ಜಿಲ್ಲೆಗಳು

ನೀರು ಪರೀಕ್ಷಾ ಪ್ರಯೋಗಾಲಯ ಕಾಮಗಾರಿ ಪೂರ್ಣ

ಹೊಸ ಕಟ್ಟಡದಲ್ಲಿ ಜನವರಿಯಿಂದ ಕಾರ್ಯರಂಭ ಸಾಧ್ಯತೆ; ೫೦ ಲಕ್ಷ ರೂ. ವೆಚ್ಚದ ಕಾಮಗಾರಿ

ಪ್ರಸಾದ್ ಲಕ್ಕೂರು

ಚಾಮರಾಜನಗರ: ಕುಡಿಯುವ ನೀರು ಪರೀಕ್ಷಿಸಿ ಜನರಿಗೆ ಶುದ್ಧ ನೀರು ಪೂರೈಸಲು ನಿರ್ಮಿಸುತ್ತಿರುವ ಜಿಲ್ಲಾ ಕುಡಿಯುವ ನೀರಿನ ಗುಣಮಟ್ಟ ಪರೀಕ್ಷಾ ಪ್ರೋಂಗಾಲಯದ ಕಟ್ಟಡ ಕಾಮಗಾರಿ ಬಹುತೇಕ ಮುಕ್ತಾಯ ಹಂತದಲ್ಲಿದ್ದು, ಮುಂದಿನ ವರ್ಷದ ಜನವರಿುಂಲ್ಲಿ ಉದ್ಘಾಟನೆ ಭಾಗ್ಯ ದೊರಕಲಿದೆ.
ನಗರದ ನ್ಯಾಯಾಲಯ ರಸ್ತೆ ಬದಿಯಲ್ಲಿರುವ ಜಿಲ್ಲಾ ಪಂಚಾಯಿತಿಯ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಾಲಯ ಹಿಂಭಾಗ ಪ್ರೋಂಗಾಲಯದ ಕಟ್ಟಡ ಕಾಮಗಾರಿ ಭರದಿಂದ ಸಾಗಿದೆ. ಶೇ.೮೫ರಷ್ಟು ಕಾಮಗಾರಿ ಮುಕ್ತಾಯವಾಗಿದ್ದು, ಬಣ್ಣ ಬಳಿಯುವುದು ಮತ್ತು ಟೈಲ್ಸ್ ಅಳವಡಿಕೆ ಕಾರ್ಯ ಬಾಕಿಯಿದೆ.

ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಉಸ್ತುವಾರಿಯಲ್ಲಿ ೫೦.೮೮ ಲಕ್ಷ ರೂ.ಅಂದಾಜು ವೆಚ್ಚದ ಈ ಕಾಮಗಾರಿಯನ್ನು ಗುತ್ತಿಗೆದಾರ ಎಂ.ಎಸ್.ವಾದಯ್ಯ ನಿರ್ವಹಿಸುತ್ತಿದ್ದಾರೆ. ಕಳೆದ ಫೆಬ್ರುವರಿಯಲ್ಲಿ ಕಾಮಗಾರಿ ಆರಂಭವಾಗಿದ್ದು, ಆಗಸ್ಟ್‌ನಲ್ಲಿ ಮುಕ್ತಾಯ ಆಗಬೇಕಿತ್ತು. ಸತತ ಮಳೆ ಹಾಗೂ ಇತರೆ ಕಾರಣಗಳಿಂದ ೩ ತಿಂಗಳು ಮುಂದೂಡಲಾಗಿದೆ.

ಕಾರ್ಯ ವಿಧಾನ ಹೇಗೆ ?
ನಗರದಲ್ಲಿ ಜಿಲ್ಲಾ ಮಟ್ಟದ ಮತ್ತು ಕೊಳ್ಳೇಗಾಲದಲ್ಲಿ ತಾಲ್ಲೂಕು ಮಟ್ಟದ ಪ್ರಯೋಗಾಲಯ ನಿರ್ಮಾಣ ಕಾರ್ಯ ಚುರುಕುಗೊಂಡಿದೆ. ಚಾಮರಾಜನಗರ ಮತ್ತು ಗುಂಡ್ಲುಪೇಟೆ ತಾಲ್ಲೂಕುಗಳ ೩೪ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಗ್ರಾಮಗಳ ನೀರಿನ ಮಾದರಿಗಳನ್ನು ವರ್ಷಕ್ಕೆ ೨ ಬಾರಿ (ಮಳೆ ಪೂರ್ವ ಮತ್ತು ನಂತರ) ಸಂಗ್ರಹಿಸಿ ನಗರದಲ್ಲಿರುವ ಪ್ರಯೋಗಾಲಯದಲ್ಲಿ ಪರೀಕ್ಷೆ ಮಾಡಲಾಗುತ್ತದೆ.

