘಾಟನೆ ಭಾಗ್ಯ ದೊರಕಲಿದೆ.
ನಗರದ ನ್ಯಾಯಾಲಯ ರಸ್ತೆ ಬದಿಯಲ್ಲಿರುವ ಜಿಲ್ಲಾ ಪಂಚಾಯಿತಿಯ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಾಲಯ ಹಿಂಭಾಗ ಪ್ರೋಂಗಾಲಯದ ಕಟ್ಟಡ ಕಾಮಗಾರಿ ಭರದಿಂದ ಸಾಗಿದೆ. ಶೇ.೮೫ರಷ್ಟು ಕಾಮಗಾರಿ ಮುಕ್ತಾಯವಾಗಿದ್ದು, ಬಣ್ಣ ಬಳಿಯುವುದು ಮತ್ತು ಟೈಲ್ಸ್ ಅಳವಡಿಕೆ ಕಾರ್ಯ ಬಾಕಿಯಿದೆ.

ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಉಸ್ತುವಾರಿಯಲ್ಲಿ ೫೦.೮೮ ಲಕ್ಷ ರೂ.ಅಂದಾಜು ವೆಚ್ಚದ ಈ ಕಾಮಗಾರಿಯನ್ನು ಗುತ್ತಿಗೆದಾರ ಎಂ.ಎಸ್.ವಾದಯ್ಯ ನಿರ್ವಹಿಸುತ್ತಿದ್ದಾರೆ. ಕಳೆದ ಫೆಬ್ರುವರಿಯಲ್ಲಿ ಕಾಮಗಾರಿ ಆರಂಭವಾಗಿದ್ದು, ಆಗಸ್ಟ್‌ನಲ್ಲಿ ಮುಕ್ತಾಯ ಆಗಬೇಕಿತ್ತು. ಸತತ ಮಳೆ ಹಾಗೂ ಇತರೆ ಕಾರಣಗಳಿಂದ ೩ ತಿಂಗಳು ಮುಂದೂಡಲಾಗಿದೆ.

ಕಾರ್ಯ ವಿಧಾನ ಹೇಗೆ ?
ನಗರದಲ್ಲಿ ಜಿಲ್ಲಾ ಮಟ್ಟದ ಮತ್ತು ಕೊಳ್ಳೇಗಾಲದಲ್ಲಿ ತಾಲ್ಲೂಕು ಮಟ್ಟದ ಪ್ರಯೋಗಾಲಯ ನಿರ್ಮಾಣ ಕಾರ್ಯ ಚುರುಕುಗೊಂಡಿದೆ. ಚಾಮರಾಜನಗರ ಮತ್ತು ಗುಂಡ್ಲುಪೇಟೆ ತಾಲ್ಲೂಕುಗಳ ೩೪ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಗ್ರಾಮಗಳ ನೀರಿನ ಮಾದರಿಗಳನ್ನು ವರ್ಷಕ್ಕೆ ೨ ಬಾರಿ (ಮಳೆ ಪೂರ್ವ ಮತ್ತು ನಂತರ) ಸಂಗ್ರಹಿಸಿ ನಗರದಲ್ಲಿರುವ ಪ್ರಯೋಗಾಲಯದಲ್ಲಿ ಪರೀಕ್ಷೆ ಮಾಡಲಾಗುತ್ತದೆ.

ನೀರು ಕುಡಿಯಲು ಯೋಗ್ಯವಾಗಿದೆಯೇ, ಪ್ಲೋರೈಡ್ ಅಂಶ ಯಾವ ಪ್ರಮಾಣದಲ್ಲಿದೆ. ಗಡಸು ನೀರು ಇರಬಹುದೆ, ಏನಾದರೂ ಕಲುಷಿತವಾಗಿದೆಯೇ ಎಂಬುದರ ಕುರಿತು ಪರೀಕ್ಷೆ ನಡೆಸಿ ವರದಿ ಸಿದ್ಧಪಡಿಸಲಾಗುವುದು. ಸಂಬಂಧಪಟ್ಟ ಗುಂಡ್ಲುಪೇಟೆ ಮತ್ತು ಚಾ.ನಗರದ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಎಇಇ ಗಳಿಗೆ ವರದಿ ಸಲ್ಲಿಕೆ ಮಾಡಲಾಗುತ್ತದೆ.

ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭಿವೃದ್ಧಿ ಅಧಿಕಾರಿಗಳಿಗೆ ನೀರಿನ ಸ್ಥಿತಿಗತಿಯ ಬಗ್ಗೆ ಎಇಇಗಳು ತಿಳಿಸುತ್ತಾರೆ. ಕುಡಿಯಲು ಯೋಗ್ಯವಲ್ಲದ ನೀರಿದ್ದರೆ ಪರ್ಯಾಯ ನೀರಿನ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಲಿದ್ದಾರೆ ಎಂದು ಪ್ರಯೋಗಾಲಯದ ಕಿರಿಯ ನೀರು ಪರಿವೀಕ್ಷಕ ಅನಿಲಕುವಾರ್ ತಿಳಿಸಿದ್ದಾರೆ.

andolana

Recent Posts

ವೀರನಪುರ ಬಳಿ ಟಿಪ್ಪರ್ ಪಲ್ಟಿ: ಚಾಲಕ ಸಾವು

ಚಾಮರಾಜನಗರ: ತಾಲ್ಲೂಕಿನ ವೀರನಪುರ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರಲ್ಲಿ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.…

8 hours ago

ಮುಂದಿನ ದಿನಗಳಲ್ಲಿಯೂ ಬಂಜಾರ ಸಮುದಾಯದವರ ಜೊತೆಗೆ ಸದಾ ಬೆಂಬಲವಾಗಿರುತ್ತೇನೆ: ಬಿಜೆಪಿ ಒ.ಬಿ ಸಿ ಮೋರ್ಚಾ ಜಿಲ್ಲಾಧ್ಯಕ್ಷ ಜನಧ್ವನಿ ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಬಂಜಾರ ಸಮುದಾಯದ ಜನತೆಗೆ ಒಳ ಮೀಸಲಾತಿಯಲ್ಲಿ ಆಗಿರುವ ಅನ್ಯಾಯದ ಬಗ್ಗೆ…

8 hours ago

ಕರ್ನಾಟಕ ಸೋಲಿಸಿ ಮೊದಲ ಬಾರಿಗೆ ರಣಜಿ ಟ್ರೋಫಿ ಎತ್ತಿ ಹಿಡಿದ ಜಮ್ಮು-ಕಾಶ್ಮೀರ

ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್‌ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್‌ಗೆ ಬಂದು, ಜಮ್ಮು-ಕಾಶ್ಮೀರ…

12 hours ago

ಹನೂರಿನಲ್ಲಿ ವಿಜೃಂಭಣೆಯಿಂದ ನಡೆದ ಸೇವಾಲಾಲ್‌ ಜಯಂತಿ ಕಾರ್ಯಕ್ರಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…

12 hours ago

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಡಿ.ಕೆ.ಸುರೇಶ್‌

ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿಕೆ ನೀಡಿದ್ದಾರೆ. ಈ…

12 hours ago

ಸದ್ದಿಲ್ಲದೆ ಸಮಾಜಸೇವೆಗೆ ನಿಂತ ಎಂಬಿಶ್ರೀ ಪ್ರತಿಷ್ಠಾನ ತಂಡ

ಹೇಮಂತ್‌ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…

13 hours ago