ನೀರು ಕುಡಿಯಲು ಯೋಗ್ಯವಾಗಿದೆಯೇ, ಪ್ಲೋರೈಡ್ ಅಂಶ ಯಾವ ಪ್ರಮಾಣದಲ್ಲಿದೆ. ಗಡಸು ನೀರು ಇರಬಹುದೆ, ಏನಾದರೂ ಕಲುಷಿತವಾಗಿದೆಯೇ ಎಂಬುದರ ಕುರಿತು ಪರೀಕ್ಷೆ ನಡೆಸಿ ವರದಿ ಸಿದ್ಧಪಡಿಸಲಾಗುವುದು. ಸಂಬಂಧಪಟ್ಟ ಗುಂಡ್ಲುಪೇಟೆ ಮತ್ತು ಚಾ.ನಗರದ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಎಇಇ ಗಳಿಗೆ ವರದಿ ಸಲ್ಲಿಕೆ ಮಾಡಲಾಗುತ್ತದೆ.

ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭಿವೃದ್ಧಿ ಅಧಿಕಾರಿಗಳಿಗೆ ನೀರಿನ ಸ್ಥಿತಿಗತಿಯ ಬಗ್ಗೆ ಎಇಇಗಳು ತಿಳಿಸುತ್ತಾರೆ. ಕುಡಿಯಲು ಯೋಗ್ಯವಲ್ಲದ ನೀರಿದ್ದರೆ ಪರ್ಯಾಯ ನೀರಿನ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಲಿದ್ದಾರೆ ಎಂದು ಪ್ರಯೋಗಾಲಯದ ಕಿರಿಯ ನೀರು ಪರಿವೀಕ್ಷಕ ಅನಿಲಕುವಾರ್ ತಿಳಿಸಿದ್ದಾರೆ.

andolana

Recent Posts

ಪಶ್ಚಿಮ ಬಂಗಾಳ ಎರಡನೇ ಹಂತದ ಚುನಾವಣೆ : ಏ.29ರಂದು ಮತದಾನ ; ಭಾರೀ ಬಿಗಿ ಭದ್ರತೆ

ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು,…

30 mins ago

ಅರಳುಮರಳು ಮಾತು, ಕ್ಷಮಿಸಿಬಿಡೋಣ : ಎಚ್.ವಿಶ್ವನಾಥ್ ಹೇಳಿಕೆಗೆ ಸಚಿವ ಮಧು ಬಂಗಾರಪ್ಪ ತಿರುಗೇಟು

ಶಿವಮೊಗ್ಗ : ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್‌ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ…

1 hour ago

ಭಾರತ-ನ್ಯೂಜಿಲೆಂಡ್‌ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ : 1.88 ಲಕ್ಷ ಕೋಟಿ ಹೂಡಿಕೆ

ನವದೆಹಲಿ : ಭಾರತ ಮತ್ತು ನ್ಯೂಜಿಲೆಂಡ್ ನಡುವೆ ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸೋಮವಾರ ನವದೆಹಲಿಯಲ್ಲಿ ʼಮುಕ್ತ…

2 hours ago

ಕಾಂಗ್ರೆಸ್ ಮಹಿಳಾ ವಿರೋಧಿ ಅಲ್ಲ, ಬಿಜೆಪಿಯದ್ದು ರಾಜಕೀಯ ಆಟ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ : ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು. ಆದರೆ…

3 hours ago

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ : ಶಾರಿಕ್‌ಗೆ 10 ವರ್ಷ ಜೈಲು

ಬೆಂಗಳೂರು : ಮಂಗಳೂರು ನಗರದಲ್ಲಿ ನಡೆದಿದ್ದ ಆತಂಕಕಾರಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್‌ನನ್ನು ದೋಷಿ…

3 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭದ್ರತಾ ಲೋಪ ಪ್ರಕರಣ | ಸಿಬ್ಬಂದಿಗಳಿಂದಲೇ ಕೃತ್ಯ ; ಇಬ್ಬರ ಬಂಧನ

ಬೆಂಗಳೂರು : ಐಪಿಎಲ್ ಪಂದ್ಯಗಳ ವೇಳೆ ಭದ್ರತೆ ನಿರ್ವಹಣೆಗಾಗಿ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳ ಸಂಪರ್ಕ ಕಡಿತಗೊಳಿಸುವ ಮೂಲಕ…

3 hours ago